ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಶವಾಗಾರ ಶೀತಲ ಯಂತ್ರಗಳಿಗೆ ಕೊನೆಗೂ ರಿಪೇರಿ ಭಾಗ್ಯ ದೊರೆತಿದೆ.ದುರಸ್ಥಿಗೆ ಬಂದಿದ್ದ ಮೂರು ಯಂತ್ರಗಳನ್ನ ಸರಿಪಡಿಸಿದ ಅಧಿಕಾರಿಗಳು ಯಥಾಸ್ಥಿತಿಗೆ ತರುವ ಮೂಲಕ ಅಲ್ಲಿನ ಸಿಬ್ಬಂದಿಗಳು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.ಇದು Tv10 ವರದಿ ಫಲಶೃತಿ.

ಕೆಲವು ದಿನಗಳ ಹಿಂದಷ್ಟೆ ಮೈಸೂರು ಮೆಡಿಕಲ್ ಕಾಲೇಜಿನ ಆವರಣದಲ್ಲಿರುವ ಶವಾಗಾರದ ಶೀತಲ ಯಂತ್ರಗಳು ಕೆಟ್ಟುನಿಂತ ಬಗ್ಗೆ Tv10 ವರದಿ ಮಾಡಿತ್ತು.ಮೂರು ಯಂತ್ರಗಳ ಪೈಕಿ ಎರಡು ಯಂತ್ರಗಳು ಕೈಕೊಟ್ಟ ಪರಿಣಾಮ ಮೃತದೇಹಗಳು ಕೊಳೆತು ದುರ್ನಾತ ಬೀರುತ್ತಿರುವ ಬಗ್ಗೆ ವರದಿ ಮಾಡಲಾಗಿತ್ತು.ಎಚ್ಚೆತ್ತ ಡೀನ್ ಡಾ.ದಾಕ್ಷಾಯಿಣಿ ರವರು ದುರಸ್ಥಿಗೆ ಬಂದ ಯಂತ್ರಗಳನ್ನ ಸುಸ್ಥಿತಿಗೆ ತಂದಿದ್ದಾರೆ.ಕೊಳೆತು ದುರ್ವಾಸನೆ ಬೀರುತ್ತಿದ್ದ ಮೃತದೇಹಗಳ ಮಧ್ಯೆ ಸಿಬ್ಬಂದಿಗಳು ಕೆಲಸ ಮಾಡಬೇಕಿತ್ತು.ಅಲ್ಲದೆ ಶವಪರೀಕ್ಷೆ ನಂತರ ಮೃತದೇಹಗಳನ್ನ ಕೊಂಡೊಯ್ಯಲು ಬರುತ್ತಿದ್ದ ಸಂಭಂಧಿಕರಿಗೂ ದುರ್ವಾಸನೆ ಕಿರಿಕಿರಿ ಮಾಡುತ್ತಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಸಧ್ಯ ಇದೀಗ ಶೀತಲ ಯಂತ್ರಗಳಿಗೆ ರಿಪೇರಿ ಭಾಗ್ಯ ದೊರೆತಿದೆ.ಇದೀಗ ಮೃತದೇಹಗಳು ಕೊಳೆಯದಂತೆ ಸಂರಕ್ಷಿಸಬಹುದಾಗಿದೆ. ಸಿಬ್ಬಂದಿಗಳೀಗ ನಿಟ್ಟುಸಿರು ಬಿಡುವಂತಾಗಿದೆ…

Spread the love

Related post

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ…

ಕೆಆರ್ ಎಸ್ ಜಲಾಶಯದಿಂದ 1.30 ಲಕ್ಷ ಕ್ಯೂಸೆಕ್ಸ್ ನೀರು ಬಿಡುಗಡೆ…ನದಿಪಾತ್ರದ ಜನತೆಗೆ…

ಮಂಡ್ಯ,ಜು27,Tv10 ಕನ್ನಡಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆ ಕೆ.ಆರ್.ಎಸ್ ಜಲಾಶಯದಿಂದ 1,30,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತದೆ.ಹೀಗಾಗಿಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು…
ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್…
ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ…

Leave a Reply

Your email address will not be published. Required fields are marked *