ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ಸಿಎಂ ತವರು ಕ್ಷೇತ್ರದಲ್ಲಿ ಕಾಲರಾ ಭೀತಿ…ಬೀಡು ಬಿಟ್ಟ ಆರೋಗ್ಯಾಧಿಕಾರಿಗಳು…70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು…

ನಂಜನಗೂಡು,ಮೇ18,Tv10 ಕನ್ನಡ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರಿನಲ್ಲಿ ಕಾಲರಾ ಭೀತಿ ಶುರುವಾಗಿದೆ.70 ಕ್ಕೂ ಹೆಚ್ಚು ಮಂದಿಗೆ ಕಾಲರಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಜಿಲ್ಲಾ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.ಕಾಲರಾ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.ಸಿದ್ದರಾಮಯ್ಯ ತವರು ಕ್ಷೇತ್ರದ ತಗಡೂರು ಗ್ರಾಮದಲ್ಲಿ ಕಾಲರಾ ಕಾಯಿಲೆ ಕಂಡುಬಂದಿದ್ದು ಗ್ರಾಮಸ್ಥರು ತತ್ತರಿಸಿದ್ದಾರೆ. ಗ್ರಾಮದ 19 ಮಕ್ಕಳು ಸೇರಿದಂತೆ ಒಟ್ಟು 76 ಮಂದಿಗೆ ಕಾಲರಾ ಕಾಣಿಸಿಕೊಂಡಿರುವುದಯ ಬೆಳಕಿಗೆ ಬಂದಿದೆ. ತಗಡೂರು ಗ್ರಾಮ ಪಂಚಾಯಿತಿಯ 1,2,3, ವಾರ್ಡಿನಲ್ಲಿ ವಾಸಿಸುತ್ತಿರುವ 300ಕ್ಕೂ ಹೆಚ್ಚು ಜನರ ಪೈಕಿ ಈಗ 76 ಜನರಿಗೆ ಕಾಲರ ಕಾಯಿಲೆ ಕಂಡು ಬಂದಿದೆ. ಗ್ರಾಮದಲ್ಲಿ 12 ಕೈ ಪಂಪುಗಳಿದ್ದು ಈ ಪೈಕಿ ನಾಲ್ಕು ಕೈ ಪಂಪುಗಳ ನೀರನ್ನು ಕುಡಿಯಲು ಯೋಗ್ಯವಿಲ್ಲ ಎಂಬ ಆತಂಕಕಾರಿ ವರದಿ ಮಾಹಿತಿ ಇದ್ದರೂ ತಗಡೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಿವಾಕರ್ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮ ಎಂಬವರು ಬಡಾವಣೆಯ ಸಾರ್ವಜನಿಕರಿಗೆ ಕಲುಷಿತ ನೀರನ್ನ ಕುಡಿಯಲು ಆವಕಾಶ ಮಾಡಿಕೊಟ್ಟಿರುವುದಾಗಿ ಹೇಳಲಾಗಿದೆ. ತಗಡೂರು ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಕುಮಾರಸ್ವಾಮಿ ನಂಜನಗೂಡಿನ ತಹಸಿಲ್ದಾರ್ ಶಿವಕುಮಾರ್ ಕಾಸ್ನೋರು ಹಾಗೂ ಜಿಲ್ಲಾ ಕಾಲರಾ ವೈದ್ಯಾಧಿಕಾರಿ ಡಾ. ಪುಟ್ಟತಾಯಮ್ಮ ತಾಲೂಕು ಆಡಳಿತ ವೈದ್ಯಧಿಕಾರಿ ಡಾಕ್ಟರ್ ಈಶ್ವರ್ ಖಾನಾಟ್ಕೆ ಗ್ರಾಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದ್ದಾರೆ.ಇದೀಗ ಗ್ರಾಮಕ್ಕೆ ಪ್ರತ್ಯೇಕವಾಗಿ ಕುಡಿಯುವ ನೀರಿನ ಟ್ಯಾಂಕ್ ವ್ಯವಸ್ಥೆ ಕಲ್ಪಿಸಲಾಗಿದೆ.ಹತ್ತಕ್ಕೂ ಹೆಚ್ಚು ವೈದ್ಯಾಧಿಕಾರಿಗಳು ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ದಿನಕ್ಕೆ ಮೂರು ಬಾರಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯ ವೈದ್ಯಾಧಿಕಾರಿಗಳ ಜೊತೆಗೂಡಿ ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ…

Spread the love

Related post

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…
ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…

Leave a Reply

Your email address will not be published. Required fields are marked *