ಶೀಲದ ಬಗ್ಗೆ ಅಪಪ್ರಚಾರ…ಗೃಹಿಣಿ ನೇಣಿಗೆ ಶರಣು…7 ಮಂದಿ ವಿರುದ್ದ FIR ದಾಖಲು…

ಶೀಲದ ಬಗ್ಗೆ ಅಪಪ್ರಚಾರ…ಗೃಹಿಣಿ ನೇಣಿಗೆ ಶರಣು…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಮೇ28,Tv10 ಕನ್ನಡ

ಮಹಿಳೆಯ ಮೇಲೆ ಕಾಮದೃಷ್ಟಿಯಿಂದ ನೋಡುತ್ತಿದ್ದ ಕಿರಾತಕನೊಬ್ಬ ಆಕೆಯ ಶೀಲದ ಬಗ್ಗೆ ಅಪಪ್ರಚಾರ ಮಾಡಿದ ಪರಿಣಾಮ ಮನನೊಂದ ಗೃಹಿಣಿ ನೇಣಿಗೆ ಶರಣಾದ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ.ವಿಜಯಲಕ್ಷ್ಮಿ(40) ಮೃತ ಗೃಹಿಣಿ.ಘಟನೆಗೆ ಸಂಭಂಧಿಸಿದಂತೆ ಕಾಮದೃಷ್ಟಿ ಬೀರಿ ಅಪಪ್ರಚಾರ ಮಾಡಿದ ದಡದಹಳ್ಳಿ ಗ್ರಾಮದ ನಿವಾಸಿ ನಾಗರಾಜು ಸೇರಿದಂತೆ 7 ಮಂದಿ ವಿರುದ್ದ ಮೈಸೂರಿನ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯಲಕ್ಷ್ಮಿ ಹಾಗೂ ಕುಟುಂಬ ದಡದಹಳ್ಳಿ ಗ್ರಾಮದ ನಿವಾಸಿಗಳು.ಅದೇ ಗ್ರಾಮದ ನಾಗರಾಜು ಆಗಾಗ ವಿಜಯಲಕ್ಷ್ಮಿ ಮೇಲೆ ಕಾಮದೃಷ್ಟಿ ಬೀರಿ ಕಿರೀಕ್ ಮಾಡುತ್ತಿದ್ದ.ಪಾನಮತ್ತನಾಗಿ ವಿಜಯಲಕ್ಷ್ಮಿ ವಿರುದ್ದ ಅಪಪ್ರಚಾರ ಮಾಡುವುದು,ಬಹಿರಂಗವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ.ಈ ವಿಚಾರದಲ್ಲಿ ವಿಜಯಲಕ್ಷ್ಮಿ ಮಗ ಅಭಿ ಗಲಾಟೆ ಮಾಡಿದಾಗ ನಾಗರಾಜ್ ಸೇರಿದಂತೆ ಹಲವರು ಮನೆಗೆ ನುಗ್ಗಿ ಧ್ವಂಸ ಮಾಡಿದ್ದರು.ಈ ಗಲಾಟೆ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.ಈ ಹಿನ್ನಲೆ ವಿಜಯಲಕ್ಷ್ಮಿ ಕುಟುಂಬ ದಡದಹಳ್ಳಿ ಗ್ರಾಮಕ್ಕೆ ಪ್ರವೇಶ ಮಾಡದಂತೆ ನಿರ್ಭಂಧ ಹೇರಲಾಗಿದೆ.ಹೀಗಾಗಿ ವಿಜಯಲಕ್ಷ್ಮಿ ಕುಟುಂಬ ಶಿವಮೊಗ್ಗಕ್ಕೆ ತೆರಳಿದೆ.ಮೂರು ದಿನಗಳ ಹಿಂದೆ ತಮ್ಮ ಸ್ವಗ್ರಾಮ ದಡದಹಳ್ಳಿಗೆ ತೆರಳಲು ವಿಜಯಲಕ್ಷ್ಮಿ ಕುಟುಂಬ ಪ್ರಯತ್ನಿಸಿದೆ.ಇದಕ್ಕಾಗಿ ಗ್ರಾಮಾಂತರ ಠಾಣೆ ಪೊಲೀಸರ ನೆರವು ಕೋರಿದ್ದಾರೆ.ಗ್ರಾಮದ ಮುಖಂಡರ ಜೊತೆ ಕಡಕೊಳ ಗ್ರಾಮಕ್ಕೆ ತೆರಳುವಂತೆ ಗ್ರಾಮಾಂತರ ಠಾಣೆ ಪೊಲೀಸರು ಸೂಚಿಸಿದ್ದಾರೆ.ಈ ಸೂಚನೆ ಮೇರೆಗೆ ಕಡಕೊಳ ಪೊಲೀಸ್ ಠಾಣೆಗೆ ತೆರಳಿದಾಗ ನಾಗರಾಜ್ ಸೇರಿದಂತೆ ಹಲವರು ವಿರೋಧಿಸಿ ಮತ್ತೆ ವಿಜಯಲಕ್ಷ್ಮಿ ವಿರುದ್ದ ಅಪಪ್ರಚಾರ ಮಾಡಿ ಮಾನಸಿಕವಾಗಿ ಹಿಂಸಿಸಿದ್ದಾರೆ.ನಂತರ ಗ್ರಾಮಕ್ಕೆ ತೆರಳಲು ಸಾಧ್ಯವಾಗದೆ ಮೈಸೂರಿನ ಗಾಂಧಿನಗರದಲ್ಲಿರುವ ಸಂಭಂಧಿಕರ ಮನೆಯಲ್ಲಿ ತಂಗಿದ್ದಾರೆ.ಶೀಲದ ಬಗ್ಗೆ ಅಪಪ್ರಚಾರ ಮಾಡಿದ ಹಿನ್ನಲೆ ಮನನೊಂದ ವಿಜಯಲಕ್ಷ್ಮಿ ಗಾಂಧಿನಗರದ ಬಳಿ ಇರುವ ಸಿದ್ದಾರ್ಥ ಪಾರ್ಕ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.ವಿಜಯಲಕ್ಷ್ಮಿ ಸಾವಿಗೆ ಅಪಪ್ರಚಾರ ಮಾಡಿದ ನಾಗರಾಜ್ ಸೇರಿದಂತೆ ರಾಜಮ್ಮ,ಗೋವಿಂದರಾಜು,ನಂಜುಂಡ,ನಾರಾಯಣ,ನಂಜಪ್ಪ ಹಾಗೂ ಸ್ವಾಮಿ ಎಂಬುವರ ವಿರುದ್ದ ಮೈಸೂರಿನ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *