ಮಾಜಿ ಬದಲು ನಿಕಟಪೂರ್ವ ಆದ ಯಶಸ್ವಿನಿ ಸೋಮಶೇಖರ್…

ಮಾಜಿ ಬದಲು ನಿಕಟಪೂರ್ವ ಆದ ಯಶಸ್ವಿನಿ ಸೋಮಶೇಖರ್…

ಮೈಸೂರು,ಜೂ2,Tv10 ಕನ್ನಡ

ಮಾಜಿ ಬದಲು ನಿಕಟಪೂರ್ವ ಅಧ್ಯಕ್ಷ ಆದ ಯಶಸ್ವಿನಿ ಸೋಮಶೇಖರ್…! ತಮ್ಮ ನಿವಾಸದ ಮುಂದೆ ಮುಡಾ ಅಧ್ಯಕ್ಷ ಎಂಬ ನಾಮಫಲಕ ಹಾಕಿದ್ದ ಯಶಸ್ವಿನಿ ಸೋಮಶೇಖರ್ ಇದೀಗ ಮತ್ತೊಂದು ಎಡವಟ್ಟು ಮಾಡಿದ್ದಾರೆ.ಮಾಜಿ ಎಂದು ಬದಲಾವಣೆ ಮಾಡುವ ಬದಲು ನಿಕಟಪೂರ್ವ ಎಂದು ಬದಲಾಯಿಸಿ ಎಡವಟ್ಟು ಮಾಡಿಕೊಂಡಿದ್ದಾರೆ.ಮಾಜಿಗೂ ನಿಕಟಪೂರ್ವಕ್ಕೂ ಅರ್ಥ ತಿಳಿಯದೆ ಎಡವಟ್ಟು ಮಾಡಿಕೊಂಡಿದ್ದಾರೆ.ಮುಡಾ ಅಧ್ಯಕ್ಷರಾಗಿ ಅಧಿಕಾರ ತ್ಯಜಿಸಿ ಮೂರು ವರ್ಷ ಕಳೆದರೂ ತಮ್ಮ ನಿವಾಸದ ಮುಂದಿನ ಗೇಟ್ ಮೇಲೆ ಮುಡಾ ಅಧ್ಯಕ್ಷರೆಂದೇ ಫಲಕ ಹಾಕಿ ಸಾರ್ವಜನಿಕರಿಗೆ ತಪ್ಪು ಸಂದೇಶ ನೀಡುತ್ತಿದ್ದರು.ಇವರ ಅವಧಿ ಮುಗಿದ ನಂತರ ಇಬ್ಬರು ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರೂ ತಮ್ಮ ನಿವಾಸದ ಮುಂದೆ ಅಳವಡಿಸಿದ್ದ ಫಲಕವನ್ನ ಬದಲಾಯಿಸಿರಲಿಲ್ಲ.ಈ ಬಗ್ಗೆ ಕೆಲವು ದಿನಗಳ ಹಿಂದಷ್ಟೆ ನಮ್ಮ ವಾಹಿನಿಯಲ್ಲಿ ಈ ಬಗ್ಗೆ ಸುದ್ದಿ ಪ್ರಸಾರ ಮಾಡಲಾಗಿತ್ತು.ಇದೀಗ ಎಚ್ಚೆತ್ತ ಯಶಸ್ವಿನಿ ಸೋಮಶೇಖರ್ ತಮ್ಮ ತಪ್ಪನ್ನ ಸರಿಪಡಿಸಿಕೊಳ್ಳುವ ಬದಲು ನಿಕಟಪೂರ್ವ ಮುಡಾ ಅಧ್ಯಕ್ಷರು ಎಂದು ಫಲಕದಲ್ಲಿ ಬದಲಾವಣೆ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ಮತ್ತೊಮ್ಮೆ ತಪ್ಪು ಮಾಹಿತಿ ನೀಡುತ್ತಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *