ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಯಥಾಸ್ಥಿತಿಗೆ ಮರಳಿದ ಮೈಸೂರು ಶವಾಗಾರ ಶೀತಲ ಯಂತ್ರಗಳು…Tv10 ವರದಿ ಫಲಶೃತಿ…ನಿಟ್ಟುಸಿರು ಬಿಟ್ಟ ಸಿಬ್ಬಂದಿ…

ಮೈಸೂರು,ಮೇ23,Tv10 ಕನ್ನಡ

ಮೈಸೂರು ಶವಾಗಾರ ಶೀತಲ ಯಂತ್ರಗಳಿಗೆ ಕೊನೆಗೂ ರಿಪೇರಿ ಭಾಗ್ಯ ದೊರೆತಿದೆ.ದುರಸ್ಥಿಗೆ ಬಂದಿದ್ದ ಮೂರು ಯಂತ್ರಗಳನ್ನ ಸರಿಪಡಿಸಿದ ಅಧಿಕಾರಿಗಳು ಯಥಾಸ್ಥಿತಿಗೆ ತರುವ ಮೂಲಕ ಅಲ್ಲಿನ ಸಿಬ್ಬಂದಿಗಳು ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.ಇದು Tv10 ವರದಿ ಫಲಶೃತಿ.

ಕೆಲವು ದಿನಗಳ ಹಿಂದಷ್ಟೆ ಮೈಸೂರು ಮೆಡಿಕಲ್ ಕಾಲೇಜಿನ ಆವರಣದಲ್ಲಿರುವ ಶವಾಗಾರದ ಶೀತಲ ಯಂತ್ರಗಳು ಕೆಟ್ಟುನಿಂತ ಬಗ್ಗೆ Tv10 ವರದಿ ಮಾಡಿತ್ತು.ಮೂರು ಯಂತ್ರಗಳ ಪೈಕಿ ಎರಡು ಯಂತ್ರಗಳು ಕೈಕೊಟ್ಟ ಪರಿಣಾಮ ಮೃತದೇಹಗಳು ಕೊಳೆತು ದುರ್ನಾತ ಬೀರುತ್ತಿರುವ ಬಗ್ಗೆ ವರದಿ ಮಾಡಲಾಗಿತ್ತು.ಎಚ್ಚೆತ್ತ ಡೀನ್ ಡಾ.ದಾಕ್ಷಾಯಿಣಿ ರವರು ದುರಸ್ಥಿಗೆ ಬಂದ ಯಂತ್ರಗಳನ್ನ ಸುಸ್ಥಿತಿಗೆ ತಂದಿದ್ದಾರೆ.ಕೊಳೆತು ದುರ್ವಾಸನೆ ಬೀರುತ್ತಿದ್ದ ಮೃತದೇಹಗಳ ಮಧ್ಯೆ ಸಿಬ್ಬಂದಿಗಳು ಕೆಲಸ ಮಾಡಬೇಕಿತ್ತು.ಅಲ್ಲದೆ ಶವಪರೀಕ್ಷೆ ನಂತರ ಮೃತದೇಹಗಳನ್ನ ಕೊಂಡೊಯ್ಯಲು ಬರುತ್ತಿದ್ದ ಸಂಭಂಧಿಕರಿಗೂ ದುರ್ವಾಸನೆ ಕಿರಿಕಿರಿ ಮಾಡುತ್ತಿತ್ತು.ಈ ಬಗ್ಗೆ Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು.ಸಧ್ಯ ಇದೀಗ ಶೀತಲ ಯಂತ್ರಗಳಿಗೆ ರಿಪೇರಿ ಭಾಗ್ಯ ದೊರೆತಿದೆ.ಇದೀಗ ಮೃತದೇಹಗಳು ಕೊಳೆಯದಂತೆ ಸಂರಕ್ಷಿಸಬಹುದಾಗಿದೆ. ಸಿಬ್ಬಂದಿಗಳೀಗ ನಿಟ್ಟುಸಿರು ಬಿಡುವಂತಾಗಿದೆ…

Spread the love

Related post

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…
ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ…

ಸರ್ಕಾರಿ ಜಾಗದಲ್ಲಿ ಅಕ್ರಮ ಹೋಟೆಲ್ ನಿರ್ಮಾಣ ಆರೋಪ – ಜಿಲ್ಲಾಧಿಕಾರಿ ಗಮನ ಹರಿಸಲು ರೈತರ ಮನವಿ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಸಮೀಪದ ಸರ್ವೇ ನಂ.218/1ಕ್ಕೆ ಸೇರಿದ ಸರ್ಕಾರಿ…

Leave a Reply

Your email address will not be published. Required fields are marked *