ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ,ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ,ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮೇ22,Tv10 ಕನ್ನಡ

ಮಹಿಳೆಯೊಬ್ಬರ ವೈಯುಕ್ತಿಕ ಫೋಟೋ,ವಿಡಿಯೋ ಹಾಗೂ ಆಡಿಯೋಗಳನ್ನ ಇನ್ಸ್ಟಾಗ್ರಾಂ ನಲ್ಲಿ ಐಡಿ ಕ್ರಿಯೇಟ್ ಮಾಡಿ ಅಪ್ ಲೋಡ್ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿರುವ ಘಟನೆ ಮೈಸೂರಿನ ಬನ್ನಿಮಂಟಪದ ಅಲೀಂನಗರದಲ್ಲಿ ನಡೆದಿದೆ.ನೊಂದ ಮಹಿಳೆ ಆರೋಪಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನೊಂದ ಮಹಿಳೆ ನಾಯ್ಡುನಗರದ ಮಹಮದ್ ಫೈಜಾನ್ ಎಂಬಾತನ ಜೊತೆ ಎರಡು ವರ್ಷಗಳ ಕಾಲ ರಿಲೇಷನ್ ಷಿಪ್ ಇಟ್ಟುಕೊಂಡಿದ್ದರು.ಆತನ ವರ್ತನೆ ಸರಿ ಇಲ್ಲದ ಕಾರಣ ಬ್ರೇಕ್ ಅಪ್ ಕೂಡ ಆಗಿತ್ತು.ನಂತರ ಮಹಿಳೆ ತಮ್ಮ ಕಸೀನ್ ಜೊತೆ ಮದುವೆ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಈ ವೇಳೆ ಇನ್ಸ್ಟಾಗ್ರಾಂ ನಲ್ಲಿ ಖಾತೆ ತೆರೆದ ವ್ಯಕ್ತಿಯೊಬ್ಬ ಮಹಿಳೆಯ ವೈಯುಕ್ತಿಕ ಫೋಟೋಗಳನ್ನ ಅಪ್ ಲೋಡ್ ಮಾಡಿದ್ದಾರೆ.ನಂತರ ಮತ್ತೊಂದು ಖಾತೆ ತೆರೆದು ಮಹಿಳೆಯ ಗಂಡ ಹಾಗೂ ಎಕ್ಸ್ ಬಾಯ್ ಫ್ರೆಂಡ್ ಫೋಟೊಗಳನ್ನ ಅಪ್ ಲೋಡ್ ಮಾಡಿದ್ದಾರೆ.ಈ ಬೆಳವಣಿಗೆಯಿಂದ ಪತಿ ಮಹಿಳೆಗೆ ವಿಚ್ಛೇದನ ನೀಡಿದ್ದಾರೆ.ಇದಾದ ನಂತರ ತನ್ನ ಎಕ್ಸ್ ಬಾಯ್ ಫ್ರೆಂಡ್ ಫೋಟೋಗಳನ್ನ ಅಪ್ ಲೋಡ್ ಮಾಡಿರುವುದನ್ನ ಮಹಿಳೆ ಖಚಿತಪಡಿಸಿಕೊಂಡಿದ್ದಾರೆ.ಈ ವಿಚಾರ ತಿಳಿದ ನಂತರ ಬಾಯ್ ಫ್ರೆಂಡ್ ತನನ್ನ ಮದುವೆ ಆಗುವಂತೆ ಒತ್ತಾಯಿಸಿ ಧಂಕಿ ಹಾಕಿದ್ದಾನೆ.ಇಲ್ಲದಿದ್ದಲ್ಲಿ ಬೆತ್ತಲೆ ಫೋಟೋಗಳನ್ನ ಅಪ್ ಲೋಡ್ ಮಾಡುವುದಾಗಿ ಬೆದರಿಸಿದ್ದಾನೆ.ಇದರಿಂದ ಹೆದರಿದ ಮಹಿಳೆ ಸಂಪರ್ಕ ಕಡಿದುಕೊಂಡಿದ್ದಾರೆ.ಈ ಸಂಧರ್ಭದಲ್ಲಿ ಮತ್ತೊಂದು ಹೆಸರಲ್ಲಿ ಐಡಿ ಕ್ರಿಯೇಟ್ ಆಗಿ ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ ಹಾಗೂ ಆಡಿಯೊ ಅಪ್ ಲೋಡ್ ಮಾಡಲಾಗಿದೆ.ಇದು ಸಂಭಂಧಿಕರು,ಕುಟುಂಬಸ್ಥರು,ಸ್ನೇಹಿತರು ಹಾಗೂ ನೆರೆಹೊರೆಯವರಿಗೆ ಸೆಂಡ್ ಮಾಡಿ ಮಹಿಳೆಗೆ ಮಾನಸಿಕ ಕಿರುಕುಳ ನೀಡಲಾಗಿದೆ.ನೊಂದ ಮಹಿಳೆ ತನ್ನ ಎಕ್ಸ್ ಬಾಯ್ ಫ್ರೆಂಡ್ ವಿರುದ್ದ ಪ್ರಕರಣ ದಾಖಲಿಸಿ ವಿಡಿಯೋ ಫೋಟೋಗಳನ್ನ ಅಪ್ ಲೋಡ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *