ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡು ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಅಂದರ್…

ಐಪಿಎಲ್ ಬೆಟ್ಟಿಂಗ್ ನಲ್ಲಿ ಹಣ ಕಳೆದುಕೊಂಡು ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಅಂದರ್…

ಮೈಸೂರು,ಏ30,Tv10 ಕನ್ನಡ

ಐಪಿಎಲ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಕಳೆದುಕೊಂಡು ಮಾಡಿದ್ದ ಸಾಲ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದ ಸಿವಿಲ್ ಇಂಜಿನಿಯರ್ ಇದೀಗ ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾನೆ.ಮಂಡ್ಯ ಜಿಲ್ಲೆ ಗೆಂಡೆಕೊಪ್ಪಲು ಗ್ರಾಮದ ಕೇಶವ (26) ಬಂಧಿತ ಆರೋಪಿಯಾಗಿದ್ದು ಈತನಿಂದ 1.20 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನಗಳನ್ನ ವಶಪಡಿಸಿಕೊಳ್ಳಲಾಗಿದೆ.
ಬಿಇ ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಕೇಶವ ಕಳೆದ ಮೂರು ವರ್ಷಗಳಿಂದ ಐಪಿಎಲ್ ಬೆಟ್ಟಿಂಗ್ ದಂಧೆಗೆ ದಾಸನಾಗಿ 3 ಲಕ್ಷ ಹಣ ಕಳೆದುಕೊಂಡಿದ್ದ.ಸಾಲ ಹೆಚ್ಚಾದ ಹಿನ್ನಲೆ ತೀರಿಸಲು ಬೈಕ್ ಕಳ್ಳತನಕ್ಕೆ ಇಳಿದಿದ್ದ.ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳುವು ಮಾಡಿ ಸಿಕ್ಕಿಬಿದ್ದ ಕೇಶವ ನಿಂದ ಸಧ್ಯ ಪೊಲೀಸರು 2 ವಾಹನಗಳನ್ನ ವಶಪಡಿಸಿಕೊಂಡಿದ್ದಾರೆ.ಈ ಹಿಂದೆ ಈತ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನ ಕಳುವು ಮಾಡಿದ 8 ಪ್ರಕರಣಗಳಿವೆ.ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರೂ ಐಪಿಎಲ್ ಬೆಟ್ಟಿಂಗ್ ಹುಚ್ಚಿನಿಂದ ದಾರಿತಪ್ಪಿ ಇದೀಗ ಬೈಕ್ ಕಳ್ಳನಾಗಿರುವ ಕೇಶವ ಜೈಲು ಕಂಬಿ ಎಣಿಸುತ್ತಿದ್ದಾನೆ.

ಅಪರಾಧ ಮತ್ತು ಸಂಚಾರ ಡಿಸಿಪಿ ರವರಾದ ಜಾಹ್ನವಿ ರವರ ಮಾರ್ಗದರ್ಶನದಲ್ಲಿ ಕೆಆರ್ ವಿಭಾಗದ ಎಸಿಪಿ ರಮೇಶ್ ಕುಮಾರ್ ಉಸ್ತುವಾರಿಯಲ್ಲಿ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಯೋಗೇಶ್ ಹಾಗೂ ಪಿಎಸ್ಸೈ ಗೋಪಾಲ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಂಜುನಾಥ್,ಆನಂದ್,ಹಜರತ್ ಆಲಿ,ಸುರೇಶ್ ಹಾಗೂ ನಾಗೇಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.

ನಗರ ಪೊಲೀಸ್ ಆಯುಕ್ತ ಡಾ.ಬಿ.ರಮೇಶ್ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಮುತ್ತುರಾಜ್ ರವರು ಯಶಸ್ವಿ ಕಾರ್ಯಾಚರಣೆಯನ್ನ ಪ್ರಶಂಸಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *