ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮನೆಗೆ ನುಗ್ಗಿ ಮಹಿಳೆ ಅಪಹರಣ…6 ಮಂದಿ ತಂಡದಿಂದ ದುಷ್ಕೃತ್ಯ…ತಂಡದಲ್ಲಿ ಓರ್ವ ಮಹಿಳೆ ಭಾಗಿ…ಮಕ್ಕಳ ಮುಂದೆಯೇ ಕೃತ್ಯ…

ಮೈಸೂರು,ಏ23,Tv10 ಕನ್ನಡ

ಮಹಿಳೆ ಸೇರಿದಂತೆ 6 ಮಂದಿ ತಂಡವೊಂದು ಮನೆಗೆ ನುಗ್ಗಿ ಗೃಹಿಣಿಯನ್ನ ಬಲವಂತವಾಗಿ ಎಳೆದೊಯ್ದ ಘಟನೆ ಮೈಸೂರಿನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ ಎಜೆ ಬ್ಲಾಕ್ ನಲ್ಲಿ ನಡೆದಿದೆ.ಮಗ ಹಾಗೂ ಮಗಳ ಮುಂದೆಯೇ ತಾಯಿಯನ್ನ ದುಷ್ಕರ್ಮಿಗಳ ತಂಡ ಅಪಹರಿಸಿದೆ.ಸವಿತಾ(42) ಅಪಹರಣಕ್ಕೆ ಒಳಗಾದವರು. .ಮಗ ಶಶಾಂಕ್ ಹಾಗೂ ಮಗಳು ಅರುಣ ಕಣ್ಣೆದುರೇ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದ್ದಾರೆ.ಏ.21 ರಂದು ಘಟನೆ ನಡೆದಿದ್ದು ಎನ್.ಆರ್.ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯನ್ನ ರಕ್ಷಿಸಿದ್ದಾರೆ.ಏ21 ರ ರಾತ್ರಿ ಏಕಾ ಏಕಿ ಮನೆಗೆ ನುಗ್ಗಿದ 6 ಮಂದಿ ಮನೋಜ್ ನ ಎಲ್ಲಿ ಇರಿಸಿದ್ದೀಯ ಎಂದು ಪ್ರಶ್ನಿಸುತ್ತಾ ಸವಿತಾ ರವರ ಜುಟ್ಟನ್ನ ಹಿಡಿದು ಎಳೆದಾಡಿದ್ದಾರೆ.ಬಿಡಿಸಲು ಬಂದ ಶಶಾಂಕ್ ಮೇಲೆ ಹಲ್ಲೆ ನಡೆಸಿದ್ದಾರೆ.ನಂತರ ಮಗಳು ಅರಣ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನ ಕಸಿದಿದ್ದಾರೆ.ಸವಿತಾರನ್ನ ಡಸ್ಟರ್ ಕಾರಿನಲ್ಲಿ ಹಾಕಿಕೊಂಡು ಬಲವಂತವಾಗಿ ಕರೆದೊಯ್ದಿದ್ದಾರೆ.ಈ ಸಂಭಂಧ ಶಶಾಂಕ್ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸರಿತಾರನ್ನ ರಕ್ಷಿಸಿದ್ದು ಘಟನೆಗೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *