ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲ್…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು:ಮಹಿಳೆಗೆ ದೂರದ ಸಂಭಂಧಿಯಿಂದ ಬ್ಲಾಕ್ ಮೇಲ್…ನಡವಳಿಕೆಯ ಫೋಟೋಗಳನ್ನ ಹಿಡಿದು ಧಂಕಿ…

ಮೈಸೂರು,ಮೇ6,Tv10 ಕನ್ನಡ

ಮಹಿಳೆಯ ವಾಯ್ಸ್ ರೆಕಾರ್ಡ್ ಹಾಗೂ ನಡುವಳಿಕೆಯ ಫೋಟೋಗಳನ್ನ ಫ್ಯಾಮಿಲಿಗೆ ಕಳುಹಿಸಿ ಗೌರವಕ್ಕೆ ಧಕ್ಕೆ ತರುವುದಾಗಿ ದೂರದ ಸಂಭಂಧಿ ಬ್ಲಾಕ್ ಮೇಲ್ ಮಾಡಿರುವ ಪ್ರಕರಣ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.ನಾನು ಕರೆದಾಗ ಬರಬೇಕು ಇಲ್ಲದಿದ್ದಲ್ಲಿ ವ್ಯವಹಾರಕ್ಕಾಗಿ ಕೊಟ್ಟ ಸಾಲದ ಹಣ ಹಿಂದಿರುಗಿಸಬೇಕು.ತಪ್ಪಿದ್ದಲ್ಲಿ ಕುಟುಂಬದವರಿಗೆ ಫೋಟೋಗಳನ್ನ ಕಳುಹಿಸುವುದಾಗಿ ಧಂಕಿ ಹಾಕಿದ್ದಾನೆ.ಬ್ಲಾಕ್ ಮೇಲ್ ಮಾಡಿರುವ ಆರೋಪಿಗೆ ಮತ್ತೊಂದು ಮಹಿಳೆ ಸಾಥ್ ನೀಡಿದ್ದಾಳೆ.ಇಬ್ಬರ ಮೇಲೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಕೃಷ್ಣನಗರದಲ್ಲಿ ಬಾಟಿಕ್ ನಡೆಸುತ್ತಿರುವ ಮಹಿಳೆಗೆ ದೂರದ ಸಂಭಂಧಿಯಾದ ಕೊಯಮತ್ತೂರಿನ ಉಮಾಪತಿ ಪರಿಚಯವಾಗಿ ಹತ್ತಿರವಾಗಿದ್ದಾರೆ.ಕೊಯಮತ್ತೂರಿನಲ್ಲಿ ಬುಸಿನೆಸ್ ಮನ್ ಆಗಿರುವ ಉಮಾಪತಿ ಮಹಿಳೆಗೆ ಸಾಕಷ್ಟು ಬಾರಿ ಆರ್ಥಿಕ ನೆರವು ನೀಡಿದ್ದಾರೆ.ಈ ಮಧ್ಯೆ ಮೈಸೂರಿನ ರಾಮಕೃಷ್ಣನಗರದ ನಿವಾಸಿ ಶೀಲಾಗೋಪಾಲ್ ಎಂಬುವರನ್ನ ಮಹಿಳೆ ಉಮಾಪತಿಗೆ ಪರಿಚಯಿಸಿದ್ದಾರೆ.ಶೀಲಾಗೋಪಾಲ್ ಹಾಗೂ ಉಮಾಪತಿ ಆತ್ಮೀಯರಾಗಿದ್ದಾರೆ.ಈ ಬೆಳವಣಿಗೆ ನಂತರ ಮಹಿಳೆ ಹಾಗೂ ಶೀಲಾಗೋಪಾಲ್ ನಡುವೆ ಮನಸ್ಥಾಪವಾಗಿದೆ.ಮಹಿಳೆಯ ನಡುವಳಿಕೆ ಬಗ್ಗೆ ಶೀಲಾಗೋಪಾಲ್ ರವರು ಉಮಾಪತಿ ಬಳಿ ತಿಳಿಸಿದ್ದಾರೆ.ಈ ವೇಳೆ ಉಮಾಪತಿ ಮಹಿಳೆಗೆ ಫೋನ್ ಮಾಡಿ ನೀನು ಬೇರೆಯವರ ಜೊತೆ ಸಂಭಂಧ ಬೆಳೆಸಿದ್ದೀಯ,ನಾನು ಕರೆದಾಗ ಬರಬೇಕು ಎಂದು ಬೆದರಿಕೆ ಹಾಕಿದ್ದಾರೆ.ಆಗ ಮಹಿಳೆಯ ಮಗಳು ಉಮಾಪತಿ ರವರ ನಂಬರ್ ಬ್ಲಾಕ್ ಮಾಡಿದ್ದಾರೆ.ನಂತರ ವಿದೇಶದಲ್ಲಿ ತಂಗಿರುವ ಮತ್ತೊಬ್ಬ ಮಗಳ ಮೊಬೈಲ್ ಗೆ ಫೋನ್ ಮಾಡಿ ನಾನು ಕೊಟ್ಟ ಹಣ ಹಿಂದಿರುಗಿಸಬೇಕು ಇಲ್ಲದಿದ್ದಲ್ಲಿ ನಿಮ್ಮ ತಾಯಿಯ ನಡುವಳಿಕೆಯ ವಾಯ್ಸ್ ರೆಕಾರ್ಡ್ ಗಳು ಹಾಗೂ ಫೋಟೋಗಳನ್ನ ಇಡೀ ಕುಟುಂಬಕ್ಕೆ ಕಳುಹಿಸಿ ಗೌರವಕ್ಕೆ ಧಕ್ಕೆ ಬರುವಂತೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದಾನೆ.ಸಧ್ಯ ಮಹಿಳೆ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಉಮಾಪತಿ ಹಾಗೂ ಶೀಲಾ ಗೋಪಾಲ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *