ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ಮೈಸೂರು,ಮೇ23,Tv10 ಕನ್ನಡ

ವಕೀಲರ ಮುಂದೆ ಅಕ್ಕನ ಮೇಲೆ ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದ ತಮ್ಮ ವಿಡಿಯೋ ಚಿತ್ರೀಕರಿಸಿ ಅವಾಂತರ ನಡೆಸಿದ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.ಪರಿಸ್ಥಿತಿಯನ್ನ ನಿಯಂತ್ರಿಸಲು ಬಂದ ವಕೀಲರ ಮೇಲೂ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.ಘಟನೆಗೆ ಸಂಭಂಧಪಟ್ಟಂತೆ ಹಲ್ಲೆಗೊಳಗಾದ ಮಹಿಳೆ ಸಹೋದರನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಚನಾ ಹಾಗೂ ವಕೀಲರಾದ ಶರತ್ ರಾಜ್ ಹಲ್ಲೆಗೊಳಗಾದವರು.ರಚನಾ ರವರ ಸಹೋದರ ರಂಜಿತ್ ಹಲ್ಲೆ ನಡೆಸಿದ ಆರೋಪಿ.

ರಚನಾ ರವರು ತಮ್ಮ ವಕೀಲರಾದ ಶರತ್ ರಾಜ್ ಜೊತೆ ಕಾರಿನಲ್ಲಿ ತಮ್ಮ ಮನೆ ಮುಂದೆ ಬಂದು ಇಳಿಯುತ್ತಿದ್ದಾಗ ಏಕಾಏಕಿ ಬಂದ ರಂಜಿತ್ ಅವಾಚ್ಯ ಶಬ್ದಗಳನ್ನ ಬಳಿಸಿ ಅಕ್ಕನ ಕೂದಲು ಎಳೆದಾಡಿ ಕಾರಿನಿಂದ ಹೊರಕ್ಕೆ ಎಳೆದು ಹಲ್ಲೆ ನಡೆಸಿ ಬಟ್ಟೆ ಹರಿದುಹಾಕಿ ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ.ಈ ವೇಳೆ ಬಿಡಿಸಲು ಬಂದ ವಕೀಲ ಶರತ್ ರಾಜ್ ಮೇಲೂ ಸಹ ರಂಜಿತ್ ಹಲ್ಲೆ ನಡೆಸಿದ್ದಾನೆ.ಅಕ್ಕಪಕ್ಕದ ಜನ ರಚನಾ ನೆರವಿಗೆ ಬಂದಿದ್ದಾರೆ.ಅಲ್ಲದೆ ಈ ಘಟನೆ ಎದುರು ಮನೆಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರಬಹುದೆಂದು ರಚನಾ ತಿಳಿಸಿದ್ದು ತನ್ನ ತಮ್ಮ ರಂಜಿತ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *