ಲೋಕಸಮರ…ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ…ಸೂಕ್ತ ಭದ್ರತೆ…

ಲೋಕಸಮರ…ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ…ಸೂಕ್ತ ಭದ್ರತೆ…

ಮೈಸೂರು,ಏ25,Tv10 ಕನ್ನಡ

ನಾಳೆ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ನಗರ ಹಾಗೂ ಜಿಲ್ಲೆಯಾದ್ಯಂತ ಭಾರಿ ಭದ್ರತೆಯನ್ನು ಕೈಗೊಳ್ಳಲಾಗಿದೆ.
ಮೈಸೂರಿನ ನಗರ ವ್ಯಾಪ್ತಿಯಲ್ಲಿ ಅರಸೇನಾ ಪಡೆ ಸೇರಿದಂತೆ ಒಟ್ಟು 2,402 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಮತದಾನ ಪ್ರಕ್ರಿಯೆಯಲ್ಲಿ ಭದ್ರತೆಗಾಗಿ ನಿಯೋಜಿಸಲಾಗಿದೆ.
ಭದ್ರತೆ ಕುರಿತು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಮಾಹಿತಿ ನೀಡಿದರು. ನಗರದಾದ್ಯಂತ ಸ್ಥಾಪಿಸಿರುವ 2202 ಮತಗಟ್ಟೆಗಳಲ್ಲಿ 41 ಅತಿ ಸೂಕ್ಷ್ಮ ಮತ್ತು 435 ಸೂಕ್ಷ್ಮ ಎಂದು ಗುರುತಿಸಲಾಗಿದೆ ಹಾಗೂ ನಿರ್ಭೀತಿಯಿಂದ ಮತದಾನ ನಡೆಯಲು ವ್ಯಾಪಕ ಭದ್ರತೆಯನ್ನು ಕೈಗೊಳ್ಳಲಾಗಿದೆ.177 ಮಂದಿ ಅರಸೇನಾಪಡೆ ಸಿಬ್ಬಂದಿಯೊಳಗೊಂಡಂತೆ ಎರಡು ಸ್ಟ್ರೈಕಿಂಗ್ ಫೋರ್ಸ್, 120 ಕೆ ಎಸ್ ಆರ್ ಪಿ ಸಿಬ್ಬಂದಿ ಮತ್ತು 66 ಕಮಾಂಡೋ ಪಡೆ ಸಿಬ್ಬಂದಿಯನ್ನು ಮೈಸೂರು ನಗರ ವ್ಯಾಪ್ತಿಯ ಮತಗಟ್ಟೆಗಳಲ್ಲಿ ನಿಯೋಜನೆ ಮಾಡಲಾಗಿದೆ.
ಮೈಸೂರು ಜಿಲ್ಲೆಯಾದ್ಯಂತ ಎಸ್ ಪಿ ಸೀಮಾ ಲಾಟ್ಕರ್ ಅವರ ನೇತೃತ್ವದಲ್ಲಿ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಿ ಬಾರಿ ಬಂದೋಬಸ್ತ್ ಮಾಡಲಾಗಿದೆ.
ಓರ್ವ ಎಸ್ ಪಿ ಇಬ್ಬರು ಅಡಿಷನಲ್ ಎಸ್ಪಿ, ಎಂಟು ಡಿವೈಎಸ್ಪಿಗಳು, 30 ಪೊಲೀಸ್ ಇನ್ಸ್ಪೆಕ್ಟರ್ ಗಳು, 81 ಸಬ್ ಇನ್ಸ್ಪೆಕ್ಟರ್ ಗಳು, 110 ಎ ಎಸ್ ಪಿ ಗಳು, 431 ಹೆಡ್ ಕಾನ್ಸ್ಟೇಬಲ್ ಗಳು, 1186 ಕಾನ್ಸ್ಟೇಬಲ್ ಹಾಗೂ 320 ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿ ಸೇರಿ 3500 ಪೊಲೀಸರನ್ನು ಮತದಾನದ ಭದ್ರತೆಗೆ ನಿಯೋಜಿಸಲಾಗಿದೆ.

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *