ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ…ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಧಾನ…

ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ…ಕೆಎಂಪಿಕೆ ಟ್ರಸ್ಟ್ ವತಿಯಿಂದ ಪ್ರಧಾನ…

ಮೈಸೂರು,ಮೇ27,Tv10 ಕನ್ನಡ

ಮೈಸೂರಿನ ಎಂ ಜಿ ರಸ್ತೆಯಲ್ಲಿರುವ ಸಿಪಾಯಿ ಗ್ರಾಂಡ್ ಹೋಟೆಲ್ ನಲ್ಲಿ
ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ ನ 18ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು.ಕೆ ಬಿ ಲಿಂಗರಾಜು (ಕೈಗಾರಿಕಾ ಕ್ಷೇತ್ರ), ಡಾಕ್ಟರ್ ವೈ ಡಿ ರಾಜಣ್ಣ (ಸಾಹಿತ್ಯ ಕ್ಷೇತ್ರ), ಆರ್ ಕೃಷ್ಣ (ಮಾಧ್ಯಮ ಕ್ಷೇತ್ರ), ಶ್ರೀಧರ್ ಸಿ ಎಂ (ಸೈನಿಕ ಕ್ಷೇತ್ರ), ಶಿವಪ್ರಸಾದ್ (ಆರೋಗ್ಯ ಕ್ಷೇತ್ರ), ರಶ್ಮಿ (ಆರೋಗ್ಯ ಕ್ಷೇತ್ರ), ಅಮ್ಮ ರಾಮಚಂದ್ರ (ಜನಪದ ಕ್ಷೇತ್ರ), ಡಾಕ್ಟರ್ ಕವಿತಾ ಮಠದ (ಶಿಕ್ಷಣ ಕ್ಷೇತ್ರ), ಮಲ್ಲೇಶ್ (ಆರೋಗ್ಯ ಕ್ಷೇತ್ರ), ಶೋಭಾ (ರೂಪದರ್ಶಿ ಕ್ಷೇತ್ರ) ಇವರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಅಭಿನಂದಿತರಲ್ಲಿ ಒಬ್ಬರಾದ ಡಾ ವೈ ಡಿ ರಾಜಣ್ಣ ಮಾತನಾಡಿ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಮೈಸೂರಿನ ಸಾಮಾಜಿಕ ಸಂಸ್ಥೆಗಳಲ್ಲಿ ತನ್ನ ಜನಮುಖಿ ಸೇವೆಗಳ ಮೂಲಕ ಪ್ರತಿಷ್ಠಿತ ಸಂಸ್ಥೆಯಾಗಿ ರೂಪುಗೊಂಡಿದೆ.
ಯುವ ಉತ್ಸಾಹಿ ಅಧ್ಯಕ್ಷರಾಗಿ ವಿಕ್ರಂ ಕೆಎಂಪಿಕೆ ಟ್ರಸ್ಟ್ ನ್ನು ಸಾಹಿತ್ಯ ಸಂಸ್ಜೃತಿ ಯ ಕೆಲಸಗಳ ಜೊತೆಗೆ ಕರೋನಾ ಸಂದರ್ಭದಲ್ಲಿ ಕೂಡ ಮಾನವೀಯ ಅಂತಃಕರಣದ ಸೇವೆಗಳ ಮೂಲಕ ಮೈಸೂರಿಗರ ಗಮನ ಸೆಳೆದು ತನ್ನ ಸಾಮಾಜಿಕ ಹೊಣೆಗಾರಿಕೆಗೆ ಪಾತ್ರವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಮೂಡಾ ಅಧ್ಯಕ್ಷರಾದ ಎಚ್ ವಿ ರಾಜೀವ್, ಮೈಸೂರ್ ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್,
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಉದ್ಯಮಿ ಸ್ವೀಟ್ ಮಹೇಶ್, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮುತ್ತಣ್ಣ, ಕೆಎಂಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಅಜಯ್ ಶಾಸ್ತ್ರಿ, ಪ್ರಕಾಶ್ ಪ್ರಿಯದರ್ಶನ್, ರೇಖಾ ಶ್ರೀನಿವಾಸ್, ವಿದ್ಯಾ, ದೀಪ, ಬೈರತಿ ಲಿಂಗರಾಜು, ಮಂಜುನಾಥ್ , ಸಚಿಂದ್ರ, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಶ್ರೀರಾಮ ಗೆಳೆಯರ ಬಳಗದಿಂದ ಪುನೀತ್ ರಾಜ್ ಕುಮಾರ್ ಜನ್ಮದಿನೋತ್ಸವ ಆಚರಣೆ…ಮಜ್ಜಿಗೆ,ಸಿಹಿ ವಿತರಣೆ…

ಮೈಸೂರು,ಮಾ17,Tv10 ಕನ್ನಡ ಕನ್ನಡ ಚಿತ್ರರಂಗದ ಮರೆಯಲಾಗದ ಮಾಣಿಕ್ಯ ಪವರ್ ಸ್ಟಾರ್ ಯುವರತ್ನ ಪುನೀತ್ ರಾಜಕುಮಾರ್ ರವರ ಜನ್ಮದಿನೋತ್ಸವದ ನೆನಪಿಗಾಗಿ ‘ಶ್ರೀರಾಮ ಗೆಳಯರ ಬಳಗದ’ ವತಿಯಿಂದ ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕರಿಗೆ…
ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಕಳೆದುಹೋಗಿದ್ದ ಮೊಬೈಲ್ ವಾರಸುದಾರರಿಗೆ…ಮಾಲೀಕರನ್ನ ತಲುಪಿದ 37 ಮೊಬೈಲ್…

ಮೈಸೂರು,ಮಾ17,Tv10 ಕನ್ನಡ ಕಳೆದುಹೋಗಿದ್ದ 37 ಮೊಬೈಲ್ ಫೋನ್ ಗಳನ್ನು ದೇವರಾಜ ಠಾಣೆ ಪೊಲೀಸರು ಇಂದು ವಾರಸುದಾರರಿಗೆ ಮರಳಿಸಿದರು. ದೇವರಾಜ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ರಘು.ಕೆ.ಆರ್. ಉಪ ನಿರೀಕ್ಷಕರಾದ…
ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಸಿಟಿ ಲೈಟ್ಸ್ ತಂಡದಿಂದ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬ ಆಚರಣೆ…

ಬೆಂಗಳೂರು,ಮಾ17,Tv10 ಕನ್ನಡ ಬೆಂಗಳೂರಿನ ಗುಬ್ಬಿ ವೀರಣ್ಣ ಕಲಾ ಮಂಟಪದಲ್ಲಿ ಸಿಟಿ ಲೈಟ್ಸ್ ಚಿತ್ರೀಕರಣ ನಡೆಯುವ ಸಂಧರ್ಭದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ರವರ ಹುಟ್ಟು ಹಬ್ಬವನ್ನ ಆಚರಿಸಲಾಯಿತು. ಕೇಕ್…

Leave a Reply

Your email address will not be published. Required fields are marked *