ಹುಣಸೂರು:ಬೋರ್ ವೆಲ್ ನಲ್ಲಿ ಕಲ್ಲು ಚಪ್ಪಡಿಗಳನ್ನ ಹಾಕಿ ಧ್ವೇಷ ತೀರಿಸಿಕೊಂಡ ಸಂಭಂಧಿಕ…

ಹುಣಸೂರು:ಬೋರ್ ವೆಲ್ ನಲ್ಲಿ ಕಲ್ಲು ಚಪ್ಪಡಿಗಳನ್ನ ಹಾಕಿ ಧ್ವೇಷ ತೀರಿಸಿಕೊಂಡ ಸಂಭಂಧಿಕ…

ಹುಣಸೂರು,ಮೇ19,Tv10 ಕನ್ನಡ

ಹುಣಸೂರಿನಲ್ಲಿ ನಡೆದ ಬೋರ್ ವೆಲ್ ಕಿರಿಕ್ ಪ್ರಕರಣ ಮತ್ತೊಂದು ತಿರುವು ಪಡೆದುಕೊಂಡಿದೆ.ಬೋರ್ ವೆಲ್ ಹಾಕುವುದನ್ನ ವಿರೋಧಿಸುತ್ತಾ ಬಂದಿದ್ದ ಸಂಭಂಧಿಕ ಅಮಾನವೀಯವಾಗಿ ಧ್ವೇಷ ತೀರಿಸಿಕೊಂಡಿದ್ದಾನೆ.ಲಕ್ಷಾಂತರ ರೂ ಖರ್ಚು ಮಾಡಿ ಕೊರೆಸಿದ ಬೋರ್ ವೆಲ್ ಗೆ ಕಲ್ಲು ಚೆಪ್ಪಡಿಗಳನ್ನ ತುಂಬಿ ಧ್ವೇಷ ತೀರಿಸಿಕೊಂಡಿದ್ದಾನೆ.ಹುಣಸೂರಿನ ಹೆಮ್ಮಿಗೆ ಗ್ರಾಮದಲ್ಲಿ ಘಟನೆ ನಡೆದಿದೆ.

ಹೆಮ್ಮಿಗೆ ಗ್ರಾಮದ ಸುಜಾತ ಹಾಗೂ ಕೃಷ್ಣೇಗೌಡ ಸಂಭಂಧಿಕರು.ಅಕ್ಕಪಕ್ಕದಲ್ಲೇ ಇವರಿಬ್ಬರ ಜಮೀನಿದೆ.ನೀರಿಗಾಗಿ ಸುಜಾತ ಬೋರ್ ವೆಲ್ ಕೊರೆಸಿದ್ದಾರೆ.ಮೊದಲಬಾರಿಗೆ ನೀರು ಸಿಕ್ಕಿಲ್ಲ.ನಂತರ ಮತ್ತೊಂದು ಬೋರ್ ವೆಲ್ ಕೊರೆಸಿದಾಗ ನೀರು ಬಂದಿದೆ.ಈ ವೇಳೆ ಸಂಭಂಧಿಕ ಕೃಷ್ಣೇಗೌಡ ಕ್ಯಾತೆ ತೆಗೆದಿದ್ದಾನೆ.ಪಕ್ಕದಲ್ಲೇ ಬೋರ್ ಹಾಕಿದ್ರೆ ನಮ್ಮ ಬೋರ್ ವೆಲ್ ನಲ್ಲಿ ನೀರಿನ ಪ್ರಮಾಣ ಕಡಿಮೆ ಆಗುತ್ತದೆ ಎಂದು ಕಾರಣ ನೀಡಿ ಕಿರಿಕ್ ಮಾಡಿದ್ದಾನೆ.ಬೋರ್ ವೆಲ್ ಕೊರೆಸಲು ಬಿಡದೆ ಅಡ್ಡಿಪಡಿಸಿದ್ದಾನೆ.ಕೆಲವು ದಿನಗಳ ಹಿಂದಷ್ಟೆ ಈ ಕಿರಿಕ್ ನಡೆದಿದ್ದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.ಎರಡೂ ಕುಟುಂಬಗಳನ್ನ ಕರೆಸಿ ಪೊಲೀಸರು ಬುದ್ದಿವಾದ ಹೇಳಿದ್ದಾರೆ.ನಂತರ ಗ್ರಾಮದಲ್ಲಿ ಪಂಚಾಯ್ತಿ ನಡೆದು ಅನುಸರಿಸಿಕೊಂಡು ಹೋಗುವಂತೆ ಸಲಹೆ ನೀಡಿದ್ದಾರೆ.ಇಷ್ಟಕ್ಕೆ ಸುಮ್ಮನಿರದ ಕೃಷ್ಣೇಗೌಡ ರಾತ್ರೋ ರಾತ್ರಿ ಬೋರ್ ವೆಲ್ ನಲ್ಲಿ ಕಲ್ಲು ಚೆಪ್ಪಡಿಗಳನ್ನ ತುಂಬಿ ಹಗೆ ತೀರಿಸಿಕೊಂಡಿದ್ದಾನೆ.ಕೃಷ್ಣೇಗೌಡನ ಕುತಂತ್ರಕ್ಕೆ ಬೋರ್ ವೆಲ್ ನ ಪರಿಕರಗಳು ನಾಶವಾಗಿ ಸಾವಿರಾರು ರೂ ನಷ್ಟವಾಗಿದೆ.ಇದೀಗ ಸುಜಾತ ಮನೆಯವರು ಮತ್ತೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರ ಮೊರೆ ಹೋಗಿ ಕೃಷ್ಣೇಗೌಡ ವಿರುದ್ದ ದೂರು ದಾಖಲಿಸಿದ್ದಾರೆ…

Spread the love

Related post

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ…

ಟ್ರೇಡಿಂಗ್ ಹೆಸರಲ್ಲಿ ವೈದ್ಯನಿಗೆ ವಂಚನೆ…22 ಲಕ್ಷ ಧೋಖಾ… ಮೈಸೂರು,ಮಾ4,Tv10 ಕನ್ನಡ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ 22 ಲಕ್ಷ ವಂಚಿಸಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ವಿಜಯನಗರದ ನಿವಾಸಿ ವೃತ್ತಿಯಲ್ಲಿ…
ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್…

ಸಿಸಿಬಿ ಪೊಲೀಸರ ಕಾರ್ಯಾಚರಣೆ…ನಾಲ್ವರ ಬಂಧನ…10.40 ಲಕ್ಷ ಮೌಲ್ಯದ ಎಂಡಿಎಂಎ ಒಂದು ಕಾರ್ ವಶ… ಮೈಸೂರು,ಫೆ23,Tv10 ಕನ್ನಡ ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆಯಲಾಗಿದ್ದು ಬಂಧಿತರಿಂದ…
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ! ಆಲ್ಫಾ ಅಂದರೇನೇ ಡಾಮಿನೇಶನ್. ಈ ವಾರ ತೆರೆಕಂಡ ಆಲ್ಫಾ‌ ಚಿತ್ರದಲ್ಲಿ ಡಾಮಿನೇಟ್ ಮಾಡುತ್ತಿರುವವರೇ ಚಿತ್ರದ ನಾಯಕ ಹೇಮಂತ್ ಕುಮಾರ್. ಹೇಮಂತ್…

Leave a Reply

Your email address will not be published. Required fields are marked *