ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ಮೈಸೂರು,ಮೇ1,Tv10 ಕನ್ನಡ

ಯುಕನನ್ನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು ಹಾಗೂ ಚಿನ್ನಾಭರಣ ದೋಚಿದ್ದ ಮೂವರು ಖದೀಮರನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ತಾಲೂಕಿನ ಕಾಮನಕೆರೆ ಹುಂಡಿಯ ರಾಹುಲ್(20), ಬೆಳವಾಡಿಯ ಅಖಿಲೇಶ್(19) ಮತ್ತು ಹೂಟಗಳ್ಳಿಯ ನಂದೀಶ್(19) ಬಂಧಿತರು. ನ್ಯಾಯಾಂಗ
ಈ ಮೂವರು ನಗರದ ರೇಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ತೆರಳುತ್ತಿದ್ದ ಯುವಕ ಚಿರಾಗ್ ಜೈನ್ ಎಂಬಾತನನ್ನ ಅಡ್ಡಗಟ್ಟಿ ಕಾರಿನ ಸಮೇತ ಅಪಹರಿಸಿ ಯಶಸ್ವಿನಿ ಕಲ್ಯಾಣ ಮಂಟಪದ ಬಳಿಗೆ ಕರೆದೊಯ್ದು. ನಗದು 2 ಸಾವಿರ ನಗದು 39 ಗ್ರಾಂ ತೂಕದ ಎರಡು ಚಿನ್ನದ ಸರ ದೋಚಿ ಇಡೀ ರಾತ್ರಿ ಬಂಧನದಲ್ಲಿರಿಸಿಕೊಂಡು ನಂತರ ಬಿಡುಗಡೆ ಮಾಡಿದ್ದಾರೆ.
ಸಿದ್ದಾರ್ಥನಗರದ ನಿವಾಸಿ ಚಿರಾಗ್ ಜೈನ್(23) ಶನಿವಾರ ತಡ ರಾತ್ರಿ ರಾಜಸ್ತಾನದಿಂದ ಆಜ್ಮೀರ್ ಎಕ್ಸ್‌ಪ್ರೈಸ್ ರೈಲಿನಲ್ಲಿ ಬಂದಿದ್ದ ತಂದೆ-ತಾಯಿಯನ್ನು ಕರೆದುಕೊಂಡು ಹೋಗಲು ರೈಲ್ವೆ ನಿಲ್ದಾಣದ ಹಿಂಭಾಗದ ಗೇಟ್ ಕಡೆ ಹೋಗುತ್ತಿದ್ದಾಗ ಸ್ಕೂಟರ್‌ನಲ್ಲಿ ನಿಂತಿದ್ದ ಈ ಮೂವರು ಅಡ್ಡಗಟ್ಟಿ ಕಾರನ್ನು ನಿಲ್ಲಿಸಿ ಗಲಾಟೆ ಮಾಡಿ ಕಾರಿನಿಂದ ಚಿರಾಗ್ ಜೈನ್ ನನ್ನು ಇಳಿಸಿದ್ದಾರೆ.
ಬಳಿಕ ಮೂವರಲ್ಲಿ ಒಬ್ಬಾತ ಚಿರಾಗ್ ಜೈನ್‌ನನ್ನು ಹೆದರಿಸಿ ಕಾರಿನಲ್ಲಿ ಕುಳಿತುಕೊಂಡು ಹುಣಸೂರು ರಸ್ತೆಯ ಮೂಲಕ ಹೂಟಗಳ್ಳಿ ಕಡೆ ಬಂದಿದ್ದಾರೆ.ಜೊತೆಗಿದ್ದವರು ಸ್ಕೂಟರ್‌ನಲ್ಲಿ ಹಿಂಬಾಲಿಸಿದ್ದಾರೆ.
ಹೂಟಗಳ್ಳಿ ಬಳಿ ಕಾರನ್ನು ನಿಲ್ಲಿಸಿ 39 ಗ್ರಾಂ ತೂಕದ 2 ಚಿನ್ನದ ಸರ, ಮೊಬೈಲ್ ಹಾಗೂ 2 ಸಾವಿರ ರೂ. ನಗದನ್ನು ಕಿತ್ತುಕೊಂಡಿದ್ದಾರೆ. ಬೆಳಗಿನ ಜಾವ 5 ಗಂಟೆಯವರೆಗೆ ಅಲ್ಲೇ ಇರಿಸಿಕೊಂಡು ಬಳಿಕ ಕಾರಿನ ಕೀ ಕೊಟ್ಟು ಕಳುಹಿಸಿದ್ದಾರೆ.
ಈ ಸಂಬಂಧ ಚಿರಾಗ್ ಜೈನ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *