ಸುತ್ತೂರು ಶ್ರೀಗಳಿಂದ ಮತದಾನ…ಕಡ್ಡಾಯವಾಗಿ ಮತ ಚಲಾಯಿಸುವಂತೆ ಕರೆ…
- TV10 Kannada Exclusive
- April 26, 2024
- No Comment
- 197
ನಂಜನಗೂಡು,ಏ26,Tv10 ಕನ್ನಡ
ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಗಳು ಮತಚಲಾಯಿಸಿದರು.ನಂತರ ಮಾತನಾಡಿ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನ ಮಾಡಬೇಕು ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕು ಎಂದು ಕರೆ ನೀಡಿದರು.ಶ್ರೀಮಠದಿಂದ ನೇರವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆ ಕೇಂದ್ರಕ್ಕೆ ತೆರಳಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಂಡರು.
ಐದು ವರ್ಷಗಳಿಗೊಮ್ಮೆ ಬರುವ ಚುನಾವಣೆಯಲ್ಲಿ ನಾವು ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಮತ ಹಾಕುವ ಹಕ್ಕನ್ನು ನೀಡಿದ್ದಾರೆ.
ದಾನದಲ್ಲಿ ಶ್ರೇಷ್ಠ ದಾನ ಮತದಾನವಾಗಿದೆ. ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದು ಕರೆ ನೀಡಿದರು…