ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ದಂಪತಿ ಮೃತದೇಹ ಪತ್ತೆ…ಸಾವಿನಲ್ಲೂ ಒಂದಾದ ಗಂಡಹೆಂಡತಿ…ಹೃದಯಾಘಾತ ಶಂಕೆ…

ಪಿರಿಯಾಪಟ್ಟಣ,ಮೇ18,Tv10 ಕನ್ನಡ

ಪಿರಿಯಾಪಟ್ಟಣ ಗೊಲ್ಲರಬೀದಿ ಮನೆಯೊಂದರಲ್ಲಿ ದಂಪತಿ ಮೃತದೇಹ ಪತ್ತೆಯಾಗಿದೆ.ಪ್ರಕಾಶ್(47) ಹಾಗೂ ಯಶೋಧ(46) ಮೃತ ದಂಪತಿ.ತಾಲೂಕು ಪಂಚಾಯ್ತಿ ಟಿಬಿ ಬಳಿ ಟೀ ಅಂಗಡಿ ನಡೆಸುತ್ತಿರುವ ಪ್ರಕಾಶ್ ಹಾಗೂ ಯಶೋಧ ದಂಪತಿಗೆ ತನುಶ್ರೀ ಎಂಬ ಮಗಳಿದ್ದಾರೆ.ಮೈಸೂರಿನ ಯುವರಾಜ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿರುವ ತನುಶ್ರೀ ಪಿಜಿಯಲ್ಲಿ ತಂಗಿದ್ದಾರೆ.ಮೊನ್ನೆ ರಾತ್ರಿ ಸಂಭಂಧಿಕರ ಮನೆಗೆ ಹೋಗಿ ಊಟ ಮಾಡಿಕೊಂಡು ಬಂದಿದ್ದ ದಂಪತಿ ಮನೆಯಲ್ಲಿ ಮಲಗಿದ್ದಾರೆ.ಮರುದಿನ ಮನೆಯಿಂದ ದಂಪತಿ ಹೊರಬಂದಿಲ್ಲ.ಟೀ ಅಂಗಡಿಯನ್ನೂ ಸಹ ಓಪನ್ ಮಾಡಿರಲಿಲ್ಲ.ನಿನ್ನೆ ರಾತ್ರಿ ಮಗಳು ಫೋನ್ ಮಾಡಿದಾಗ ತಂದೆ ತಾಯಿ ಕರೆ ಸ್ವೀಕರಿಸಿಲ್ಲ.ಅನುಮಾನ ಬಂದ ತನುಶ್ರೀ ತಮ್ಮ ಸಂಭಂಧಿಕರಿಗೆ ವಿಚಾರ ಮುಟ್ಟಿಸಿದ್ದಾರೆ.ನಂತರ ಮನೆಗೆ ಬಂದು ಕಿಟಕಿ ತೆರೆದು ನೋಡಿದಾಗ ಯಶೋಧ ರವರ ಮೃತದೇಹ ಮಂಚದ ಮೇಲೆ ಕಂಡುಬಂದಿದೆ.ಪ್ರಕಾಶ್ ರವರ ಮೃತದೇಹ ಬಾಗಿಲ ಬಳಿ ಪತ್ತೆಯಾಗಿದೆ.ದಂಪತಿ ಸಾವಿನ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ.ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಹಾಗೂ ಎಡಿಷನಲ್ ಎಸ್ಪಿ ನಂದಿನಿ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೇಲ್ನೋಟಕ್ಕೆ ದಂಪತಿ ಇಬ್ಬರೂ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ.ಪಿರಿಯಾಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ…

Spread the love

Related post

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…
ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…

Leave a Reply

Your email address will not be published. Required fields are marked *