ಲೋಕಸಮರ…ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ…ಸೂಕ್ತ ಭದ್ರತೆ…

ಲೋಕಸಮರ…ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ…ಸೂಕ್ತ ಭದ್ರತೆ…

ಮೈಸೂರು,ಏ25,Tv10 ಕನ್ನಡ

ನಾಳೆ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಭಾರಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಮೈಸೂರಿನ ನಗರ ವ್ಯಾಪ್ತಿಯಲ್ಲಿ ಅರಸೇನಾ ಪಡೆ ಸೇರಿದಂತೆ ಒಟ್ಟು 2,402 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಮತದಾನ ಪ್ರಕ್ರಿಯೆಯಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದೆ.
ಭದ್ರತೆ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಮಾಹಿತಿ ನೀಡಿದರು. ನಗರದಾದ್ಯಂತ ಸ್ಥಾಪಿಸಿರುವ 2202 ಮತಗಟ್ಟೆಗಳಲ್ಲಿ 41 ಅತಿ ಸೂಕ್ಷ್ಮ ಮತ್ತು 435 ಸೂಕ್ಷ್ಮ ಎಂದು ಗುರುತಿಸಲಾಗಿದೆ ಹಾಗೂ ನಿರ್ಭೀತಿಯಿಂದ ಮತದಾನ ನಡೆಯಲು ವ್ಯಾಪಕ ಭದ್ರತೆಯನ್ನು ಕೈಗೊಳ್ಳಲಾಗಿದೆ.177 ಮಂದಿ ಅರಸೇನಾಪಡೆ ಸಿಬ್ಬಂದಿಯೊಳಗೊಂಡಂತೆ ಎರಡು ಸ್ಟ್ರೈಕಿಂಗ್ ಫೋರ್ಸ್, 120 ಕೆ ಎಸ್ ಆರ್ ಪಿ ಸಿಬ್ಬಂದಿ ಮತ್ತು 66 ಕಮಾಂಡೋ ಪಡೆ ಸಿಬ್ಬಂದಿಯನ್ನು ಮೈಸೂರು ನಗರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ನಿಯೋಜನೆ ಮಾಡಲಾಗಿದೆ.
ಮೈಸೂರು ಜಿಲ್ಲೆಯಾದ್ಯಂತ ಎಸ್ ಪಿ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಬಾರಿ ಬಂದೋಬಸ್ತ್ ಮಾಡಲಾಗಿದೆ.
ಓರ್ವ ಎಸ್ ಪಿ ಇಬ್ಬರು ಅಡಿಷನಲ್ ಎಸ್ಪಿ, ಎಂಟು ಡಿವೈಎಸ್ಪಿಗಳು, 30 ಪೊಲೀಸ್ ಇನ್ಸ್ಪೆಕ್ಟರ್ ಗಳು, 81 ಸಬ್ ಇನ್ಸ್ಪೆಕ್ಟರ್ ಗಳು, 110 ಎ ಎಸ್ ಪಿ ಗಳು, 431 ಹೆಡ್ ಕಾನ್ಸ್ಟೇಬಲ್ ಗಳು, 1186 ಕಾನ್ಸ್ಟೇಬಲ್ ಹಾಗೂ 320 ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿ ಸೇರಿ 3500 ಪೊಲೀಸರನ್ನು ಮತದಾನದ ಭದ್ರತೆಗೆ ನಿಯೋಜಿಸಲಾಗಿದೆ.

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *