ಬೇಕರಿ ಪೀಠೋಪಕರಣಗಳು ಧ್ವಂಸ ಪ್ರಕರಣ…7 ಮಂದಿ ವಿರುದ್ದ FIR ದಾಖಲು…ನ್ಯಾಯಾಲಯದ ಆದೇಶದಂತೆ ಕ್ರಮ…

ಬೇಕರಿ ಪೀಠೋಪಕರಣಗಳು ಧ್ವಂಸ ಪ್ರಕರಣ…7 ಮಂದಿ ವಿರುದ್ದ FIR ದಾಖಲು…ನ್ಯಾಯಾಲಯದ ಆದೇಶದಂತೆ ಕ್ರಮ…

ನಂಜನಗೂಡು,ಮೇ29,Tv10 ಕನ್ನಡ

ಬೇಕರಿಯೊಂದರ ಪೀಠೋಪಕರಣಗಳನ್ನ ಕಿಡಿಗೇಡಿಗಳು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಭಂಧಿಸಿದಂತೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ 7 ಮಂದಿ ವಿರುದ್ದ ಪ್ರಕರಣ ದಾಖಲಾಗಿದೆ. ನಂಜನಗೂಡು ತಾಲೂಕು ಹುರಾ ಗ್ರಾಮದಲ್ಲಿ ಬೇಕರಿಯೊಂದರ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದ ಆರೋಪದ ಹಿನ್ನಲೆ ನ್ಯಾಯಾಲಯ ನೀಡಿದ ಆದೇಶದಂತೆ FIR ದಾಖಲಿಸಲಾಗಿದೆ. ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಇದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.ಹುರಾ ಗ್ರಾಮದ ಕಾಡಯ್ಯ,ಶಿವಮೂರ್ತಿ,ಶಶಿಧರ್,ಕುಮಾರ್,ಕಮಾಲ್ ಕುಮಾರ್,ಪ್ರವೀಣ್ ಕುಮಾರ್ ಹಾಗೂ ವರುಣ ಎಂಬುವರ ಮೇಲೆ ಪ್ರಕರಣ ದಾಖಲಾಗಿದೆ.

ಹುರಾ ಗ್ರಾಮದ ಶ್ರೀ ಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ದಿಗಾಗಿ ಅಲ್ಲಿನ ಯಜಮಾನ ಮಳಿಗೆಗಳನ್ನ ತಮ್ಮ ಸ್ವಂತ ಖರ್ಚಿನಲ್ಲಿ ಕಟ್ಟಿಸಿದ್ದರು.ಮಳಿಗೆಗಳಿಂದ ಬಂದ ಆದಾಯವನ್ನ ದೇವಾಲಯದ ಅಭಿವೃದ್ದಿಗೆ ಬಳಸಲಾಗುತ್ತಿತ್ತು.ಈ ವಿಚಾರದಲ್ಲಿ ಗ್ರಾಮದ ಈಗಿನ ಯಜಮಾನ ರಾಜಕೀಯ ವೈಶ್ಯಮ್ಯಕ್ಕೆ ಅಂಗಡಿ ಮಳಿಗೆಗಳನ್ನ ಕೆಲವು ದಿನಗಳ ಹಿಂದೆ ಬಂದ್ ಮಾಡಿಸಿದ್ದರೆಂದು ಹೇಳಲಾಗಿದೆ.ಮಳಿಗೆಗಳಲ್ಲಿ ನಡೆಸಲಾಗುತ್ತಿದ್ದ ಓಂಕಾರ್ ಬೇಕರಿಯ ಟೀ ಕೌಂಟರ್,ಜ್ಯೂಸ್ ಕೌಂಟರ್,ಚಾಟ್ಸ್ ಕೌಂಟರ್,ಟೇಬಲ್ ಗಳು,ಗ್ಲಾಸ್ ಗಳನ್ನ ಧ್ವಂಸ ಮಾಡಿದ್ದಾರೆ.ಅಲ್ಲದೆ ಬೇಕರಿಯಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮರಾ ನಾಶ ಮಾಡಿದ್ದಾರೆ.ಕಿಡಿಗೇಡಿಗಳ ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಬೇಕರಿ ಮಾಲೀಕ ಪಾಪಣ್ಣ ರವರಿಗೆ 2 ರಿಂದ 3 ಲಕ್ಷ ನಷ್ಟವಾಗಿದೆ ಎಂದು ಆರೋಪಿಸಿ ಸಿಸಿ ಕ್ಯಾಮರಾ ದೃಶ್ಯಗಳ ಸಮೇತ ಪಾಪಣ್ಣ ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ದೂರಿನಲ್ಲಿ ಕಾಡಯ್ಯ,ಶಿವಮೂರ್ತಿ,ಶಶಿಧರ್ ರವರ ಕುಮ್ಮಕ್ಕಿನಿಂದ ಕುಮಾರ್,ಕಮಾಲ್ ಕುಮಾರ್,ಪ್ರವೀಣ್ ಕುಮಾರ್ ಎಂಬುವರು ಧ್ವಂಸ ಮಾಡಿದ್ದಾರೆಂದು ಉಲ್ಲೇಖಿಸಿದ್ದರು. ಹುಲ್ಲಹಳ್ಳಿ ಠಾಣಾ ಪೊಲೀಸರು ಕೇವಲ ಎನ್.ಸಿ.ಆರ್.ನೀಡಿ ಎಫ್.ಐ.ಆರ್.ದಾಖಲಿಸಲು ನ್ಯಾಯಾಲಯದಿಂದ ಆದೇಶ ತರುವಂತೆ ಹಿಂಬರಹ ನೀಡಿದ್ದರು.ನ್ಯಾಯಾಲಯದ ಮೊರೆ ಹೋದ ಪಾಪಣ್ಣರಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.7 ಮಂದಿ ವಿರುದ್ದ ಪ್ರಕರಣ ದಾಖಲಿಸುವಂತೆ ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಸೂಚನೆ ನೀಡಿದೆ.ಈ ಹಿನ್ನಲೆ ಆರೋಪಿಗಳ ವಿರುದ್ದ FIR ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *