ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ,ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ,ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿ ಕಿರುಕುಳ…ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಮೇ22,Tv10 ಕನ್ನಡ

ಮಹಿಳೆಯೊಬ್ಬರ ವೈಯುಕ್ತಿಕ ಫೋಟೋ,ವಿಡಿಯೋ ಹಾಗೂ ಆಡಿಯೋಗಳನ್ನ ಇನ್ಸ್ಟಾಗ್ರಾಂ ನಲ್ಲಿ ಐಡಿ ಕ್ರಿಯೇಟ್ ಮಾಡಿ ಅಪ್ ಲೋಡ್ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿರುವ ಘಟನೆ ಮೈಸೂರಿನ ಬನ್ನಿಮಂಟಪದ ಅಲೀಂನಗರದಲ್ಲಿ ನಡೆದಿದೆ.ನೊಂದ ಮಹಿಳೆ ಆರೋಪಿ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಮೈಸೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನೊಂದ ಮಹಿಳೆ ನಾಯ್ಡುನಗರದ ಮಹಮದ್ ಫೈಜಾನ್ ಎಂಬಾತನ ಜೊತೆ ಎರಡು ವರ್ಷಗಳ ಕಾಲ ರಿಲೇಷನ್ ಷಿಪ್ ಇಟ್ಟುಕೊಂಡಿದ್ದರು.ಆತನ ವರ್ತನೆ ಸರಿ ಇಲ್ಲದ ಕಾರಣ ಬ್ರೇಕ್ ಅಪ್ ಕೂಡ ಆಗಿತ್ತು.ನಂತರ ಮಹಿಳೆ ತಮ್ಮ ಕಸೀನ್ ಜೊತೆ ಮದುವೆ ಆಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.ಈ ವೇಳೆ ಇನ್ಸ್ಟಾಗ್ರಾಂ ನಲ್ಲಿ ಖಾತೆ ತೆರೆದ ವ್ಯಕ್ತಿಯೊಬ್ಬ ಮಹಿಳೆಯ ವೈಯುಕ್ತಿಕ ಫೋಟೋಗಳನ್ನ ಅಪ್ ಲೋಡ್ ಮಾಡಿದ್ದಾರೆ.ನಂತರ ಮತ್ತೊಂದು ಖಾತೆ ತೆರೆದು ಮಹಿಳೆಯ ಗಂಡ ಹಾಗೂ ಎಕ್ಸ್ ಬಾಯ್ ಫ್ರೆಂಡ್ ಫೋಟೊಗಳನ್ನ ಅಪ್ ಲೋಡ್ ಮಾಡಿದ್ದಾರೆ.ಈ ಬೆಳವಣಿಗೆಯಿಂದ ಪತಿ ಮಹಿಳೆಗೆ ವಿಚ್ಛೇದನ ನೀಡಿದ್ದಾರೆ.ಇದಾದ ನಂತರ ತನ್ನ ಎಕ್ಸ್ ಬಾಯ್ ಫ್ರೆಂಡ್ ಫೋಟೋಗಳನ್ನ ಅಪ್ ಲೋಡ್ ಮಾಡಿರುವುದನ್ನ ಮಹಿಳೆ ಖಚಿತಪಡಿಸಿಕೊಂಡಿದ್ದಾರೆ.ಈ ವಿಚಾರ ತಿಳಿದ ನಂತರ ಬಾಯ್ ಫ್ರೆಂಡ್ ತನನ್ನ ಮದುವೆ ಆಗುವಂತೆ ಒತ್ತಾಯಿಸಿ ಧಂಕಿ ಹಾಕಿದ್ದಾನೆ.ಇಲ್ಲದಿದ್ದಲ್ಲಿ ಬೆತ್ತಲೆ ಫೋಟೋಗಳನ್ನ ಅಪ್ ಲೋಡ್ ಮಾಡುವುದಾಗಿ ಬೆದರಿಸಿದ್ದಾನೆ.ಇದರಿಂದ ಹೆದರಿದ ಮಹಿಳೆ ಸಂಪರ್ಕ ಕಡಿದುಕೊಂಡಿದ್ದಾರೆ.ಈ ಸಂಧರ್ಭದಲ್ಲಿ ಮತ್ತೊಂದು ಹೆಸರಲ್ಲಿ ಐಡಿ ಕ್ರಿಯೇಟ್ ಆಗಿ ಮಹಿಳೆಯ ವೈಯುಕ್ತಿಕ ಫೋಟೋ,ವಿಡಿಯೋ ಹಾಗೂ ಆಡಿಯೊ ಅಪ್ ಲೋಡ್ ಮಾಡಲಾಗಿದೆ.ಇದು ಸಂಭಂಧಿಕರು,ಕುಟುಂಬಸ್ಥರು,ಸ್ನೇಹಿತರು ಹಾಗೂ ನೆರೆಹೊರೆಯವರಿಗೆ ಸೆಂಡ್ ಮಾಡಿ ಮಹಿಳೆಗೆ ಮಾನಸಿಕ ಕಿರುಕುಳ ನೀಡಲಾಗಿದೆ.ನೊಂದ ಮಹಿಳೆ ತನ್ನ ಎಕ್ಸ್ ಬಾಯ್ ಫ್ರೆಂಡ್ ವಿರುದ್ದ ಪ್ರಕರಣ ದಾಖಲಿಸಿ ವಿಡಿಯೋ ಫೋಟೋಗಳನ್ನ ಅಪ್ ಲೋಡ್ ಮಾಡಿದವರ ವಿರುದ್ದ ಕ್ರಮ ಕೈಗೊಳ್ಳುವಂತೆ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…
ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ…

ನಗರಾಭಿವೃದ್ದಿ ಸಚಿವರ ಆಪ್ತಕಾರ್ಯದರ್ಶಿಯಾಗಿ ಕೆ.ಆರ್.ರಕ್ಷಿತ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಆರ್.ರಕ್ಷಿತ್ ಹೆಗಲಿಗೆ ಮಹತ್ತರ ಜವಾಬ್ದಾರಿ… ಮೈಸೂರು,ಜೂ9,Tv10 ಕನ್ನಡ ಎಂಡಿಎ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿ ಹಾಗೂ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…

Leave a Reply

Your email address will not be published. Required fields are marked *