ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಯುವಕನನ್ನು ಅಪಹರಿಸಿ ನಗದು,ಚಿನ್ನಾಭರಣ ದೋಚಿದ್ದ ಮೂವರು ಖದೀಮರ ಬಂಧನ…

ಮೈಸೂರು,ಮೇ1,Tv10 ಕನ್ನಡ

ಯುಕನನ್ನ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ನಗದು ಹಾಗೂ ಚಿನ್ನಾಭರಣ ದೋಚಿದ್ದ ಮೂವರು ಖದೀಮರನ್ನ ಬಂಧಿಸುವಲ್ಲಿ ವಿವಿ ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೈಸೂರು ತಾಲೂಕಿನ ಕಾಮನಕೆರೆ ಹುಂಡಿಯ ರಾಹುಲ್(20), ಬೆಳವಾಡಿಯ ಅಖಿಲೇಶ್(19) ಮತ್ತು ಹೂಟಗಳ್ಳಿಯ ನಂದೀಶ್(19) ಬಂಧಿತರು. ನ್ಯಾಯಾಂಗ
ಈ ಮೂವರು ನಗರದ ರೇಲ್ವೆ ನಿಲ್ದಾಣದ ಬಳಿ ಕಾರಿನಲ್ಲಿ ತೆರಳುತ್ತಿದ್ದ ಯುವಕ ಚಿರಾಗ್ ಜೈನ್ ಎಂಬಾತನನ್ನ ಅಡ್ಡಗಟ್ಟಿ ಕಾರಿನ ಸಮೇತ ಅಪಹರಿಸಿ ಯಶಸ್ವಿನಿ ಕಲ್ಯಾಣ ಮಂಟಪದ ಬಳಿಗೆ ಕರೆದೊಯ್ದು. ನಗದು 2 ಸಾವಿರ ನಗದು 39 ಗ್ರಾಂ ತೂಕದ ಎರಡು ಚಿನ್ನದ ಸರ ದೋಚಿ ಇಡೀ ರಾತ್ರಿ ಬಂಧನದಲ್ಲಿರಿಸಿಕೊಂಡು ನಂತರ ಬಿಡುಗಡೆ ಮಾಡಿದ್ದಾರೆ.
ಸಿದ್ದಾರ್ಥನಗರದ ನಿವಾಸಿ ಚಿರಾಗ್ ಜೈನ್(23) ಶನಿವಾರ ತಡ ರಾತ್ರಿ ರಾಜಸ್ತಾನದಿಂದ ಆಜ್ಮೀರ್ ಎಕ್ಸ್‌ಪ್ರೈಸ್ ರೈಲಿನಲ್ಲಿ ಬಂದಿದ್ದ ತಂದೆ-ತಾಯಿಯನ್ನು ಕರೆದುಕೊಂಡು ಹೋಗಲು ರೈಲ್ವೆ ನಿಲ್ದಾಣದ ಹಿಂಭಾಗದ ಗೇಟ್ ಕಡೆ ಹೋಗುತ್ತಿದ್ದಾಗ ಸ್ಕೂಟರ್‌ನಲ್ಲಿ ನಿಂತಿದ್ದ ಈ ಮೂವರು ಅಡ್ಡಗಟ್ಟಿ ಕಾರನ್ನು ನಿಲ್ಲಿಸಿ ಗಲಾಟೆ ಮಾಡಿ ಕಾರಿನಿಂದ ಚಿರಾಗ್ ಜೈನ್ ನನ್ನು ಇಳಿಸಿದ್ದಾರೆ.
ಬಳಿಕ ಮೂವರಲ್ಲಿ ಒಬ್ಬಾತ ಚಿರಾಗ್ ಜೈನ್‌ನನ್ನು ಹೆದರಿಸಿ ಕಾರಿನಲ್ಲಿ ಕುಳಿತುಕೊಂಡು ಹುಣಸೂರು ರಸ್ತೆಯ ಮೂಲಕ ಹೂಟಗಳ್ಳಿ ಕಡೆ ಬಂದಿದ್ದಾರೆ.ಜೊತೆಗಿದ್ದವರು ಸ್ಕೂಟರ್‌ನಲ್ಲಿ ಹಿಂಬಾಲಿಸಿದ್ದಾರೆ.
ಹೂಟಗಳ್ಳಿ ಬಳಿ ಕಾರನ್ನು ನಿಲ್ಲಿಸಿ 39 ಗ್ರಾಂ ತೂಕದ 2 ಚಿನ್ನದ ಸರ, ಮೊಬೈಲ್ ಹಾಗೂ 2 ಸಾವಿರ ರೂ. ನಗದನ್ನು ಕಿತ್ತುಕೊಂಡಿದ್ದಾರೆ. ಬೆಳಗಿನ ಜಾವ 5 ಗಂಟೆಯವರೆಗೆ ಅಲ್ಲೇ ಇರಿಸಿಕೊಂಡು ಬಳಿಕ ಕಾರಿನ ಕೀ ಕೊಟ್ಟು ಕಳುಹಿಸಿದ್ದಾರೆ.
ಈ ಸಂಬಂಧ ಚಿರಾಗ್ ಜೈನ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *