ಮುಂದೆ ಸಿಎಂ, ಗೃಹ ಸಚಿವರ ಸಿಡಿ‌ಯೂ ಬರಬಹುದು…ರಮೇಶ್ ಜಾರಕಿಹೋಳಿ…

ಮುಂದೆ ಸಿಎಂ, ಗೃಹ ಸಚಿವರ ಸಿಡಿ‌ಯೂ ಬರಬಹುದು…ರಮೇಶ್ ಜಾರಕಿಹೋಳಿ…

ಬೆಳಗಾವಿ,ಮೇ7,Tv10 ಕನ್ನಡ

ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರದ್ದೂ ಮುಂದೆ ಸಿಡಿ ಬರಬಹುದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೊಸ‌ ಬಾಂಬ್ ಸಿಡಿಸಿದ್ದಾರೆ.
ಬೆಳಗಾವಿಯ ಗೋಕಾಕ್ ಪಟ್ಟಣದಲ್ಲಿ ಮತದಾನಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ಸಿಡಿ ವಿಚಾರವನ್ನು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೆ, ಆಗ ಎಲ್ಲರೂ ನನ್ನನ್ನು ಕಡೆಗಣಿಸಿದರು, ನಗುತ್ತಾ ನೋಡುತ್ತಿದ್ದರು. ಇವತ್ತು ಒಬ್ಬರಿಗೆ ಆಗಿದೆ, ಮುಂದೆ ಸಿದ್ದರಾಮಯ್ಯಗೂ ಬರಬಹುದು, ಪರಮೇಶ್ವರ್ ಅವರಿಗೂ ಬರಬಹುದು ಎಂದು ವ್ಯಂಗ್ಯ ಮಾಡಿದರು.
ಪ್ರಜ್ವಲ್ ರೇವಣ್ಣ ಕೇಸು ಯಾರು ಹೆಮ್ಮೆ ಪಡುವ ವಿಷಯ ಅಲ್ಲ, ಎಲ್ಲರೂ ತಲೆ ತಗ್ಗಿಸುವ ವಿಷಯ,ಅತಿ ಕೆಟ್ಟ ಪ್ರಮಾಣದಲ್ಲಿ ಆಗಿದೆ.
ಗೃಹ ಸಚಿವರು, ಮುಖ್ಯಮಂತ್ರಿಗಳು ಪಕ್ಷಾತೀತವಾಗಿ ಇದಕ್ಕೆ ಇತಿಶ್ರೀ ಹಾಡಬೇಕು ಎಂದು ಸಿಎಂ ಅವರಿಗರ ಕೈ ಮುಗಿದು ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು
ಪ್ರಜ್ವಲ್ ರೇವಣ್ಣ ಕೇಸ್‌ನಲ್ಲಿ ಡಿ.ಕೆ ಶಿವಕುಮಾರ್ ಆಡಿಯೋ ರಿಲೀಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿ ಹೊಳಿ, ಇದರಲ್ಲಿ ಡಿಕೆಶಿ ನೇರವಾಗಿ ಭಾಗಿಯಾಗಿರುವ ಬಗ್ಗೆ ನನ್ನ ಬಳಿ ಸಾಕ್ಷಿಯಿದೆ. ನನ್ನ ಕೇಸ್‌ನಲ್ಲೂ ಡಿಕೆಶಿ ಮಾತನಾಡಿರುವ ಸಾಕ್ಷಿ ಇದೆ, ಅದನ್ನೇ ಕೊಡುತ್ತೇನೆ. ನನ್ನ ಬಗ್ಗೆ ಷಡ್ಯಂತ್ರ ಮಾಡಿದ್ದಕ್ಕೆ ಸಾಕ್ಷಿಗಳೂ ಇವೆ ಎಂದು ಹೇಳಿದರು.ಹಣ ಕೊಟ್ಟು ಎಲ್ಲವನ್ನೂ ಖರೀದಿ ಮಾಡಬೇಕು ಅನ್ನೋ ಸೊಕ್ಕು ಇದೆ. ದೇಶದಲ್ಲಿ ಕಾನೂನು ಉಳಿಯಬೇಕು ಅಂದ್ರೆ, ಇದು ನಿಲ್ಲಬೇಕು. ನನ್ನ ಕೇಸ್‌ನಲ್ಲಿ ಡಿಕೆಶಿ ಮಾತ್ರ ಭಾಗಿಯಾಗಿಲ್ಲ, ನಮ್ಮವರೂ ಇದ್ದಾರೆ. ಜೂನ್ 4ರ ನಂತರ ಎಲ್ಲವನ್ನೂ ಬಹಿರಂಗ ಪಡಿಸುತ್ತೇನೆ ಎಂದು ತಿಳಿಸಿದರು.ನನ್ನ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಬಗ್ಗೆ ವಿಶ್ವಾಸ ಇಲ್ಲ. ಈ ಕೇಸ್ ಅನ್ನು ಸಿಬಿಐಗೆ ಕೊಟ್ಟರೆ ಸಾಕ್ಷಿ ಕೊಡುತ್ತೇನೆ,ಆದರೆ ಸಿಬಿಐಗೆ ಕೇಸ್ ಕೊಟ್ಟರೂ ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಮೇಲುಸ್ತುವಾರಿ ಮಾಡಬೇಕು ಎಂದು ಸ್ಪಷ್ಟಪಡಿಸಿದರು…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *