ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಭಾಗಮಂಡಲ ಪೊಲೀಸರ ಮಿಂಚಿನ ಕಾರ್ಯಾಚರಣೆ…ಮನೆಗಳ್ಳರ ಬಂಧನ…ನಗದು ಸೇರಿದಂತೆ 14.50 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮಡಿಕೇರಿ,ಏ16,Tv10 ಕನ್ನಡ

ಮನೆ ಬಾಗಿಲು ಮೀಟಿ 15 ಲಕ್ಷ ಮೌಲ್ಯದ 232 ಗ್ರಾಂ ಚಿನ್ನಾಭರಣಗಳನ್ನ ಕಳುವು ಮಾಡಿದ ಚೋರರನ್ನ ಬಂಧಿಸುವಲ್ಲಿ ಭಾಗಮಂಡಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 14.50 ಲಕ್ಷ ಮೌಲ್ಯದ 177 ಗ್ರಾಂ ಚಿನ್ನಾಭರಣ,ಕೃತ್ಯಕ್ಕೆ ಬಳಸಿದ ಒಂದು ಯಮಹಾ ಬೈಕ್,2 ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಎಲ್.ಅರುಣ್ ರವರ ನೇತೃತ್ವದ ತಂಡದ ಯಶಸ್ವಿ ಕಾರ್ಯಾಚರಣೆಯನ್ನ ಜಿಲ್ಲಾ ಎಸ್ಪಿ ರಾಮರಾಜನ್ ರವರು ಪ್ರಶಂಸಿಸಿದ್ದಾರೆ.

ಮಡಿಕೇರಿ ಅಯ್ಯಂಗೇರಿ ಗ್ರಾಮದ ಮಿದ್ ಲಾಜ್ (22) ಹಾಗೂ ಈತನ ಪ್ರೇಯಸಿ ಫಾತಿಮಾ(26) ಬಂಧಿತರು.ಅಯ್ಯಂಗೇರಿ ಗ್ರಾಮದ ಜಲೀನಾ ಎಂಬುವರ ಮನೆ ಬಾಗಿಲು ಮೀಟಿ ಕೃತ್ಯವೆಸಗಿದ್ದ ಕಿಲಾಡಿ ಲವರ್ಸ್ ಇದೀಗ ಪೊಲೀಸರ ಅತಿಥಿಗಳು.

ಏಪ್ರಿಲ್ 12 ರಂದು ಜಲೀನಾ ರವರು ತಮ್ಮ ಸಂಭಂಧಿಕರ ಮನೆಗೆ ತೆರಳಿದ್ದರು.ಹಿಂದಿರುಗಿ ಬಂದಾಗ ಮನೆ ಬಾಗಿಲು ಮೀಟಿ 15,08,000/- ಮೌಲ್ಯದ 232 ಗ್ರಾಂ ಚಿನ್ನಾಭರಣಗಳನ್ನ ಕಳ್ಳರು ದೋಚಿದ್ದರು.ಈ ಸಂಭಂಧ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಡಿಕೇರಿ ಜಿಲ್ಲಾ ಎಸ್ಪಿ ರಾಮರಾಜನ್ ಮಾರ್ಗದರ್ಶನದಲ್ಲಿ ಹಾಗೂ ಅಡಿಷನಲ್ ಎಸ್ಪಿ ಸುಂದರರಾಜ್ ಉಸ್ತುವಾರಿಯಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ಅರುಣ್.ಎಲ್.ರವರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು.ಕ್ಷಿಪ್ರ ಕಾರ್ಯಾಚರಣೆ ನಡೆಸಿದ ತಂಡ ಘಟನೆ ನಡೆದ ಕೇವಲ 48 ಗಂಟೆಗಳಲ್ಲಿ ಆರೋಪಿಗಳನ್ನ ಸೆದೆಬಡಿಯುವಲ್ಲಿ ಯಶಸ್ವಿಯಾಗಿದೆ.

ವೃತ್ತನಿರೀಕ್ಷಕರಾದ ಅರುಣ್.ಎಲ್.ರವರ ತಂಡದಲ್ಲಿ ಎಸ್ಸೈಗಳಾದ ಶೋಭಾ ಲಮಾಣಿ,ನಾಪೋಕ್ಲು ಠಾಣೆಯ ಮಂಜುನಾಥ್ ಎಎಸ್ಸೈ ದಿನೇಶ್ ಹಾಗೂ ಸಿಬ್ಬಂದಿಗಳಾದ ರಾಮಪ್ಪ,ಲೋಕೇಶ್,ಮಧುಸೂಧನ್,ವಸಂತ,ಪ್ರೇಮ್ ಕುಮಾರ್,ಸುನಿಲ್ ಕುಮಾರ್,ಮಹದೇವಸ್ವಾಮಿ,ಪರಮೇಶ್,ನಾಗರಾಜ್ ಕಡಗಣ್ಣನವರ್,ಸಂಗಪ್ಪ,ಚೋಂದಮ್ಮ,ಶ್ರೀಶೈಲ ಬಿರಾದಾರ್,ಉಮೇಶ್,ಫರೀಫ್,ರಾಜೇಶ್,ಪ್ರವೀಣ್ ರವರು ಕಾರ್ಯಾಚರಣೆ ನಡೆಸಿ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.ಚುನಾವಣೆ ನಿಮಿತ್ತ ಮೈಸೂರಿನಿಂದ ಮಡಿಕೇರಿಗೆ ವರ್ಗಾವಣೆಯಾದ ಅರುಣ್ ಎಲ್ ರವರ ಮಿಂಚಿನ ಕಾರ್ಯಾಚರಣೆಯನ್ನ ಜಿಲ್ಲಾ ಎಸ್ಪಿ ಹಾಗೂ ಹೆಚ್ಚುವರಿ ಅಧೀಕ್ಷಕರು ಶ್ಲಾಘಿಸಿದ್ದಾರೆ…

Spread the love

Related post

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…
ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ…

ಗ್ರಾಮದೇವತೆ ಜಾತ್ರೆ ವಿಡಿಯೋ ಮಾಡಿದ್ರೆ ಹುಷಾರ್…30 ಸಾವಿರ ದಂಡ ಎಚ್ಚರಿಕೆ…ಡಂಗುರ ಸಾರಿ ಪ್ರಚಾರ… ನಂಜನಗೂಡು,ಫೆ9,Tv10 ಕನ್ನಡ ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ,ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30…
ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ.

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ…

ಅಂಬಿಕಾಪುರ ಗ್ರಾಮದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ. ಹನೂರು Tv10 ಕನ್ನಡ07/02/2026. ಹನೂರು :ರೈತಾಪಿ ವರ್ಗದ ಜನರು…

Leave a Reply

Your email address will not be published. Required fields are marked *