ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಇಂದಿನಿಂದ ಶಾಲೆ ಆರಂಭ…ಮಕ್ಕಳಿಗೆ ವಿಶೇಷ ಸ್ವಾಗತ…ಶುಭಹಾರೈಸಿದ ಹಿರಿಯರು…

ಮೈಸೂರು,ಮೇ31,Tv10 ಕನ್ನಡ

ಇಂದಿನಿಂದ 2024-25 ನೇ ಶೈಕ್ಷಣಿಕ ವರ್ಷದ ಶಾಲೆಗಳು ಆರಂಭವಾಗಿದೆ.ರಜೆ ಮುಗಿಸಿ ಮುಂದಿನ ತರಗತಿಗಳಿಗೆ ತೆರಳುತ್ತಿರುವ ವಿಧ್ಯಾರ್ಥಿಗಳು ಹೊಸ ಹುರುಪಿನಿಂದ ಸಮವಸ್ತ್ರಗಳನ್ನ ಧರಿಸಿ ಶಾಲೆಗಳಿಗೆ ತೆರಳಿದ್ದಾರೆ.ರಜೆಯಲ್ಲಿ ಆಟಗಳಲ್ಲಿ ತೊಡಗಿ ಮತ್ತೆ ಓದಿನತ್ತ ಗಮನಹರಿಸುವ ವಿಧ್ಯಾರ್ಥಿಗಳು ಇಂದು ತಮ್ಮ ಶಾಲೆಗಳ ಮೆಟ್ಟಿಲು ಹತ್ತುತ್ತಿದ್ದಾರೆ.ಹೊಸ ಚೈತನ್ಯ ತುಂಬಿಕೊಂಡು ಶಾಲೆಗಳಿಗೆ ಬಂದ ವಿಧ್ಯಾರ್ಥಿಗಳಿಗೆ ಗುಲಾಬಿ ಹೂವು, ಮೈಸೂರ್ ಪಾಕ್, ಪುಸ್ತಕ ಪೆನ್ನು ನೀಡಿ ಶಾಲೆಗೆ ಬರಮಾಡಿಕೊಳ್ಳಲಾಗಿದೆ.
ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯಲ್ಲಿ ಅಪೂರ್ವ ಸ್ನೇಹ ಬಳಗ ಹಾಗೂ ಅರಿವು ಸಂಸ್ಥೆಯ ಸದಸ್ಯರಗಳು ಮಕ್ಕಳನ್ನ ವಿಶೇಷವಾಗಿ ಸ್ವಾಗತಿಸಿ ಶುಭ ಹಾರೈಸಿದ್ದಾರೆ.ಈ ಸಂಭ್ರಮದ ಕ್ಷಣಕ್ಕಾಗಿ ಶಾಲೆಯ ಶಿಕ್ಷಕರ ಜೊತೆಗೂಡಿ ಶಾಲೆಯನ್ನು ಮಾವಿನ ಸೊಪ್ಪಿನ ತಳಿರು ತೋರಣದಲ್ಲಿ ಅಲಂಕರಿಸಿ ಮಕ್ಕಳಿಗೆ ಆರತಿ ಬೆಳಗಿ , ಹೂವಿನ ಮೇಲೆ ನಡೆಸಿಕೊಂಡು , ಗುಲಾಬಿ ಹೂ ಹಾಗೂ ಮೈಸೂರು ಪಾಕ್ ಮತ್ತು ಪುಸ್ತಕ ಪೆನ್ನು ನೀಡಿ ಶಾಲೆಗೆ ವಿಶೇಷವಾಗಿ ಬರಮಾಡಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ ,ಅಪೂರ್ವ ಸ್ನೇಹ ಬಳಗದ ಅಧ್ಯಕ್ಷರಾದ ಅಪೂರ್ವ ಸುರೇಶ್, ಅರಿವು ಸಂಸ್ಥೆಯ ಅಧ್ಯಕ್ಷರಾದ ಶ್ರೀಕಾಂತ್ ಕಶ್ಯಪ್, ಎಸ್ ಎನ್ ರಾಜೇಶ್, ಸುಚಿಂದ್ರ, ಯದುನಂದನ್, ಆದರ್ಶ್, ನಾಳೆಯ ಮುಖ್ಯೋಪಾಧ್ಯಾಯರಾದ ಸುಗುಣ, ಶಿಕ್ಷಕರಾದ ಶಿವಯ್ಯ, ನಾಗರತ್ನ, ಶಿಲ್ಪ, ಸಿಬ್ಬಂದಿ ಮಮತಾ ಹಾಗೂ ಇನ್ನಿತರರು ಮಕ್ಕಳಿಗೆ ಶುಭಹಾರೈಸಿದ್ದಾರೆ…

Spread the love

Related post

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ…

ಡೂಪ್ಲಿನ್ ಕಾಂಪ್ಲೆಕ್ಸ್ ಗೆ ಹೈ ಕೋರ್ಟ್ ಶಾಕ್…ಎಂಡಿಎ ತೆಕ್ಕೆಗೆ ಸೇರಲಿರುವ ವಾಣಿಜ್ಯ ಸಂಕೀರ್ಣ…ಸುಮಾರು 250 ಕೋಟಿ ಮೌಲ್ಯದ ಆಸ್ತಿ…ಅಲರ್ಟ್ ಆಗ್ತಾರ ಆಯುಕ್ತ ರಕ್ಷಿತ್… ಮೈಸೂರು,ಫೆ17,Tv10 ಕನ್ನಡ ಮೈಸೂರಿನ ಹೃದಯಭಾಗದಲ್ಲಿರುವ…
ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ…

ಜಾತ್ರೆಯಲ್ಲಿ ಜಗಳ ಬಿಡಿಸಿದ್ದೇ ತಪ್ಪಾಯ್ತು…ಹೋಂಗಾರ್ಡ್ ಮೇಲೆ ಹಲ್ಲೆ…ಬೈಕ್ ಗೆ ಬೆಂಕಿ…ಪುಂಡರ ಗೂಂಡಾವರ್ತನೆ…ಪ್ರಕರಣ ದಾಖಲಿಸಲು ಮೀನಾಮೇಷ… ನಂಜನಗೂಡು,ಫೆ16,Tv10 ಕನ್ನಡ ಜಾತ್ರೆ ವೇಳೆ ನಡೆಯುತ್ತಿದ್ದ ಜಗಳ ಬಿಡಿಸಿದ ತಪ್ಪಿಗೆ ಹೋಂಗಾರ್ಡ್ ಮೇಲೆ…
ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ…

ಡ್ರಗ್ಸ್ ಮುಕ್ತ ಮೈಸೂರು…ವಿಮುಕ್ತಿ ಯೋಜನೆಗೆ ಚಾಲನೆ…ವಾಟ್ಸಾಪ್ ನಂ.ಬಿಡುಗಡೆ… ಮೇಟಗಳ್ಳಿ ಠಾಣೆಯಿಂದ ಜಾಗೃತಿ…ಶಾಲಾ ಕಾಲೇಜುಗಳಲ್ಲಿ ಅರಿವು… ಮೈಸೂರು,ಫೆ10,Tv10 ಕನ್ನಡ ಡ್ರಗ್ಸ್ ಮಾಫಿಯಾ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಒಂದೆಡೆ…

Leave a Reply

Your email address will not be published. Required fields are marked *