ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ…ಸಾವಿರಾರು ಭಕ್ತರು ಭಾಗಿ…

ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ…ಸಾವಿರಾರು ಭಕ್ತರು ಭಾಗಿ…

ಮೈಸೂರು,ಮೇ19,Tv10 ಕನ್ನಡ

ಮೈಸೂರಿನ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ವ್ರತ ಸಾಂಗವಾಗಿ ನೆರವೇರಿತು.
ಮೈಸೂರು ಸೇರಿದಂತೆ‌ ರಾಜ್ಯ,ಹೊರ ರಾಜ್ಯಗಳಿಂದ ಬಂದಿದ್ದ ಸಾವಿರಕ್ಕೂ ಹೆಚ್ಚು ದಂಪತಿಗಳು ಸತ್ಯನಾರಾಯಣ ‌ವ್ರತದಲ್ಲಿ ಪಾಲ್ಗೊಂಡಿದ್ದರು.
ಇಂದು ಬೆಳಿಗ್ಗೆ ಗಣಪತಿ ಹೋಮ ನಂತರ ಸತ್ಯನಾರಾಯಣ ವ್ರತವನ್ನು ಪ್ರಾರಂಭಿಸಲಾಯಿತು.
ಅವಧೂತ ದತ್ತಪೀಠದ ಕಿರಿಯ ಶ್ರೀಗಳಾದ ಶ್ರೀ ದತ್ತವಿಜಯಾನಂದ ತೀರ್ಥ ಸ್ವಾಮೀಜಿ ಅವರು ಜ್ಯೋತಿ ಬೆಳಗಿಸಿ ಈ ಸಾಮೂಹಿಕ ಸತ್ಯನಾರಾಯಣ ಪೂಜಾ‌ಕಾರ್ಯಕ್ಕೆ ಚಾಲನೆ ನೀಡಿದರು,ಸಂತೋಷ್‌ ಘನಪಾಟಿ ಮತ್ತು ಅವರ ಶಿಷ್ಯರ ನೇತೃತ್ವದಲ್ಲಿ ಶ್ರೀ‌ ಸತ್ಯನಾರಾಯಣ ವ್ರತ ನೆರವೇರಿತು.
ಅವಧೂತ ದತ್ತಪೀಠದ ವತಿಯಿಂದಲೇ ಉಚಿತವಾಗಿ ಸತ್ಯನಾರಾಯಣ ‌ವ್ರತವನ್ನು ಶಾಸ್ತ್ರೋಕ್ತವಾಗಿ ಏರ್ಪಡಿಸಿದ್ದಲ್ಲದೆ ಈ ವ್ರತಕ್ಕೆ ಬೇಕಾದಂತಹ‌ ಸಕಲ ಪೂಜಾ‌ ಸಾಮಗ್ರಿಗಳು ಮತ್ತು ಪ್ರಸಾದವನ್ನು ಕೂಡಾ‌ ಉಚಿತವಾಗಿ ನೀಡಿದ್ದುದು ವಿಶೇಷವಾಗಿತ್ತು.

ಈ ವೇಳೆ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ಆಶೀರ್ವಚನ ನೀಡಿ ಶ್ರೀ ಸತ್ಯನಾರಾಯಣ ವ್ರತ ಮಾಡುವುದರಿಂದ ಮನುಷ್ಯರ ದುಃಖ, ಕಷ್ಟ ಕೋಟಲೆ ದೂರವಾಗಲಿದೆ ಎಂದು ನುಡಿದರು.
ಸಂಸಾರದಲ್ಲಿ ಸುಖ,ದುಃಖ ಎರಡೂ ಇರಬೇಕು,ಸದಾ ಸತ್ಯವನ್ನೆ ನುಡಿಯಬೇಕು ಸಾಧ್ಯವಾದಷ್ಟೂ ಒಳಿತನ್ನೇ ಮಾಡಬೇಕು ಎಂದು ಹೇಳಿದರು.
ಪ್ರತಿ ವರ್ಷ ಈ ರೀತಿಯ ಸಾಮೂಹಿಕ ಸತ್ಯನಾರಾಯಣ ಪೂಜೆ ನಡೆಯಬೇಕೆಂಬುದು ನನ್ನ ಮಹಾದಾಸೆ ಹಾಗೂ ಆಶ್ರಮದಲ್ಲಿ ಪ್ರತಿದಿನ ಸಂಜೆ ಸತ್ಸಂಗ ನಡೆಯಬೇಕು ಎಂಬ ಆಶಯವಿದೆ
ಇದೆಲ್ಲದರಲ್ಲೂ ಭಕ್ತರು ಭಾಗವಹಿಸಬೇಕು ಎಂದು ಸ್ವಾಮೀಜಿ ತಿಳಿಸಿದರು.

ಇಂದು ಸಂಜೆ 6.30ಕ್ಕೆ ಶ್ರೀ ದತ್ತ ವೆಂಕಟೇಶ್ವರ ಸ್ವಾಮಿಗೆ ಪುಷ್ಪಾಲಂಕಾರ,ಶೇಷ ವಾಹನೋತ್ಸವ,ಶಾಂತಿ ಪಾಠ ಮತ್ತು ಶ್ರೀ ದತ್ತ‌ ವೆಂಕಟೇಶ್ವರ ಕ್ಷೇತ್ರದ ರಜತ ಮಹೋತ್ಸವ ಉದ್ಘಾಟನೆ ನಡೆಯಿತು.
ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಸುತ್ತೂರು ಮಠಾಧೀಶರಾದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಮತ್ತು ಅವಧೂತ ದತ್ತಪೀಠದ ಶ್ರೀ ದತ್ತ ವಿಜಯಾನಂದ‌ ತೀರ್ಥ ಸ್ವಾಮೀಜಿ ವಹಿಸಿದ್ದರು.
ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 82 ನೇ ಜನ್ಮದಿನೋತ್ಸವ ಮತ್ತು ನಾದಮಂಟಪದ 26 ನೇ ವಾರ್ಷಿಕೋತ್ಸವ ಕೂಡಾ ನಡೆಯಲಿದ್ದು ಇದರ ಪ್ರಯುಕ್ತ ಅವಧೂತ ದತ್ತ ಪೀಠದಲ್ಲಿ ಇಂದಿನಿಂದ ವಿವಿಧ ಪೂಜಾ ಕಾರ್ಯಕ್ರಮಗಳು ಪ್ರಾರಂಭವಾಗಿವೆ.
ಮೇ.20 ರಿಂದ 28 ರವರೆಗೂ ಆಶ್ರಮದಲ್ಲಿ‌ ಪ್ರತಿದಿನ ಶ್ರೀಚಕ್ರಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *