ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು,ಏ18,Tv10 ಕನ್ನಡ

ಮೈಸೂರಿನಲ್ಲಿ ನಕಲಿ ಫೆವಿಕ್ವಿಕ್ ಮಾರಾಟ ಮಾಡುತ್ತಿದ್ದ ಏಜೆನ್ಸಿ ಮೇಲೆ ದೇವರಾಜ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ ನಕಲಿ ಫೆವಿಕ್ವಿಕ್ ಗಳು ದೊರೆತಿದ್ದು ಏಜೆನ್ಸಿಯ ಮಾಲೀಕನನ್ನ ಬಂಧಿಸಿದ್ದಾರೆ.
ಸಂತೆಪೇಟೆಯಲ್ಲಿರುವ ಮಹೇಶ್ ಎಜೆನ್ಸಿ ಮಾರ್ಕೆಟಿಂಗ್ ಅಂಗಡಿಯಲ್ಲಿ pidilite ಕಂಪನಿ ಯ ನಕಲಿ Fevikwik ಗಳನ್ನ ಮಾರಾಟ ಮಾಡುತ್ತಿರುವ ಬಗ್ಗೆ ಕಂಪನಿಯ ಅಧಿಕೃತ ಪ್ರತಿನಿಧಿ ಯಾದ ಜಿ ಪೂಬಾಲನ್ ಹಾಗೂ ಶೇಕ್ ಖಾಸಿಂ ರವರಿಗೆ ಮಾಹಿತಿ ದೊರೆತಿದ್ದು ಎರಡು ದಿನಗಳ ಹಿಂದೆ ಅಂಗಡಿಯಿಂದ ಫೆವಿಕ್ವಿಕ್ ಖರೀದಿಸಿ ಪರಿಶೀಲನೆ ಮಾಡಿದಾಗ ಅಸಲು ಪ್ಯಾಕಿಂಗ್ ಅನ್ನು ಹೋಲಿಕೆ ಆಗುವಂತೆ ಡ್ಯೂಪ್ಲಿಕೇಟ್ ತಯಾರಿಸಿ ಮಾರಾಟ ಮಾಡುತ್ತಿರುವುದು ಖಚಿತವಾಗಿದೆ. ಈ ಹಿನ್ನಲೆ ಅಧಿಕಾರಿಗಳು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. FIR ದಾಖಲಿಸಿಕೊಂಡ ಪೊಲೀಸರು ಮಹೇಶ್ ಎಜೆನ್ಸಿಯ ಎರಡು ಅಂಗಡಿ ಗಳ ಮೇಲೆ ದಾಳಿ ನಡೆಸಿ ಒಟ್ಟು 1860 Fevikwik ಗಳನ್ನು ವಶಪಡಿಸಿಕೊಂಡು, ಅಂಗಡಿಯ ಮಾಲೀಕ ವರದಾರಾಮ್ ಬಿನ್ ಮೋಡಜಿ ಎಂಬಾತನನ್ನು ವಶಕ್ಕೆ ಪಡೆದು ನಕಲಿ Fevikwik ಬಂದ ಮೂಲದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ದಾಳಿ ಕಾರ್ಯಾಚರಣೆಯಲ್ಲಿ ದೇವರಾಜ ಠಾಣೆಯ ಇನ್ಸ್ ಪೆಕ್ಟರ್ ಟಿ. ಬಿ. ಶಿವಕುಮಾರ್, ಸಬ್ ಇನ್ಸ್ ಪೆಕ್ಟರ್ ಎಂ. ಜೈ ಕೀರ್ತಿ, Pidilite ಕಂಪನಿಯ ಪ್ರತಿನಿಧಿ ಪೂಬಾಲನ್, ಶೇಕ್ ಖಾಸಿಂ ಹಾಗೂ ಸಿಬ್ಬಂದಿ ಮಂಚನಾಯಕ್, ಶಿವರಾಜು, ಮನೋಹರ್, ಮಂಜುನಾಥ್ ಭಾಗವಹಿಸಿದ್ದರು.

ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ಅಪರಾದ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರು ಶ್ಲಾಘಿಸಿದ್ದಾರೆ…

Spread the love

Related post

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…

Leave a Reply

Your email address will not be published. Required fields are marked *