ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ವಕೀಲರ ಮುಂದೆ ಮಹಿಳೆಗೆ ಹಲ್ಲೆ ನಡೆಸಿ ಬಟ್ಟೆ ಹರಿದು ವಿಡಿಯೋ ಚಿತ್ರೀಕರಿಸಿದ ತಮ್ಮ…ತಡೆಯಲು ಬಂದ ಅಡ್ವೋಕೇಟ್ ಮೇಲೂ ಅಟ್ಯಾಕ್…

ಮೈಸೂರು,ಮೇ23,Tv10 ಕನ್ನಡ

ವಕೀಲರ ಮುಂದೆ ಅಕ್ಕನ ಮೇಲೆ ದಾಳಿ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಟ್ಟೆ ಹರಿದ ತಮ್ಮ ವಿಡಿಯೋ ಚಿತ್ರೀಕರಿಸಿ ಅವಾಂತರ ನಡೆಸಿದ ಘಟನೆ ಮೈಸೂರಿನ ಬೋಗಾದಿಯಲ್ಲಿ ನಡೆದಿದೆ.ಪರಿಸ್ಥಿತಿಯನ್ನ ನಿಯಂತ್ರಿಸಲು ಬಂದ ವಕೀಲರ ಮೇಲೂ ಹಲ್ಲೆ ನಡೆಸಿದ ಆರೋಪ ಮಾಡಲಾಗಿದೆ.ಘಟನೆಗೆ ಸಂಭಂಧಪಟ್ಟಂತೆ ಹಲ್ಲೆಗೊಳಗಾದ ಮಹಿಳೆ ಸಹೋದರನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಚನಾ ಹಾಗೂ ವಕೀಲರಾದ ಶರತ್ ರಾಜ್ ಹಲ್ಲೆಗೊಳಗಾದವರು.ರಚನಾ ರವರ ಸಹೋದರ ರಂಜಿತ್ ಹಲ್ಲೆ ನಡೆಸಿದ ಆರೋಪಿ.

ರಚನಾ ರವರು ತಮ್ಮ ವಕೀಲರಾದ ಶರತ್ ರಾಜ್ ಜೊತೆ ಕಾರಿನಲ್ಲಿ ತಮ್ಮ ಮನೆ ಮುಂದೆ ಬಂದು ಇಳಿಯುತ್ತಿದ್ದಾಗ ಏಕಾಏಕಿ ಬಂದ ರಂಜಿತ್ ಅವಾಚ್ಯ ಶಬ್ದಗಳನ್ನ ಬಳಿಸಿ ಅಕ್ಕನ ಕೂದಲು ಎಳೆದಾಡಿ ಕಾರಿನಿಂದ ಹೊರಕ್ಕೆ ಎಳೆದು ಹಲ್ಲೆ ನಡೆಸಿ ಬಟ್ಟೆ ಹರಿದುಹಾಕಿ ತನ್ನ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಿಸಿದ್ದಾನೆ.ಈ ವೇಳೆ ಬಿಡಿಸಲು ಬಂದ ವಕೀಲ ಶರತ್ ರಾಜ್ ಮೇಲೂ ಸಹ ರಂಜಿತ್ ಹಲ್ಲೆ ನಡೆಸಿದ್ದಾನೆ.ಅಕ್ಕಪಕ್ಕದ ಜನ ರಚನಾ ನೆರವಿಗೆ ಬಂದಿದ್ದಾರೆ.ಅಲ್ಲದೆ ಈ ಘಟನೆ ಎದುರು ಮನೆಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರಬಹುದೆಂದು ರಚನಾ ತಿಳಿಸಿದ್ದು ತನ್ನ ತಮ್ಮ ರಂಜಿತ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *