ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್…ಸಿಎಆರ್ ಕಿಂಗ್ಸ್ XI ವಿನ್ನರ್ಸ್…ಲಕ್ಷ್ಮಿಪುರಂ ಫೀನಿಕ್ಸ್ ರನ್ನರ್ ಅಪ್…

ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್…ಸಿಎಆರ್ ಕಿಂಗ್ಸ್ XI ವಿನ್ನರ್ಸ್…ಲಕ್ಷ್ಮಿಪುರಂ ಫೀನಿಕ್ಸ್ ರನ್ನರ್ ಅಪ್…

ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್…ಸಿಎಆರ್ ಕಿಂಗ್ಸ್ XI ವಿನ್ನರ್ಸ್…ಲಕ್ಷ್ಮಿಪುರಂ ಫೀನಿಕ್ಸ್ ರನ್ನರ್ ಅಪ್…

ಮೈಸೂರು,ಜೂ2,Tv10 ಕನ್ನಡ

ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್ ನ ಫೈನಲ್ ಮ್ಯಾಚ್ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಫೈರಿಂಗ್ ರೇಂಜ್ ಮೈದಾನದಲ್ಲಿ ರೋಚಕವಾಗಿ ನಡೆಯಿತು.ಫೈನಲ್ ತಲುಪಿದ ಸಿಎಆರ್ ಕಿಂಗ್ಸ್ ಇಲೆವೆನ್ ತಂಡ ಗೆಲುವು ಸಾಧಿಸುವ ಮೂಲಕ MPL ಟ್ರೋಫಿಯನ್ನ ತನ್ನ ಮುಡಿಗೇರಿಸಿಕೊಂಡಿತು.ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಫೀನಿಕ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿತು.ಸುಮಾರು ಮೂರು ತಿಂಗಳಿಂದ ನಡೆಯುತ್ತಿರುವ ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿವಿದ ವಿಭಾಗದ 12 ತಂಡಗಳು ಭಾಗವಹಿಸಿದ್ದವು.ಕಾನೂನು ರಕ್ಷಣೆಗೂ ಸೈ…ಬ್ಯಾಟ್ ಬಾಲ್ ಹಿಡಿಯುವುದಕ್ಕೂ ಸೈ ಎಂದು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಂಡಗಳು ಪರಸ್ಪರ ಎದುರಿಸಿದ್ದವು.ಸುಮಾರು 136 ಪಂದ್ಯಗಳು ನಡೆಯಿತು.ಅಂತಿಮವಾಗಿ ಸಿಎಆರ್ ನ ಕಿಂಗ್ಸ್ XI ತಂಡ ಹಾಗೂ ಲಕ್ಷ್ಮಿಪುರಂ ಠಾಣೆಯ ಫೀನಿಕ್ಸ್ ತಂಡ ಫೈನಲ್ ತಲುಪಿತ್ತು.ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಮುಂಜಾನೆ 6 ರಿಂದ 9 ಗಂಟೆ ಒಳಗೆ ಪ್ರತಿದಿನ ಮ್ಯಾಚ್ ಗಳು ನಡೆಯಿತು.ಕರ್ತವ್ಯದ ಒತ್ತಡಗಳ ನಡುವೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಿಣಿತ ಕ್ರಿಕಟ್ ಪಟುಗಳು ನಾಚುವಂತೆ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಭಾಗವಹಿಸಿ ಕ್ರೀಡಾ ಮನೋಭಾವವನ್ನ ಪ್ರದರ್ಶಿಸಿದ್ದರು.ಇಂದು ನಡೆದ ರೋಚಕ ಫೈನಲ್ ಪಂದ್ಯಾವಳಿಯಲ್ಲಿ ಸಿಎಆರ್ ನ ಕಿಂಗ್ಸ್ ಇಲವೆನ್ ತಂಡ ಲಕ್ಷ್ಮಿಪುರಂ ಠಾಣೆಯ ಫೀನಿಕ್ಸ್ ತಂಡವನ್ನ ಮಣಿಸಿ ಟ್ರೋಫಿಗೆ ಮುತ್ತಿಟ್ಟಿತು.

ವಿಷ್ಣು ರವರನ್ನ ಫೈನಲ್ ಪಂದ್ಯದ ಮ್ಯಾನ್ ಆಫ್ ದ ಮ್ಯಾಚ್ ಆಗಿ ಘೋಷಿಸಲಾಯಿತು.ಬೆಸ್ಟ್ ಬ್ಯಾಟ್ಸ್ ಮನ್ ಆಗಿ ರವೀಶ,ಬೆಸ್ಟ್ ಬೌಲರ್ ಆಗಿ ದುರ್ಗ,ಆಲ್ ರೌಂಡರ್ ಆಗಿ ರಾಜೇಶ್ ಆಯ್ಕೆಯಾದರು.ಫೈನಲ್ ಪಂದ್ಯದಲ್ಲಿ ಶಿವು ರವರು ಹೆಚ್ಚು ಬೌಂಡರಿ ಗಳಿಸುವ ಮೂಲಕ ಗಮನ ಸೆಳೆದರು.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಎಮ್.ಮುತ್ತುರಾಜ್,ಸಶಸ್ತ್ರ ಮೀಸಲು ಪಡೆ ಉಪಪೋಲೀಸ್ ಆಯುಕ್ತರಾದ ಮಾರುತಿ ಹಾಗೂ ಕಿರಣ್ ರಾಜ್ ರವರು ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಿ ವಿನ್ನರ್ಸ್ ಹಾಗೂ ರನ್ನರ್ಸ್ ತಂಡಗಳಿಗೆ ಟ್ರೋಫಿಯನ್ನ ವಿತರಿಸಿ ಶುಭಹಾರೈಸಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *