ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲೆ…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲೆ…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು,ಮೇ6,Tv10 ಕನ್ನಡ

ಮಹಿಳೆಯ ವಾಯ್ಸ್ ರೆಕಾರ್ಡ್ ಹಾಗೂ ನಡುವಳಿಕೆಯ ಫೋಟೋಗಳನ್ನ ಫ್ಯಾಮಿಲಿಗೆ ಕಳುಹಿಸಿ ಗೌರವಕ್ಕೆ ಧಕ್ಕೆ ತರುವುದಾಗಿ ದೂರದ ಸಂಭಂಧಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಾನು ಕರೆದಾಗ ಬರಬೇಕು ಇಲ್ಲದಿದ್ದಲ್ಲಿವ್ಯವಹಾರಕ್ಕಾಗಿ ಕೊಟ್ಟ ಸಾಲದ ಹಣ ಹಿಂದಿರುಗಿಸಬೇಕು.ತಪ್ಪಿದ್ದಲ್ಲಿ ಕುಟುಂಬದವರಿಗೆ ಫೋಟೋಗಳನ್ನ ಕಳುಹಿಸುವುದಾಗಿ ಧಂಕಿ ಹಾಕಿದ್ದಾನೆ.ಬ್ಲಾಕ್ ಮೇಲೆ ಮಾಡಿರುವ ಆರೋಪಿಗೆ ಮತ್ತೊಂದು ಮಹಿಳೆ ಸಾಥ್ ನೀಡಿದ್ದಾಳೆ.ಇಬ್ಬರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಕೃಷ್ಣನಗರದಲ್ಲಿ ಬಾಟಿಕ್ ನಡೆಸುತ್ತಿರುವ ಮಹಿಳೆಗೆ ದೂರದ ಸಂಭಂಧಿಯಾದ ಕೊಯಮತ್ತೂರಿನ ಉಮಾಪತಿ ಪರಿಚಯವಾಗಿ ಹತ್ತಿರವಾಗಿದ್ದಾರೆ.ಕೊಯಮತ್ತೂರಿನಲ್ಲಿ ಬುಸಿನೆಸ್ ಮನ್ ಆಗಿರುವ ಉಮಾಪತಿ ಮಹಿಳೆಗೆ ಸಾಕಷ್ಟು ಬಾರಿ ಆರ್ಥಿಕ ನೆರವು ನೀಡಿದ್ದಾರೆ.ಈ ಮಧ್ಯೆ ಮೈಸೂರಿನ ರಾಮಕೃಷ್ಣನಗರದ ನಿವಾಸಿ ಶೀಲಾಗೋಪಾಲ್ ಎಂಬುವರನ್ನ ಮಹಿಳೆ ಉಮಾಪತಿಗೆ ಪರಿಚಯಿಸಿದ್ದಾರೆ.ಶೀಲಾಗೋಪಾಲ್ ಹಾಗೂ ಉಮಾಪತಿ ಆತ್ಮೀಯರಾಗಿದ್ದಾರೆ.ಈ ಬೆಳವಣಿಗೆ ನಂತರ ಮಹಿಳೆ ಹಾಗೂ ಶೀಲಾಗೋಪಾಲ್ ನಡುವೆ ಮನಸ್ಥಾಪವಾಗಿದೆ.ಮಹಿಳೆಯ ನಡುವಳಿಕೆ ಬಗ್ಗೆ ಶೀಲಾಗೋಪಾಲ್ ರವರು ಉಮಾಪತಿ ಬಳಿ ತಿಳಿಸಿದ್ದಾರೆ.ಈ ವೇಳೆ ಉಮಾಪತಿ ಮಹಿಳೆಗೆ ಫೋನ್ ಮಾಡಿ ನೀನು ಬೇರೆಯವರ ಜೊತೆ ಸಂಭಂಧ ಬೆಳೆಸಿದ್ದೀಯ,ನಾನು ಕರೆದಾಗ ಬರಬೇಕು ಎಂದು ಬೆದರಿಕೆ ಹಾಕಿದ್ದಾರೆ.ಆಗ ಮಹಿಳೆಯ ಮಗಳು ಉಮಾಪತಿ ರವರ ನಂಬರ್ ಬ್ಲಾಕ್ ಮಾಡಿದ್ದಾರೆ.ನಂತರ ವಿದೇಶದಲ್ಲಿ ತಂಗಿರುವ ಮತ್ತೊಬ್ಬ ಮಗಳ ಮೊಬೈಲ್ ಗೆ ಫೋನ್ ಮಾಡಿ ನಾನು ಕೊಟ್ಟ ಹಣ ಹಿಂದಿರುಗಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ತಾಯಿಯ ನಡುವಳಿಕೆಯ ವಾಯ್ಸ್ ರೆಕಾರ್ಡ್ ಗಳು ಹಾಗೂ ಫೋಟೋಗಳನ್ನ ಇಡೀ ಕುಟುಂಬಕ್ಕೆ ಕಳುಹಿಸಿ ಗೌರವಕ್ಕೆ ಧಕ್ಕೆ ಬರುವಂತೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ.ಸಧ್ಯ ಮಹಿಳೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಉಮಾಪತಿ ಹಾಗೂ ಶೀಲಾ ಗೋಪಾಲ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…
ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ… ಮೈಸೂರು,ಮಾ4,Tv10 ಕನ್ನಡ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ…
ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…

Leave a Reply

Your email address will not be published. Required fields are marked *