ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿದ ಲಷ್ಕರ್ ಠಾಣಾ ಪೊಲೀಸರು…ಈಕೆ ಹೀಗೆ ಮಾಡಿದ್ದು ಯಾಕೆ ಗೊತ್ತಾ…?

ಲಾಡ್ಜ್ ನಲ್ಲಿ ಹೆತ್ತಮಗನನ್ನ ಬಿಟ್ಟು ಎಸ್ಕೇಪ್ ಆದ ಮಹಿಳೆ…ಕೆಲವೇ ಗಂಟೆಗಳಲ್ಲಿ ಪತ್ತೆ ಮಾಡಿದ ಲಷ್ಕರ್ ಠಾಣಾ ಪೊಲೀಸರು…ಈಕೆ ಹೀಗೆ ಮಾಡಿದ್ದು ಯಾಕೆ ಗೊತ್ತಾ…?

ಮೈಸೂರು,ಏ16,Tv10 ಕನ್ನಡ

ಲಾಡ್ಜ್ ನಲ್ಲಿ ಹೆತ್ತಮಗನನ್ನ ಒಂಟಿಯಾಗಿ ಬಿಟ್ಟ ಮಹಿಳೆ ಮಧ್ಯರಾತ್ರಿ ಧಢೀರ್ ನಾಪತ್ತೆಯಾದ ಘಟನೆ ಮೈಸೂರಿನ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ.ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಬಾಲಕನನ್ನ ತಮ್ಮ ವಶಕ್ಕೆ ಪಡೆದ ಪೊಲೀಸರು ಮಹಿಳೆಯನ್ನ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ತುಮಕೂರು ಮೂಲದ ಭಾರ್ಗವಿ ಮಗನನ್ನ ಲಾಡ್ಜ್ ನಲ್ಲಿ ಬಿಟ್ಟುಹೋದ ಮಹಿಳೆ.ಎರಡು ದಿನಗಳ ಹಿಂದೆ ಭಾರ್ಗವಿ ತನ್ನ ಮಗ ಶಶಾಂಕ್ ಜೊತೆ ಮೈಸೂರಿಗೆ ಬಂದು ವೈಶಾಖ್ ಹೋಟೆಲ್ ನಲ್ಲಿ ತಂಗಿದ್ದಾರೆ.ಇಂದು ಬೆಳಿಗ್ಗೆ ಚೆಕ್ ಔಟ್ ಇದ್ದ ಕಾರಣ ವ್ಯವಸ್ಥಾಪಕರಾದ ಅರುಣ್ ಕುಮಾರ್ ಕೊಠಡಿಗೆ ಬಂದಾಗ ಶಶಾಂಕ್ ಒಬ್ಬನೇ ಇರುವುದು ಬೆಳಕಿಗೆ ಬಂದಿದೆ.ತಾಯಿ ಹೊರಗೆ ಹೋಗಿರುವ ಬಗ್ಗೆ ಮಾಹಿತಿ ಇಲ್ಲದ ಕಾರಣ ಲಾಡ್ಜ್ ನ ಸಿಸಿ ಕ್ಯಾಮರಾದಲ್ಲಿ ಪರಿಶೀಲನೆ ಮಾಡಿದಾಗ ಭಾರ್ಗವಿ ರವರು ಮುಂಜಾನೆ 3 ಗಂಟೆ ವೇಳೆಯಲ್ಲಿ ಸೆಲ್ಲಾರ್ ಮೂಲಕ ನಿರ್ಗಮಿಸಿರುವ ದೃಶ್ಯ ಸೆರೆಯಾಗಿದೆ.ಕೂಡಲೇ ಬಾಲಕ ಶಶಾಂಕ್ ನ್ನ ಲಷ್ಕರ್ ಠಾಣೆಗೆ ಕರೆತಂದು ಪೊಲೀಸರ ವಶಕ್ಕೆ ನೀಡಿದ್ದಾರೆ.ಭಾರ್ಗವಿ ರವರ ಬಗ್ಗೆ ಹುಡುಕಾಟ ನಡೆಸಿದ ಪೊಲೀಸರಿಗೆ ಮಧ್ಯಾಹ್ನದ ವೇಳೆ ಪತ್ತೆಯಾಗಿದ್ದಾರೆ.

ಭಾರ್ಗವಿ ತಮ್ಮ ಗಂಡನಿಂದ ವಿಚ್ಛೇದನ ಪಡೆದಿದ್ದು ಮೈಸೂರಿನ ಯುವಕನೊಬ್ಬನೊಂದಿಗೆ ಸಂಪರ್ಕ ಬೆಳೆಸಿಕೊಂಡಿದ್ದಾಳೆ.ಯುವಕನ ಮನೆಗೆ ತೆರಳಿ ಭಾರ್ಗವಿ ರಂಪಾಟ ಮಾಡಿದ್ದಾಳೆಂದು ಹೇಳಲಾಗಿದೆ.ನಂತರ ಭಾರ್ಗವಿ ರವರ ಪೋಷಕರಿಗೆ ಪೊಲೀಸರು ವಿಚಾರ ಮುಟ್ಟಿಸಿದ್ದಾರೆ.ಬಾಲಕ ಶಶಾಂಕ್ ನ್ನ ಪೊಲೀಸರು ಬಾಲ ಮಂದಿರ ವಶಕ್ಕೆ ನೀಡಿದ್ದು ಇದೀಗ ಭಾರ್ಗವಿ ಹಾಗೂ ಶಶಾಂಕ್ ನ್ನ ಸುರಕ್ಷಿತವಾಗಿ ಪೋಷಕರನ್ನ ಸೇರಿಸಲು ಲಷ್ಕರ್ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ…

Spread the love

Related post

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…

Leave a Reply

Your email address will not be published. Required fields are marked *