ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ಮೈಸೂರು,ಮೇ23,Tv10 ಕನ್ನಡ

ವಕೀಲರ ಮುಂದೆ ಅಕ್ಕನ ಮೇಲೆ ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದ ತಮ್ಮ ವಿಡಿಯೋ ಚಿತ್ರೀಕರಿಸಿ ಅವಾಂತರ ನಡೆಸಿದ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.ಪರಿಸ್ಥಿತಿಯನ್ನ ನಿಯಂತ್ರಿಸಲು ಬಂದ ವಕೀಲರ ಮೇಲೂ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.ಘಟನೆಗೆ ಸಂಭಂಧಪಟ್ಟಂತೆ ಹಲ್ಲೆಗೊಳಗಾದ ಮಹಿಳೆ ಸಹೋದರನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಚನಾ ಹಾಗೂ ವಕೀಲರಾದ ಶರತ್ ರಾಜ್ ಹಲ್ಲೆಗೊಳಗಾದವರು.ರಚನಾ ರವರ ಸಹೋದರ ರಂಜಿತ್ ಹಲ್ಲೆ ನಡೆಸಿದ ಆರೋಪಿ.

ರಚನಾ ರವರು ತಮ್ಮ ವಕೀಲರಾದ ಶರತ್ ರಾಜ್ ಜೊತೆ ಕಾರಿನಲ್ಲಿ ತಮ್ಮ ಮನೆ ಮುಂದೆ ಬಂದು ಇಳಿಯುತ್ತಿದ್ದಾಗ ಏಕಾಏಕಿ ಬಂದ ರಂಜಿತ್ ಅವಾಚ್ಯ ಶಬ್ದಗಳನ್ನ ಬಳಿಸಿ ಅಕ್ಕನ ಕೂದಲು ಎಳೆದಾಡಿ ಕಾರಿನಿಂದ ಹೊರಕ್ಕೆ ಎಳೆದು ಹಲ್ಲೆ ನಡೆಸಿ ಬಟ್ಟೆ ಹರಿದುಹಾಕಿ ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ.ಈ ವೇಳೆ ಬಿಡಿಸಲು ಬಂದ ವಕೀಲ ಶರತ್ ರಾಜ್ ಮೇಲೂ ಸಹ ರಂಜಿತ್ ಹಲ್ಲೆ ನಡೆಸಿದ್ದಾನೆ.ಅಕ್ಕಪಕ್ಕದ ಜನ ರಚನಾ ನೆರವಿಗೆ ಬಂದಿದ್ದಾರೆ.ಅಲ್ಲದೆ ಈ ಘಟನೆ ಎದುರು ಮನೆಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರಬಹುದೆಂದು ರಚನಾ ತಿಳಿಸಿದ್ದು ತನ್ನ ತಮ್ಮ ರಂಜಿತ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ…

ಮೈಸೂರು: ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ.ಎಂ. ರಘು ವಿರುದ್ಧ ಜೀವ ಬೆದರಿಕೆ, ಹಲ್ಲೆ ಆರೋಪ; ಎಫ್‌ಐಆರ್ ದಾಖಲು ಮೈಸೂರು, ಆ.4: ಮೈಸೂರಿನ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ…
ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ…

ಹುಣಸೂರು ಎಸಿ ಕಾವ್ಯಾರಾಣಿ ಲೋಕಾ ಬಲೆಗೆ…5.5 ಲಕ್ಷ ಲಂಚ ಪಡೆಯವ ವೇಳೆ ದಾಳಿ… ಹುಣಸೂರು,ಆ3,Tv10 ಕನ್ನಡ ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಲೋಕಾಯುಕ್ತ ಡಿವೈಎಸ್ಪಿ ಶೈಲೇಂದ್ರ ನೇತೃತ್ವದ…
ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ…

ಸಿಪಿಸಿ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ ಗೊಂದಲ…ಸ್ಪಷ್ಠೀಕರಿಸಿದ ಪರೀಕ್ಷಾ ಪ್ರಾಧಿಕಾರ… ಮೈಸೂರು,ಆ3,Tv10 ಕನ್ನಡ ಪೊಲೀಸ್ ಇಲಾಖೆಯ ಮಿಕ್ಕುಳಿದ ವೃಂದ ಹಾಗೂ ಸಿವಿಲ್ ಪೊಲೀಸ್ ನೇಮಕಾತಿಯ ಲಿಖಿತ ಪರೀಕ್ಷೆ ವೇಳೆ…

Leave a Reply

Your email address will not be published. Required fields are marked *