ಕಾರಿಗೆ ಸಿಲುಕಿ ಮಹಿಳೆ ಸಾವು…ಆತ್ಮಹತ್ಯೆ ಶಂಕೆ…

ಹುಣಸೂರು,ಮೇ24,Tv10 ಕನ್ನಡ

ಚಲಿಸುತ್ತಿದ್ದ ಕಾರಿಗೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಹುಣಸೂರಿನ ಜಡಗನಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಮಹಿಳೆ ಸಾವು ಆತ್ಮಹತ್ಯೆ ಎಂದು ಶಂಕಿಸಲಾಗಿದೆ.ಜಡಗನಕೊಪ್ಪಲು ಮುಖ್ಯರಸ್ತೆಯ ಮಧ್ಯದಲ್ಲಿ ನಿಂತ ಮಹಿಳೆ ಭಾರಿ ವಾಹನಗಳಿಗೆ ಸಿಲುಕಲು ಯತ್ನಿಸುತ್ತಿದ್ದಳೆಂದು ಹೇಳಲಾಗಿದೆ.ಲಾರಿಯೊಂದಕ್ಕೆ ಸಿಲುಕಬೇಕಿದ್ದ ಮಹಿಳೆ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿಸಿಕೊಂಡಿದ್ದಾಳೆ.ನಂತರ ಹಿಂದೆಯೇ ಬರುತ್ತಿದ್ದ ಕಾರಿಗೆ ಉದ್ದೇಶಪೂರ್ವಕವಾಗಿ ಸಿಲುಕಿ ಸಾವನ್ನಪ್ಪಿದ್ದಾಳೆಂದು ಹೇಳಲಾಗಿದೆ.ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕಾರನ್ನ ವಶಕ್ಕೆ ಪಡೆದಿದ್ದಾರೆ.ಮೃತಪಟ್ಟ ಮಹಿಳೆಯ ಮಾಹಿತಿ ಕಲೆಹಾಕಲು ಪೊಲೀಸರು ಮುಂದಾಗಿದ್ದಾರೆ.ಪ್ರತ್ಯಕ್ಷದರ್ಶಿಯೊಬ್ಬರು ಮಹಿಳೆಯ ಈ ಯತ್ನವನ್ನ ನೋಡಿರುವುದಾಗಿ ತಿಳಿದು ಬಂದಿದೆ.ಅಲ್ಲದೆ ಈ ವಿಚಾರವನ್ನ 112 ಪೊಲೀಸ್ ವಾಹನಕ್ಕೂ ಮುಟ್ಟಿಸಿದ್ದಾರೆಂದು ಹೇಳಲಾಗಿದೆ.ಮಹಿಳೆಯ ಸಾವು ಆಕಸ್ಮುಕವೋ ಅಥವಾ ಆತ್ಮಹತ್ಯೆಯೋ ತನಿಖೆಯಲ್ಲಿ ಖಚಿತಪಡಿಸಬೇಕಿದೆ…

Spread the love

Related post

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು…

ಬಿಸಿ ನೀರಿನ ಪಾತ್ರೆಯಲ್ಲಿ ಬಿದ್ದು ಮಗು ಸಾವು… ಹುಣಸೂರು,ಡಿ20,Tv10 ಕನ್ನಡ ಸುಡುತ್ತಿರುವ ಬಿಸಿನೀರಿನ ಪಾತ್ರೆಗೆ ಬಿದ್ದು ಹೆಣ್ಣುಮಗು ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ವಿಜಯಗಿರಿ ಹಾಡಿಯಲ್ಲಿ ನಡೆದಿದೆ. ಆದಿವಾಸಿ…
ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಡಿ19,Tv10 ಕನ್ನಡ ಕ್ಲುಲ್ಲಕ ಕಾರಣಕ್ಕೆ ಸ್ನೇಹಿತನನ್ನೇ ಕೊಲೆ ಮಾಡಿರುವ ಘಟನೆ ಹುಣಸೂರು ನಗರದಲ್ಲಿ ನಡೆದಿದೆ.ನಿಜಾಂ ಮೊಹಲ್ಲಾದ ನಿವಾಸಿ ಖಾಜಾಪೀರ್(44)ಕೊಲೆಯಾದ…
ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ…

ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಪುತ್ರನ ಗೂಂಡಾಗಿರಿ…ಆಸ್ತಿ ವಿಚಾರದಲ್ಲಿ ದರ್ಪ…ಮೊಬೈಲ್ ನಲ್ಲಿ ಸೆರೆಯಾದ ಬೆದರಿಕೆ… ಮಂಡ್ಯ,ಡಿ19,Tv10 ಕನ್ನಡ ಜಮೀನು ವಿಚಾರದಲ್ಲಿ ಮಾಜಿ ಶಾಸಕ ಹಾಗೂ ಪುತ್ರ ವ್ಯಕ್ತಿ ಮೇಲೆ…

Leave a Reply

Your email address will not be published. Required fields are marked *