ದಾಖಲೆ ಇಲ್ಲದ 81.90 ಲಕ್ಷ ಹಣ ಸೀಜ್…ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಶ…

ದಾಖಲೆ ಇಲ್ಲದ 81.90 ಲಕ್ಷ ಹಣ ಸೀಜ್…ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ ವಶ…

ಮೈಸೂರು,ಏ25,Tv10 ಕನ್ನಡ

ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 81,90,900/- ರೂ ನಗದು ವಶಪಡಿಸಿಕೊಳ್ಳಲಾಗಿದೆ.ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದ ಹಣ ದೊರೆತಿದೆ.ಮೂರು ಮಂದಿ KA 09 MB 4996 ನೊಂದಣೆ ಸಂಖ್ಯೆಯ ಕಾರಿನಲ್ಲಿ ಸಾಗಿಸಲಾಗುತ್ತಿದ್ದರು.ದಾಖಲೆಗಳನ್ನ ಒದಗಿಸದ ಕಾರಣ ಹಣ ಸೀಜ್ ಮಾಡಲಾಗಿದೆ.ಖಾಸಗಿ ಸಂಸ್ಥೆಯ ಹಣ ಎಂದು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಆದ್ರೆ ಇದಕ್ಕೆ ಸೂಕ್ತ ದಾಖಲೆಗಳು ಒದಗಿಸುವಲ್ಲಿ ವಿಫಲರಾಗಿದ್ದಾರೆ.ಎಟಿಎಂ ನಲ್ಲಿ ಹಣ ಡೆಪಾಸಿಟ್ ಮಾಡಲು ಹಣ ಸಾಗಿಸುತ್ತಿರುವುದಾಗಿ ತಿಳಿಸಿದ್ದಾರೆ.ಭಾರಿ ಮೊತ್ತದ ಹಣ ಸಾಗಿಸುವ ವೇಳೆ ಸೂಕ್ತ ಭದ್ರತೆ ಇಲ್ಲದೆ ಇರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.FST ಕಾರಿಯಪ್ಪ SST ನವೀನ್ ಸಿ ರವರ ತಂಡ ತಪಾಸಣೆ ನಡೆಸುವ ವೇಳೆ ಹಣ ದೊರೆತಿದೆ.ಉಪವಿಭಾಗಾಧಿಕಾರಿ ನಂದೀಶ್ ಹಾಗೂ ತಹಸೀಲ್ದಾರ್ ಮಹೇಶ್ ಕುಮಾರ್ ಹಾಗೂ ಉಪತಹಸೀಲ್ದಾರ್ ವಿಶ್ವನಾಥ್ ಸಮ್ಮುಖದಲ್ಲಿ ಜಪ್ತಿ ಮಾಡಲಾದ ಹಣವನ್ನ ಜಿಲ್ಲಾ ಖಜಾನೆಗೆ ರವಾನಿಸಲಾಗಿದೆ.ಮಾಹಿತಿಯನ್ನ ಐಟಿ ಅಧಿಕಾರಿಗಳಿಗೂ ಸಹ ನೀಡಲಾಗಿದೆ.ಕಾರ್ಯಾಚರಣೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳಾದ ಗುರುಚೇತನ್,ಸತೀಶ್ ಪಾಲ್ ಹಾಗೂ ಮಹೇಶ್ ಭಾಗಿಯಾಗಿದ್ದಾರೆ….

Spread the love

Related post

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ…

ಮಂಡ್ಯ:ಬಾಲಕಿಯರ ಕ್ರೀಡಾ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ… ಮಂಡ್ಯ,ಮೇ13,Tv10 ಕನ್ನಡ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಇಂದು ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಬಾಲಕಿಯರ ಕ್ರೀಡಾ ವಸತಿನಿಲಯಕ್ಕೆ ಭೇಟಿ ನೀಡಿ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…
ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಕಲುಷಿತ ನೀರು ಸೇವನೆ…25 ಕ್ಕೂ ಹೆಚ್ಚು ಮಂದಿ ಅಸ್ವಸ್ಥ…

ಮೈಸೂರು,ಮೇ12,Tv10 ಕನ್ನಡ ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆಹುಣಸೂರು ತಾಲ್ಲೂಕು ಕಡೇಮನುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಸ್ವಸ್ಥರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಗ್ರಾಮ ಪಂಚಾಯ್ತಿ ಯಿಂದ ಮನೆಗಳಿಗೆ…

Leave a Reply

Your email address will not be published. Required fields are marked *