ಯರಗನಹಳ್ಳಿ ಅನಿಲಸೋರಿಕೆ ದುರಂತ…ಕುಟುಂಬಕ್ಕೆ ಸಾಂತ್ವನ ತಿಳಿಸಿದ ಸಿಎಂ ಸಿದ್ದರಾಮಯ್ಯ…

ಯರಗನಹಳ್ಳಿ ಅನಿಲಸೋರಿಕೆ ದುರಂತ…ಕುಟುಂಬಕ್ಕೆ ಸಾಂತ್ವನ ತಿಳಿಸಿದ ಸಿಎಂ ಸಿದ್ದರಾಮಯ್ಯ…

ಮೈಸೂರು,ಮೇ23,Tv10 ಕನ್ನಡ

ಮೈಸೂರಿನ ಯರಗನಹಳ್ಳಿಯಲ್ಲಿ ಅನಿಲ ಸೋರಿಕೆಯಿಂದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ
ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, ಕುಮಾರಸ್ವಾಮಿ ಅವರ ಇಡೀ ಕುಟುಂಬ ಸದಸ್ಯರು ಸಾವನ್ನಪ್ಪಿದ್ದಾರೆ.
ಅವರ ಪತ್ನಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
ಗ್ಯಾಸ್ ಲೀಕ್ ಆಗಿ
ಅವರ ಇಡೀ ಕುಟುಂಬ ನಾಶವಾಗಿದೆ.ಗಂಡ ಹೆಂಡತಿ ಇಬ್ಬರು ಒಳಗೆ ಮಲಗಿದ್ದರು.ಇಬ್ಬರು ಮಕ್ಕಳು ಹೊರಗಡೆ ಹಾಲ್ ನಲ್ಲಿ ಮಲಗಿದ್ದರು.
ಎಲ್ಲರೂ ಕೂಡ ನಿದ್ರೆಯಲ್ಲೇ ಪ್ರಾಣ ಬಿಟ್ಟಿದ್ದಾರೆ.ಅವರ ತಂದೆ ಮೂಲತಃ ಚಿಕ್ಕಮಗಳೂರಿನ ಕಡೂರಿನವರು.ಇವರು ಮೈಸೂರಿಗೆ ಬಂದು 20 ವರ್ಷವಾಗಿದೆ.ಚಿಕ್ಕಮನೆಯಲ್ಲಿ ವಾಸವಾಗಿದ್ದರು.
ಅವರ ಕುಟುಂಬಸ್ತರೆಲ್ಲ ಇದೇ ಮೊಹಲ್ಲಾದ ನಿವಾಸಿಗಳಾಗಿದ್ದಾರೆ.
ನಾನು ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದೇನೆ.ಮೃತಪಟ್ಟ ನಾಲ್ವರನ್ನು ಸೇರಿ ತಲಾ 3 ಲಕ್ಷದಂತೆ ಒಟ್ಟು 12 ಲಕ್ಷ ಪರಿಹಾರವನ್ನು ಸಚಿವ ಮಹದೇವಪ್ಪ ಘೋಷಿಸಿದ್ದರು.
ಅದಕ್ಕೆ ನಾನು ಅನುಮೋದನೆ ನೀಡಿದ್ದೇನೆ.
ಮೃತರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ನೀಡಲಿ ಮತ್ತು
ಅವರ ಆತ್ಮಕ್ಕೆ ಶಾಂತಿ ದೊರಕಲಿ.
ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಹೇಳಿದ್ದಾರೆ…

Spread the love

Related post

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು ಮುರಿತ…

ಮರದ ಬಳಿ ಮಲಗಿದ್ದ ರೈತನ ಕಾಲುಗಳ ಮೇಲೆ ಹರಿದ ಟಿಪ್ಪರ್…ಎರಡು ಕಾಲುಗಳು…

ಮಂಡ್ಯ,ಏ30,Tv10 ಕನ್ನಡ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಮಂಡ್ಯ ಜಿಲ್ಲೆ ಕೆ.ಆರ್‌‌.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.ಪುಟ್ಟೇಗೌಡ ಎಂಬುವವರ ಮೇಲೆ ಹರಿದ…
ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮಳೆ ಎಫೆಕ್ಟ್…ಮನೆ ಮೇಲೆ ಉರುಳಿದ ಮರ,ವಿದ್ಯುತ್ ಕಂಬ…ತಪ್ಪಿದ ಅನಾಹುತ…ಸ್ಥಳಕ್ಕೆ ಬಾರದ ಅಧಿಕಾರಿಗಳು…

ಮೈಸೂರು,ಏ30,Tv10 ಕನ್ನಡ ನಿನ್ನೆ ಸುರಿದ ಭಾರಿ ಮಳೆಗೆ ಮನೆಯೊಂದರ ಮೇಲೆ ವಿದ್ಯುತ್ ಕಂಬ ಹಾಗೂ ಮರ ಉರುಳಿಬಿದ್ದಿದೆ.ಮೈಸೂರಿನ ಬೃಂದಾವನ ಬಡಾವಣೆ 7 ನೇ ಕ್ರಾಸ್ ನ ಪ್ರಿಯದರ್ಶಿನಿ ಆಸ್ಪತ್ರೆ…
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ ಆಸ್ತಿ ಕಬಳಿಸಲು ದಾಖಲೆ ಮಾಡಿಕೊಟ್ಟ ಆರೋಪ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಅನುಮತಿ ಕೋರಿ ಪತ್ರ…

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ವಿರುದ್ದ ಶಿಸ್ತುಕ್ರಮಕ್ಕೆ ಮುಂದಾದ ಪ್ರಾಧಿಕಾರ…ಮೃತ ವ್ಯಕ್ತಿಯ…

ಮೈಸೂರು,ಏ29,Tv10 ಕನ್ನಡ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಮತ್ತೊಂದು ವಿಕೆಟ್ ಉರುಳಲಿದೆ.ಕೆಲವೇ ದಿನಗಳ ಹಿಂದೆ ಒಬ್ಬರನ್ನ ಅಮಾನತುಗೊಳಿಸಿದ್ದ ಆಯುಕ್ತರು ಇಂದು ಮತ್ತೊಬ್ಬ ಅಧಿಕಾರಿ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲು ಸಜ್ಜಾಗಿದ್ದಾರೆ.ಸೂಕ್ತ…

Leave a Reply

Your email address will not be published. Required fields are marked *