ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…
- TV10 Kannada Exclusive
- May 4, 2024
- No Comment
- 149
ಅಪರಿಚಿತ ವಾಹನ ಢಿಕ್ಕಿ…ಬೈಕ್ ಸವಾರ ಸ್ಥಳದಲ್ಲೇ ಸಾವು…
ನಂಜನಗೂಡು:
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೆಂಬಾಲು ಗ್ರಾಮದ (40) ರಂಗಸ್ವಾಮಿ ಮೃತ ದುರ್ಧೈವಿಯಾಗಿದ್ದಾರೆ. ನಿನ್ನೆ ರಾತ್ರಿ ಶುಕ್ರವಾರ ಹುಲ್ಲಹಳ್ಳಿ ಗ್ರಾಮದಿಂದ ಕೆಂಬಾಲು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಸ್ಥಳದಲ್ಲೇ ಬೈಕ್ ಸವಾರ ರಂಗಸ್ವಾಮಿ ಮೃತಪಟ್ಟಿದ್ದಾನೆ.ಘಟನೆ ನಡೆದ ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…