ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ…ಸಾವಿರಾರು ಭಕ್ತರು ಭಾಗಿ…

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ…ಸಾವಿರಾರು ಭಕ್ತರು ಭಾಗಿ…

ಮೈಸೂರು,ಮೇ19,Tv10 ಕನ್ನಡ

ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಸಾಂಗವಾಗಿ ನೆರವೇರಿತು.
ಮೈಸೂರು ಸೇರಿದಂತೆ‌ ರಾಜ್ಯ,ಹೊರ ರಾಜ್ಯಗಳಿಂದ ಬಂದಿದ್ದ ಸಾವಿರಕ್ಕೂ ಹೆಚ್ಚು ದಂಪತಿಗಳು ಸತ್ಯನಾರಾಯಣ ‌ವ್ರತದಲ್ಲಿ ಪಾಲ್ಗೊಂಡಿದ್ದರು.
ಇಂದು ಬೆಳಿಗ್ಗೆ ಗಣಪತಿ ಹೋಮ ನಂತರ ಸತ್ಯನಾರಾಯಣ ವ್ರತವನ್ನು ಪ್ರಾರಂಭಿಸಲಾಯಿತು.
ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಅವರು ಜ್ಯೋತಿ ಬೆಳಗಿಸಿ ಈ ಸಾಮೂಹಿಕ ಸತ್ಯನಾರಾಯಣ ಪೂಜಾ‌ಕಾರ್ಯಕ್ಕೆ ಚಾಲನೆ ನೀಡಿದರು,ಸಂತೋಷ್‌ ಘನಪಾಟಿ ಮತ್ತು ಅವರ ಶಿಷ್ಯರ ನೇತೃತ್ವದಲ್ಲಿ ಶ್ರೀ‌ ಸತ್ಯನಾರಾಯಣ ವ್ರತ ನೆರವೇರಿತು.
ಅವಧೂತ ದತ್ತಪೀಠದ ವತಿಯಿಂದಲೇ ಉಚಿತವಾಗಿ ಸತ್ಯನಾರಾಯಣ ‌ವ್ರತವನ್ನು ಶಾಸ್ತ್ರೋಕ್ತವಾಗಿ ಏರ್ಪಡಿಸಿದ್ದಲ್ಲದೆ ಈ ವ್ರತಕ್ಕೆ ಬೇಕಾದಂತಹ‌ ಸಕಲ ಪೂಜಾ‌ ಸಾಮಗ್ರಿಗಳು ಮತ್ತು ಪ್ರಸಾದವನ್ನು ಕೂಡಾ‌ ಉಚಿತವಾಗಿ ನೀಡಿದ್ದುದು ವಿಶೇಷವಾಗಿತ್ತು.

ಈ ವೇಳೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿ ಶ್ರೀ ಸತ್ಯನಾರಾಯಣ ವ್ರತ ಮಾಡುವುದರಿಂದ ಮನುಷ್ಯರ ದುಃಖ, ಕಷ್ಟ ಕೋಟಲೆ ದೂರವಾಗಲಿದೆ ಎಂದು ನುಡಿದರು.
ಸಂಸಾರದಲ್ಲಿ ಸುಖ,ದುಃಖ ಎರಡೂ ಇರಬೇಕು,ಸದಾ ಸತ್ಯವನ್ನೆ ನುಡಿಯಬೇಕು ಸಾಧ್ಯವಾದಷ್ಟೂ ಒಳಿತನ್ನೇ ಮಾಡಬೇಕು ಎಂದು ಹೇಳಿದರು.
ಪ್ರತಿ ವರ್ಷ ಈ ರೀತಿಯ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಬೇಕೆಂಬುದು ನನ್ನ ಮಹಾದಾಸೆ ಹಾಗೂ ಆಶ್ರಮದಲ್ಲಿ ಪ್ರತಿದಿನ ಸಂಜೆ ಸತ್ಸಂಗ ನಡೆಯಬೇಕು ಎಂಬ ಆಶಯವಿದೆ
ಇದೆಲ್ಲದರಲ್ಲೂ ಭಕ್ತರು ಭಾಗವಹಿಸಬೇಕು ಎಂದು ಸ್ವಾಮೀಜಿ ತಿಳಿಸಿದರು.

ಇಂದು ಸಂಜೆ 6.30ಕ್ಕೆ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿಗೆ ಪುಷ್ಪಾಲಂಕಾರ,ಶೇಷ ವಾಹನೋತ್ಸವ,ಶಾಂತಿ ಪಾಠ ಮತ್ತು ಶ್ರೀ ದತ್ತ‌ ವೆಂಕಟೇಶ್ವರ ಕ್ಷೇತ್ರದ ರಜತ ಮಹೋತ್ಸವ ಉದ್ಘಾಟನೆ ನಡೆಯಿತು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಸುತ್ತೂರು ಮಠಾಧೀಶರಾದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಮತ್ತು ಅವಧೂತ ದತ್ತಪೀಠದ ಶ್ರೀ ದತ್ತ ವಿಜಯಾನಂದ‌ ತೀರ್ಥ ಸ್ವಾಮೀಜಿ ವಹಿಸಿದ್ದರು.
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ಜನ್ಮದಿನೋತ್ಸವ ಮತ್ತು ನಾದಮಂಟಪದ 26 ನೇ ವಾರ್ಷಿಕೋತ್ಸವ ಕೂಡಾ ನಡೆಯಲಿದ್ದು ಇದರ ಪ್ರಯುಕ್ತ ಅವಧೂತ ದತ್ತ ಪೀಠದಲ್ಲಿ ಇಂದಿನಿಂದ ವಿವಿಧ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಿವೆ.
ಮೇ.20 ರಿಂದ 28 ರವರೆಗೂ ಆಶ್ರಮದಲ್ಲಿ‌ ಪ್ರತಿದಿನ ಶ್ರೀಚಕ್ರಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *