ಬದುಕಿರುವ ವ್ಯಕ್ತಿಗೆ ಮರಣಪ್ರಮಾಣ ಪತ್ರ ಸೃಷ್ಠಿ…ವಿಎ,ಆರ್ ಐ,ಶಿರಸ್ತೇದಾರ್ ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

ಬದುಕಿರುವ ವ್ಯಕ್ತಿಗೆ ಮರಣಪ್ರಮಾಣ ಪತ್ರ ಸೃಷ್ಠಿ…ವಿಎ,ಆರ್ ಐ,ಶಿರಸ್ತೇದಾರ್ ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

ನಂಜನಗೂಡು,ಮೇ25,Tv10 ಕನ್ನಡ

ಬದುಕಿರುವ ವ್ಯಕ್ತಿಗೆ ಮೃತಪಟ್ಟಿರುವುದಾಗಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸಿದ ವ್ಯಕ್ತಿಗಳು ಹಾಗೂ ನಕಲಿ ದಾಖಲೆ ಸೃಷ್ಟಿಸಲು ಶಾಮೀಲಾದ ರೆವಿನ್ಯೂ ಇಲಾಖೆ ಅಧಿಕಾರಿಗಳ ವಿರುದ್ದ ನಂಜನಗೂಡಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಓರ್ವ ಅಧಿಕಾರಿ ವಿರುದ್ದ ಇಲಾಖೆಯಿಂದ 1-4 ವಿಚಾರಣೆ ಆದೇಶ ಹೊರಡಿಸಲಾಗಿದೆ.ಅಲ್ಲದೆ ಮರಣ ಪ್ರಮಾಣ ಪತ್ರ ನೀಡಿದ ಅಂದಿನ ವಿಎ ಹಾಗೂ ಇಂದು  ಹೆಚ್.ಡಿ.ಕೋಟೆಯಲ್ಲಿ ಆರ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿಶ್ವನಾಥ್ ರವರನ್ನ ಪ್ರಕರಣದಲ್ಲಿ ಕೈ ಬಿಟ್ಟಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.

ನಂಜನಗೂಡು ತಾಲೂಕು ಕಸಬಾ ಹೋಬಳಿ ಗೀಕಳ್ಳಿ ಗ್ರಾಮದ ನಿವಾಸಿಗಳಾದ ಕೃಷ್ಣೇಗೌಡ,ಶಿವಮಲ್ಲೇಗೌಡ ಹಾಗೂ ಗೊಳೂರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಿಗ ಮಂಜುನಾಥ್,ರಾಜಸ್ವ ನಿರೀಕ್ಷಕ ಪ್ರಕಾಶ್,ಶಿರಸ್ತೇದಾರ್ ಶ್ರೀನಾಥ್ ವಿರುದ್ದ FIR ದಾಖಲಾಗಿದೆ.ಬೆಂಗಳೂರು ನಿವಾಸಿ ನಾಗರಾಜರಾವ್ ಎಂಬುವರು ನೀಡಿದ ದೂರಿನ ಹಿನ್ನಲೆ ಬಿಳಿಗೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಾಗರಾಜರಾವ್ ಹಾಗೂ ಚಂದ್ರಶೇಖರ್ ಸಹೋದರರು.ನಾಗರಾಜರಾವ್ ಬೆಂಗಳೂರಿನಲ್ಲಿದ್ದಾರೆ.ಚಂದ್ರಶೇಖರ್ ಕೆನಡಾದಲ್ಲಿದ್ದರು.ಇವರಿಗೆ ನಂಜನಗೂಡಿನ ಗೀಕಳ್ಳಿ ಗ್ರಾಮದಲ್ಲಿ ಸರ್ವೆ ನಂಬರ್ 444 ರಲ್ಲಿ 1 ಎಕ್ರೆ 20 ಗುಂಟೆ ಹಾಗೂ ಸರ್ವೆ ನಂ.442 ರಲ್ಲಿ 1 ಎಕ್ರೆ 20 ಗುಂಟೆ ಜಮೀನು ಪಿತ್ರಾರ್ಜಿತ ಆಸ್ತಿಯಾಗಿ ಬಂದಿದೆ.ಕೆನಡಾದಲ್ಲಿರುವ ಚಂದ್ರಶೇಖರ್ ಇದೇ ಏಪ್ರಿಲ್ 14 ರಂದು ಮೃತಪಟ್ಟಿದ್ದಾರೆ.ಸಹೋದರ ನಾಗರಾಜ ರಾವ್ ರವರು ಮೂರು ತಿಂಗಳ ಹಿಂದೆ ಕಂದಾಯ ಕಟ್ಟಲು ಇಲಾಖೆಗೆ ತೆರಳಿದ ವೇಳೆ ಶಾಖ್ ಆಗಿದೆ.ಚಂದ್ರಶೇಖರ್ ಈಗಾಗಲೇ ಮೃತಪಟ್ಟಿರುವುದಾಗಿ ಮರಣ ಪ್ರಮಾಣಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಜಮೀನಿನ ಅಕ್ಕಪಕ್ಕದಲ್ಲಿದ್ದ ಕೃಷ್ಣೇಗೌಡ ಹಾಗೂ ಶಿವಮಲ್ಲೇಗೌಡ ತಮ್ಮ ಹೆಸರಿಗೆ ಜಮೀನನ್ನ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸುವ ಉದ್ದೇಶದಿಂದ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿದ ಕೃಷ್ಣೇಗೌಡ,ಶಿವಮಲ್ಲೇ ಗೌಡ ಹಾಗೂ ನಕಲಿ ದಾಖಲೆ ಸೃಷ್ಟಿಸಲು ಶಾಮೀಲಾದ ಗ್ರಾಮ ಲೆಕ್ಕಿಗ ಮಂಜುನಾಥ್,ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್ ಮತ್ತು ಶಿರಸ್ತೇದಾರ್ ಶ್ರೀನಾಥ್ ರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನಾಗರಾಜರಾವ್ ರವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ನಗರದಲ್ಲಿ ಖಾಕಿ ಪಡೆ ಹೈ ಅಲರ್ಟ್…ಅಶೋಕಾ ರಸ್ತೆಯಲ್ಲಿ ಗಸ್ತು…ಜ್ಯೂಯಲರಿ ಮಳಿಗೆ,ಬ್ಯಾಂಕ್ ಭದ್ರತೆ ಬಗ್ಗೆ ಪರಿಶೀಲನೆ…ಸಲಹೆ ಸೂಚನೆ…

ನಗರದಲ್ಲಿ ಖಾಕಿ ಪಡೆ ಹೈ ಅಲರ್ಟ್…ಅಶೋಕಾ ರಸ್ತೆಯಲ್ಲಿ ಗಸ್ತು…ಜ್ಯೂಯಲರಿ ಮಳಿಗೆ,ಬ್ಯಾಂಕ್ ಭದ್ರತೆ…

ಮೈಸೂರು,ಜ20,Tv10 ಕನ್ನಡ ದರೋಡೆ ಪ್ರಕರಣಗಳು ಘಟಿಸಿದ ಬೆನ್ನ ಹಿಂದೆಯೇ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ.ಸಾಂಸ್ಕೃತಿಕ ನಗರಿಯಲ್ಲಿ ಯಾವುದೇ ಪ್ರಕರಣಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಲು ಮುಂದಾಗಿದ್ದಾರೆ.…
ಮೇಕಪ್ ಆರ್ಟಿಸ್ಟ್ ಖಾಸಗಿ ಫೋಟೋಸ್ ವಿಡಿಯೋ ತೆಗೆದ ಛಾಯಾಗ್ರಾಹಕ…ಮಹಿಳೆ ಕೊಟ್ಟ ಸಾಲ ತೀರಿಸಲು ಸಾಧ್ಯವಾಗದೆ ಬ್ಲಾಕ್ ಮೇಲ್…

ಮೇಕಪ್ ಆರ್ಟಿಸ್ಟ್ ಖಾಸಗಿ ಫೋಟೋಸ್ ವಿಡಿಯೋ ತೆಗೆದ ಛಾಯಾಗ್ರಾಹಕ…ಮಹಿಳೆ ಕೊಟ್ಟ ಸಾಲ…

ಮೈಸೂರು,ಜ20,Tv10 ಕನ್ನಡ ಆರ್ಥಿಕ ಸಂಕಷ್ಟದಲ್ಲಿದ್ದ ಸ್ನೇಹಿತನಿಗೆ ಕೊಟ್ಟಿದ್ದ ಸಾಲ ವಾಪಸ್ ಹಿಂದಿರುಗಿಸುವಂತೆ ಕೇಳಿದ ಮೇಕಪ್ ಆರ್ಟಿಸ್ಟ್ ರವರ ಖಾಸಗಿ ಫೋಟೋಸ್ ಮತ್ತು ವಿಡಿಯೋಗಳನ್ನ ಪ್ರದರ್ಶಿಸಿ ಬ್ಲಾಕ್ ಮೇಲ್ ಮಾಡಿರುವ…
ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ ದಾಖಲು…

ಸೀಟ್ ಬಾಡಿಗೆ ವಿಚಾರದಲ್ಲಿ ಕಿರಿಕ್…ಆಟೋ ಚಾಲಕನಿಗೆ ಚಾಕುವಿನಿಂದ ಇರಿತ…ಇಬ್ಬರ ವಿರುದ್ದ ಪ್ರಕರಣ…

ಮೈಸೂರು,ಜ20,Tv10 ಕನ್ನಡ ಆಟೋ ಸೀಟ್ ಬಾಡಿಗೆ ಹೊಡೆಯುವ ವಿಚಾರದಲ್ಲಿ ಇಬ್ಬರು ಯುವಕರು ಕಿರಿಕ್ ತೆಗೆದು ಚಾಲಕನಿಗೆ ಚಾಕುವಿನಿಂದ ಇರಿದ ಘಟನೆ ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಸಾತಗಳ್ಳಿ ನಿವಾಸಿ…

Leave a Reply

Your email address will not be published. Required fields are marked *