ಬದುಕಿರುವ ವ್ಯಕ್ತಿಗೆ ಮರಣಪ್ರಮಾಣ ಪತ್ರ ಸೃಷ್ಠಿ…ವಿಎ,ಆರ್ ಐ,ಶಿರಸ್ತೇದಾರ್ ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

ಬದುಕಿರುವ ವ್ಯಕ್ತಿಗೆ ಮರಣಪ್ರಮಾಣ ಪತ್ರ ಸೃಷ್ಠಿ…ವಿಎ,ಆರ್ ಐ,ಶಿರಸ್ತೇದಾರ್ ಸೇರಿದಂತೆ 5 ಮಂದಿ ವಿರುದ್ದ FIR ದಾಖಲು…

ನಂಜನಗೂಡು,ಮೇ25,Tv10 ಕನ್ನಡ

ಬದುಕಿರುವ ವ್ಯಕ್ತಿಗೆ ಮೃತಪಟ್ಟಿರುವುದಾಗಿ ಮರಣ ಪ್ರಮಾಣ ಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸಿದ ವ್ಯಕ್ತಿಗಳು ಹಾಗೂ ನಕಲಿ ದಾಖಲೆ ಸೃಷ್ಟಿಸಲು ಶಾಮೀಲಾದ ರೆವಿನ್ಯೂ ಇಲಾಖೆ ಅಧಿಕಾರಿಗಳ ವಿರುದ್ದ ನಂಜನಗೂಡಿನ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.ಓರ್ವ ಅಧಿಕಾರಿ ವಿರುದ್ದ ಇಲಾಖೆಯಿಂದ 1-4 ವಿಚಾರಣೆ ಆದೇಶ ಹೊರಡಿಸಲಾಗಿದೆ.ಅಲ್ಲದೆ ಮರಣ ಪ್ರಮಾಣ ಪತ್ರ ನೀಡಿದ ಅಂದಿನ ವಿಎ ಹಾಗೂ ಇಂದು  ಹೆಚ್.ಡಿ.ಕೋಟೆಯಲ್ಲಿ ಆರ್.ಐ.ಆಗಿ ಕರ್ತವ್ಯ ನಿರ್ವಹಿಸುತ್ತಿರುವ ವಿಶ್ವನಾಥ್ ರವರನ್ನ ಪ್ರಕರಣದಲ್ಲಿ ಕೈ ಬಿಟ್ಟಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.

ನಂಜನಗೂಡು ತಾಲೂಕು ಕಸಬಾ ಹೋಬಳಿ ಗೀಕಳ್ಳಿ ಗ್ರಾಮದ ನಿವಾಸಿಗಳಾದ ಕೃಷ್ಣೇಗೌಡ,ಶಿವಮಲ್ಲೇಗೌಡ ಹಾಗೂ ಗೊಳೂರು ವೃತ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಲೆಕ್ಕಿಗ ಮಂಜುನಾಥ್,ರಾಜಸ್ವ ನಿರೀಕ್ಷಕ ಪ್ರಕಾಶ್,ಶಿರಸ್ತೇದಾರ್ ಶ್ರೀನಾಥ್ ವಿರುದ್ದ FIR ದಾಖಲಾಗಿದೆ.ಬೆಂಗಳೂರು ನಿವಾಸಿ ನಾಗರಾಜರಾವ್ ಎಂಬುವರು ನೀಡಿದ ದೂರಿನ ಹಿನ್ನಲೆ ಬಿಳಿಗೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ನಾಗರಾಜರಾವ್ ಹಾಗೂ ಚಂದ್ರಶೇಖರ್ ಸಹೋದರರು.ನಾಗರಾಜರಾವ್ ಬೆಂಗಳೂರಿನಲ್ಲಿದ್ದಾರೆ.ಚಂದ್ರಶೇಖರ್ ಕೆನಡಾದಲ್ಲಿದ್ದರು.ಇವರಿಗೆ ನಂಜನಗೂಡಿನ ಗೀಕಳ್ಳಿ ಗ್ರಾಮದಲ್ಲಿ ಸರ್ವೆ ನಂಬರ್ 444 ರಲ್ಲಿ 1 ಎಕ್ರೆ 20 ಗುಂಟೆ ಹಾಗೂ ಸರ್ವೆ ನಂ.442 ರಲ್ಲಿ 1 ಎಕ್ರೆ 20 ಗುಂಟೆ ಜಮೀನು ಪಿತ್ರಾರ್ಜಿತ ಆಸ್ತಿಯಾಗಿ ಬಂದಿದೆ.ಕೆನಡಾದಲ್ಲಿರುವ ಚಂದ್ರಶೇಖರ್ ಇದೇ ಏಪ್ರಿಲ್ 14 ರಂದು ಮೃತಪಟ್ಟಿದ್ದಾರೆ.ಸಹೋದರ ನಾಗರಾಜ ರಾವ್ ರವರು ಮೂರು ತಿಂಗಳ ಹಿಂದೆ ಕಂದಾಯ ಕಟ್ಟಲು ಇಲಾಖೆಗೆ ತೆರಳಿದ ವೇಳೆ ಶಾಖ್ ಆಗಿದೆ.ಚಂದ್ರಶೇಖರ್ ಈಗಾಗಲೇ ಮೃತಪಟ್ಟಿರುವುದಾಗಿ ಮರಣ ಪ್ರಮಾಣಪತ್ರ ಹಾಗೂ ವಂಶವೃಕ್ಷ ಸೃಷ್ಟಿಸಿ ಜಮೀನಿನ ಅಕ್ಕಪಕ್ಕದಲ್ಲಿದ್ದ ಕೃಷ್ಣೇಗೌಡ ಹಾಗೂ ಶಿವಮಲ್ಲೇಗೌಡ ತಮ್ಮ ಹೆಸರಿಗೆ ಜಮೀನನ್ನ ವರ್ಗಾವಣೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಕೋಟ್ಯಾಂತರ ಬೆಲೆ ಬಾಳುವ ಜಮೀನು ಲಪಟಾಯಿಸುವ ಉದ್ದೇಶದಿಂದ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿದ ಕೃಷ್ಣೇಗೌಡ,ಶಿವಮಲ್ಲೇ ಗೌಡ ಹಾಗೂ ನಕಲಿ ದಾಖಲೆ ಸೃಷ್ಟಿಸಲು ಶಾಮೀಲಾದ ಗ್ರಾಮ ಲೆಕ್ಕಿಗ ಮಂಜುನಾಥ್,ರಾಜಸ್ವ ನಿರೀಕ್ಷಕ ಜೆ.ಪ್ರಕಾಶ್ ಮತ್ತು ಶಿರಸ್ತೇದಾರ್ ಶ್ರೀನಾಥ್ ರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನಾಗರಾಜರಾವ್ ರವರು ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *