ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಮೈಸೂರು,ಮೇ31,Tv10 ಕನ್ನಡ

ಇಂದಿನಿಂದ 2024-25 ನೇ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಿದೆ.ರಜೆ ಮುಗಿಸಿ ಮುಂದಿನ ತರಗತಿಗಳಿಗೆ ತೆರಳುತ್ತಿರುವ ವಿಧ್ಯಾರ್ಥಿಗಳು ಹೊಸ ಹುರುಪಿನಿಂದ ಸಮವಸ್ತ್ರಗಳನ್ನ ಧರಿಸಿ ಶಾಲೆಗಳಿಗೆ ತೆರಳಿದ್ದಾರೆ.ರಜೆಯಲ್ಲಿ ಆಟಗಳಲ್ಲಿ ತೊಡಗಿ ಮತ್ತೆ ಓದಿನತ್ತ ಗಮನಹರಿಸುವ ವಿಧ್ಯಾರ್ಥಿಗಳು ಇಂದು ತಮ್ಮ ಶಾಲೆಗಳ ಮೆಟ್ಟಿಲು ಹತ್ತುತ್ತಿದ್ದಾರೆ.ಹೊಸ ಚೈತನ್ಯ ತುಂಬಿಕೊಂಡು ಶಾಲೆಗಳಿಗೆ ಬಂದ ವಿಧ್ಯಾರ್ಥಿಗಳಿಗೆ ಗುಲಾಬಿ ಹೂವು, ಮೈಸೂರ್ ಪಾಕ್, ಪುಸ್ತಕ ಪೆನ್ನು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗಿದೆ.
ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಅರಿವು ಸಂಸ್ಥೆಯ ಸದಸ್ಯರಗಳು ಮಕ್ಕಳನ್ನ ವಿಶೇಷವಾಗಿ ಸ್ವಾಗತಿಸಿ ಶುಭ ಹಾರೈಸಿದ್ದಾರೆ.ಈ ಸಂಭ್ರಮದ ಕ್ಷಣಕ್ಕಾಗಿ ಶಾಲೆಯ ಶಿಕ್ಷಕರ ಜೊತೆಗೂಡಿ ಶಾಲೆಯನ್ನು ಮಾವಿನ ಸೊಪ್ಪಿನ ತಳಿರು ತೋರಣದಲ್ಲಿ ಅಲಂಕರಿಸಿ ಮಕ್ಕಳಿಗೆ ಆರತಿ ಬೆಳಗಿ , ಹೂವಿನ ಮೇಲೆ ನಡೆಸಿಕೊಂಡು , ಗುಲಾಬಿ ಹೂ ಹಾಗೂ ಮೈಸೂರು ಪಾಕ್ ಮತ್ತು ಪುಸ್ತಕ ಪೆನ್ನು ನೀಡಿ ಶಾಲೆಗೆ ವಿಶೇಷವಾಗಿ ಬರಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ,ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಎಸ್ ಎನ್ ರಾಜೇಶ್, ಸುಚಿಂದ್ರ, ಯದುನಂದನ್, ಆದರ್ಶ್, ನಾಳೆಯ ಮುಖ್ಯೋಪಾಧ್ಯಾಯರಾದ ಸುಗುಣ, ಶಿಕ್ಷಕರಾದ ಶಿವಯ್ಯ, ನಾಗರತ್ನ, ಶಿಲ್ಪ, ಸಿಬ್ಬಂದಿ ಮಮತಾ ಹಾಗೂ ಇನ್ನಿತರರು ಮಕ್ಕಳಿಗೆ ಶುಭಹಾರೈಸಿದ್ದಾರೆ…

Spread the love

Related post

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ…

ರಸ್ತೆ ಡಿವೈಡರ್ ಗೆ ಖಾಸಗಿ ಮಿನಿ ಬಸ್ ಢಿಕ್ಕಿ…ಅಯ್ಯಪ್ಪಸ್ವಾಮಿ ಭಕ್ತರು ಪ್ರಾಣಾಪಾಯದಿಂದ ಪಾರು… ನಂಜನಗೂಡು,ಸೆ20,Tv10 ಕನ್ನಡ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದ ಮಿನಿಬಸ್ ಪಲ್ಟಿಯಾದ ಘಟನೆ ನಂಜನಗೂಡು…
ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮುಳುಗದೆ…ತೇಲದೆ…ಕರಗದೆ ಅತಂತ್ರವಾದ ಗಣಪತಿ ಮೂರ್ತಿಗಳು…ಸಂಪ್ರದಾಯಕ ವಿಸರ್ಜನೆಗೆ ಆಧ್ಯತೆ ನೀಡುವರೇ…?

ಮೈಸೂರು,ಸೆ20,Tv10 ಕನ್ನಡ ವಿಘ್ನನಿವಾರಕ ಗಣಪತಿ ಹಬ್ಬ ನಾಡಿನ ಮೂಲೆ ಮೂಲೆಗಳಲ್ಲಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ರಸ್ತೆ ರಸ್ತೆಗಳಲ್ಲೂ ವಿವಿಧ ಆಕಾರಗಳಲ್ಲಿ ವಿಗ್ರಹಗಳು ಭಕ್ತರನ್ನ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ.ವಿಸರ್ಜನೆಗಾಗಿ ಹಮ್ಮಿಕೊಳ್ಳುವ ಮೆರವಣಿಗೆಗಳಂತೂ ಜಂಬೂಸವಾರಿಯನ್ನೂ ನಾಚಿಸಯವಂತೆ…
ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ ಕೆ.

ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರು ಸಾಹಿತಿಗಳೇ ಆಗಲಿ :ಡಾ. ಸಿ ಪಿ…

ಮೈಸೂರು, ಸೆಪ್ಟೆಂಬರ್. 19-ಮಂಡ್ಯದಲ್ಲಿ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ದ ಅಧ್ಯಕ್ಷರನ್ನಾಗಿ ಸಾಹಿತ್ಯೇತರ ವ್ಯಕ್ತಿಯನ್ನೂ ಅಧ್ಯಕ್ಷರನ್ನಾಗಿಸುವುದು ಬೇಡ ಎಂದು ಹಿರಿಯ ಸಾಹಿತಿ ಡಾ. ಸಿ. ಪಿ ಕೆ…

Leave a Reply

Your email address will not be published. Required fields are marked *