ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು:ನಕಲಿ ಫೆವಿಕ್ವಿಕ್ ಮಾರಾಟ…ಓರ್ವನ ಬಂಧನ…ದೇವರಾಜ ಠಾಣೆ ಪೊಲೀಸರ ಕಾರ್ಯಾಚರಣೆ…

ಮೈಸೂರು,ಏ18,Tv10 ಕನ್ನಡ

ಮೈಸೂರಿನಲ್ಲಿ ನಕಲಿ ಫೆವಿಕ್ವಿಕ್ ಮಾರಾಟ ಮಾಡುತ್ತಿದ್ದ ಏಜೆನ್ಸಿ ಮೇಲೆ ದೇವರಾಜ ಠಾಣೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ವೇಳೆ ನಕಲಿ ಫೆವಿಕ್ವಿಕ್ ಗಳು ದೊರೆತಿದ್ದು ಏಜೆನ್ಸಿಯ ಮಾಲೀಕನನ್ನ ಬಂಧಿಸಿದ್ದಾರೆ.
ಸಂತೆಪೇಟೆಯಲ್ಲಿರುವ ಮಹೇಶ್ ಎಜೆನ್ಸಿ ಮಾರ್ಕೆಟಿಂಗ್ ಅಂಗಡಿಯಲ್ಲಿ pidilite ಕಂಪನಿ ಯ ನಕಲಿ Fevikwik ಗಳನ್ನ ಮಾರಾಟ ಮಾಡುತ್ತಿರುವ ಬಗ್ಗೆ ಕಂಪನಿಯ ಅಧಿಕೃತ ಪ್ರತಿನಿಧಿ ಯಾದ ಜಿ ಪೂಬಾಲನ್ ಹಾಗೂ ಶೇಕ್ ಖಾಸಿಂ ರವರಿಗೆ ಮಾಹಿತಿ ದೊರೆತಿದ್ದು ಎರಡು ದಿನಗಳ ಹಿಂದೆ ಅಂಗಡಿಯಿಂದ ಫೆವಿಕ್ವಿಕ್ ಖರೀದಿಸಿ ಪರಿಶೀಲನೆ ಮಾಡಿದಾಗ ಅಸಲು ಪ್ಯಾಕಿಂಗ್ ಅನ್ನು ಹೋಲಿಕೆ ಆಗುವಂತೆ ಡ್ಯೂಪ್ಲಿಕೇಟ್ ತಯಾರಿಸಿ ಮಾರಾಟ ಮಾಡುತ್ತಿರುವುದು ಖಚಿತವಾಗಿದೆ. ಈ ಹಿನ್ನಲೆ ಅಧಿಕಾರಿಗಳು ದೇವರಾಜ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. FIR ದಾಖಲಿಸಿಕೊಂಡ ಪೊಲೀಸರು ಮಹೇಶ್ ಎಜೆನ್ಸಿಯ ಎರಡು ಅಂಗಡಿ ಗಳ ಮೇಲೆ ದಾಳಿ ನಡೆಸಿ ಒಟ್ಟು 1860 Fevikwik ಗಳನ್ನು ವಶಪಡಿಸಿಕೊಂಡು, ಅಂಗಡಿಯ ಮಾಲೀಕ ವರದಾರಾಮ್ ಬಿನ್ ಮೋಡಜಿ ಎಂಬಾತನನ್ನು ವಶಕ್ಕೆ ಪಡೆದು ನಕಲಿ Fevikwik ಬಂದ ಮೂಲದ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.

ದಾಳಿ ಕಾರ್ಯಾಚರಣೆಯಲ್ಲಿ ದೇವರಾಜ ಠಾಣೆಯ ಇನ್ಸ್ ಪೆಕ್ಟರ್ ಟಿ. ಬಿ. ಶಿವಕುಮಾರ್, ಸಬ್ ಇನ್ಸ್ ಪೆಕ್ಟರ್ ಎಂ. ಜೈ ಕೀರ್ತಿ, Pidilite ಕಂಪನಿಯ ಪ್ರತಿನಿಧಿ ಪೂಬಾಲನ್, ಶೇಕ್ ಖಾಸಿಂ ಹಾಗೂ ಸಿಬ್ಬಂದಿ ಮಂಚನಾಯಕ್, ಶಿವರಾಜು, ಮನೋಹರ್, ಮಂಜುನಾಥ್ ಭಾಗವಹಿಸಿದ್ದರು.

ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ,ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ಹಾಗೂ ಅಪರಾದ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರು ಶ್ಲಾಘಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *