ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಮೈಸೂರು,ಮೇ31,Tv10 ಕನ್ನಡ

ಇಂದಿನಿಂದ 2024-25 ನೇ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಿದೆ.ರಜೆ ಮುಗಿಸಿ ಮುಂದಿನ ತರಗತಿಗಳಿಗೆ ತೆರಳುತ್ತಿರುವ ವಿಧ್ಯಾರ್ಥಿಗಳು ಹೊಸ ಹುರುಪಿನಿಂದ ಸಮವಸ್ತ್ರಗಳನ್ನ ಧರಿಸಿ ಶಾಲೆಗಳಿಗೆ ತೆರಳಿದ್ದಾರೆ.ರಜೆಯಲ್ಲಿ ಆಟಗಳಲ್ಲಿ ತೊಡಗಿ ಮತ್ತೆ ಓದಿನತ್ತ ಗಮನಹರಿಸುವ ವಿಧ್ಯಾರ್ಥಿಗಳು ಇಂದು ತಮ್ಮ ಶಾಲೆಗಳ ಮೆಟ್ಟಿಲು ಹತ್ತುತ್ತಿದ್ದಾರೆ.ಹೊಸ ಚೈತನ್ಯ ತುಂಬಿಕೊಂಡು ಶಾಲೆಗಳಿಗೆ ಬಂದ ವಿಧ್ಯಾರ್ಥಿಗಳಿಗೆ ಗುಲಾಬಿ ಹೂವು, ಮೈಸೂರ್ ಪಾಕ್, ಪುಸ್ತಕ ಪೆನ್ನು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗಿದೆ.
ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಅರಿವು ಸಂಸ್ಥೆಯ ಸದಸ್ಯರಗಳು ಮಕ್ಕಳನ್ನ ವಿಶೇಷವಾಗಿ ಸ್ವಾಗತಿಸಿ ಶುಭ ಹಾರೈಸಿದ್ದಾರೆ.ಈ ಸಂಭ್ರಮದ ಕ್ಷಣಕ್ಕಾಗಿ ಶಾಲೆಯ ಶಿಕ್ಷಕರ ಜೊತೆಗೂಡಿ ಶಾಲೆಯನ್ನು ಮಾವಿನ ಸೊಪ್ಪಿನ ತಳಿರು ತೋರಣದಲ್ಲಿ ಅಲಂಕರಿಸಿ ಮಕ್ಕಳಿಗೆ ಆರತಿ ಬೆಳಗಿ , ಹೂವಿನ ಮೇಲೆ ನಡೆಸಿಕೊಂಡು , ಗುಲಾಬಿ ಹೂ ಹಾಗೂ ಮೈಸೂರು ಪಾಕ್ ಮತ್ತು ಪುಸ್ತಕ ಪೆನ್ನು ನೀಡಿ ಶಾಲೆಗೆ ವಿಶೇಷವಾಗಿ ಬರಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ,ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಎಸ್ ಎನ್ ರಾಜೇಶ್, ಸುಚಿಂದ್ರ, ಯದುನಂದನ್, ಆದರ್ಶ್, ನಾಳೆಯ ಮುಖ್ಯೋಪಾಧ್ಯಾಯರಾದ ಸುಗುಣ, ಶಿಕ್ಷಕರಾದ ಶಿವಯ್ಯ, ನಾಗರತ್ನ, ಶಿಲ್ಪ, ಸಿಬ್ಬಂದಿ ಮಮತಾ ಹಾಗೂ ಇನ್ನಿತರರು ಮಕ್ಕಳಿಗೆ ಶುಭಹಾರೈಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *