ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ಮೈಸೂರು,ಮೇ23,Tv10 ಕನ್ನಡ

ವಕೀಲರ ಮುಂದೆ ಅಕ್ಕನ ಮೇಲೆ ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದ ತಮ್ಮ ವಿಡಿಯೋ ಚಿತ್ರೀಕರಿಸಿ ಅವಾಂತರ ನಡೆಸಿದ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.ಪರಿಸ್ಥಿತಿಯನ್ನ ನಿಯಂತ್ರಿಸಲು ಬಂದ ವಕೀಲರ ಮೇಲೂ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.ಘಟನೆಗೆ ಸಂಭಂಧಪಟ್ಟಂತೆ ಹಲ್ಲೆಗೊಳಗಾದ ಮಹಿಳೆ ಸಹೋದರನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಚನಾ ಹಾಗೂ ವಕೀಲರಾದ ಶರತ್ ರಾಜ್ ಹಲ್ಲೆಗೊಳಗಾದವರು.ರಚನಾ ರವರ ಸಹೋದರ ರಂಜಿತ್ ಹಲ್ಲೆ ನಡೆಸಿದ ಆರೋಪಿ.

ರಚನಾ ರವರು ತಮ್ಮ ವಕೀಲರಾದ ಶರತ್ ರಾಜ್ ಜೊತೆ ಕಾರಿನಲ್ಲಿ ತಮ್ಮ ಮನೆ ಮುಂದೆ ಬಂದು ಇಳಿಯುತ್ತಿದ್ದಾಗ ಏಕಾಏಕಿ ಬಂದ ರಂಜಿತ್ ಅವಾಚ್ಯ ಶಬ್ದಗಳನ್ನ ಬಳಿಸಿ ಅಕ್ಕನ ಕೂದಲು ಎಳೆದಾಡಿ ಕಾರಿನಿಂದ ಹೊರಕ್ಕೆ ಎಳೆದು ಹಲ್ಲೆ ನಡೆಸಿ ಬಟ್ಟೆ ಹರಿದುಹಾಕಿ ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ.ಈ ವೇಳೆ ಬಿಡಿಸಲು ಬಂದ ವಕೀಲ ಶರತ್ ರಾಜ್ ಮೇಲೂ ಸಹ ರಂಜಿತ್ ಹಲ್ಲೆ ನಡೆಸಿದ್ದಾನೆ.ಅಕ್ಕಪಕ್ಕದ ಜನ ರಚನಾ ನೆರವಿಗೆ ಬಂದಿದ್ದಾರೆ.ಅಲ್ಲದೆ ಈ ಘಟನೆ ಎದುರು ಮನೆಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರಬಹುದೆಂದು ರಚನಾ ತಿಳಿಸಿದ್ದು ತನ್ನ ತಮ್ಮ ರಂಜಿತ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *