ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್…ಸಿಎಆರ್ ಕಿಂಗ್ಸ್ XI ವಿನ್ನರ್ಸ್…ಲಕ್ಷ್ಮಿಪುರಂ ಫೀನಿಕ್ಸ್ ರನ್ನರ್ ಅಪ್…

ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್…ಸಿಎಆರ್ ಕಿಂಗ್ಸ್ XI ವಿನ್ನರ್ಸ್…ಲಕ್ಷ್ಮಿಪುರಂ ಫೀನಿಕ್ಸ್ ರನ್ನರ್ ಅಪ್…

ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್…ಸಿಎಆರ್ ಕಿಂಗ್ಸ್ XI ವಿನ್ನರ್ಸ್…ಲಕ್ಷ್ಮಿಪುರಂ ಫೀನಿಕ್ಸ್ ರನ್ನರ್ ಅಪ್…

ಮೈಸೂರು,ಜೂ2,Tv10 ಕನ್ನಡ

ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್ ನ ಫೈನಲ್ ಮ್ಯಾಚ್ ಇಂದು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಫೈರಿಂಗ್ ರೇಂಜ್ ಮೈದಾನದಲ್ಲಿ ರೋಚಕವಾಗಿ ನಡೆಯಿತು.ಫೈನಲ್ ತಲುಪಿದ ಸಿಎಆರ್ ಕಿಂಗ್ಸ್ ಇಲೆವೆನ್ ತಂಡ ಗೆಲುವು ಸಾಧಿಸುವ ಮೂಲಕ MPL ಟ್ರೋಫಿಯನ್ನ ತನ್ನ ಮುಡಿಗೇರಿಸಿಕೊಂಡಿತು.ಲಕ್ಷ್ಮೀಪುರಂ ಪೊಲೀಸ್ ಠಾಣೆಯ ಫೀನಿಕ್ಸ್ ತಂಡ ರನ್ನರ್ ಅಪ್ ಆಗಿ ಹೊರಹೊಮ್ಮಿತು.ಸುಮಾರು ಮೂರು ತಿಂಗಳಿಂದ ನಡೆಯುತ್ತಿರುವ ಮೈಸೂರು ಪೊಲೀಸ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿವಿದ ವಿಭಾಗದ 12 ತಂಡಗಳು ಭಾಗವಹಿಸಿದ್ದವು.ಕಾನೂನು ರಕ್ಷಣೆಗೂ ಸೈ…ಬ್ಯಾಟ್ ಬಾಲ್ ಹಿಡಿಯುವುದಕ್ಕೂ ಸೈ ಎಂದು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದ ತಂಡಗಳು ಪರಸ್ಪರ ಎದುರಿಸಿದ್ದವು.ಸುಮಾರು 136 ಪಂದ್ಯಗಳು ನಡೆಯಿತು.ಅಂತಿಮವಾಗಿ ಸಿಎಆರ್ ನ ಕಿಂಗ್ಸ್ XI ತಂಡ ಹಾಗೂ ಲಕ್ಷ್ಮಿಪುರಂ ಠಾಣೆಯ ಫೀನಿಕ್ಸ್ ತಂಡ ಫೈನಲ್ ತಲುಪಿತ್ತು.ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ಮುಂಜಾನೆ 6 ರಿಂದ 9 ಗಂಟೆ ಒಳಗೆ ಪ್ರತಿದಿನ ಮ್ಯಾಚ್ ಗಳು ನಡೆಯಿತು.ಕರ್ತವ್ಯದ ಒತ್ತಡಗಳ ನಡುವೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಿಣಿತ ಕ್ರಿಕಟ್ ಪಟುಗಳು ನಾಚುವಂತೆ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಭಾಗವಹಿಸಿ ಕ್ರೀಡಾ ಮನೋಭಾವವನ್ನ ಪ್ರದರ್ಶಿಸಿದ್ದರು.ಇಂದು ನಡೆದ ರೋಚಕ ಫೈನಲ್ ಪಂದ್ಯಾವಳಿಯಲ್ಲಿ ಸಿಎಆರ್ ನ ಕಿಂಗ್ಸ್ ಇಲವೆನ್ ತಂಡ ಲಕ್ಷ್ಮಿಪುರಂ ಠಾಣೆಯ ಫೀನಿಕ್ಸ್ ತಂಡವನ್ನ ಮಣಿಸಿ ಟ್ರೋಫಿಗೆ ಮುತ್ತಿಟ್ಟಿತು.

ವಿಷ್ಣು ರವರನ್ನ ಫೈನಲ್ ಪಂದ್ಯದ ಮ್ಯಾನ್ ಆಫ್ ದ ಮ್ಯಾಚ್ ಆಗಿ ಘೋಷಿಸಲಾಯಿತು.ಬೆಸ್ಟ್ ಬ್ಯಾಟ್ಸ್ ಮನ್ ಆಗಿ ರವೀಶ,ಬೆಸ್ಟ್ ಬೌಲರ್ ಆಗಿ ದುರ್ಗ,ಆಲ್ ರೌಂಡರ್ ಆಗಿ ರಾಜೇಶ್ ಆಯ್ಕೆಯಾದರು.ಫೈನಲ್ ಪಂದ್ಯದಲ್ಲಿ ಶಿವು ರವರು ಹೆಚ್ಚು ಬೌಂಡರಿ ಗಳಿಸುವ ಮೂಲಕ ಗಮನ ಸೆಳೆದರು.

ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವರಾದ ಎಮ್.ಮುತ್ತುರಾಜ್,ಸಶಸ್ತ್ರ ಮೀಸಲು ಪಡೆ ಉಪಪೋಲೀಸ್ ಆಯುಕ್ತರಾದ ಮಾರುತಿ ಹಾಗೂ ಕಿರಣ್ ರಾಜ್ ರವರು ಫೈನಲ್ ಪಂದ್ಯಕ್ಕೆ ಸಾಕ್ಷಿಯಾಗಿ ವಿನ್ನರ್ಸ್ ಹಾಗೂ ರನ್ನರ್ಸ್ ತಂಡಗಳಿಗೆ ಟ್ರೋಫಿಯನ್ನ ವಿತರಿಸಿ ಶುಭಹಾರೈಸಿದರು…

Spread the love

Related post

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…
ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ…

ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಎಚ್.ವಿ. ರಾಘವೇಂದ್ರ ಅವರಿಗೆ ಆತ್ಮೀಯ ಸನ್ಮಾನ ಸರಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಚ್.ವಿ. ರಾಘವೇಂದ್ರ ಅವರ…
ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್…

ಮೈಸೂರಿನಲ್ಲಿ ವಿವಾಹಿತೆ ಕಿಡ್ನಾಪ್…ರಾಮನಗರದಲ್ಲಿ ಅಕ್ರಮ ಬಂಧನ…ಪೊಲೀಸರಿಂದ ರಕ್ಷಣೆ…ಮೂವರು ಅಂದರ್… ಮೈಸೂರು,ಜೂ30,Tv10 ಕನ್ನಡ ಪ್ರೀತಿಸಿ ಮದುವೆಯಾದ ವಿವಾಹಿತೆಯನ್ನ ಮೂವರು ವ್ಯಕ್ತಿಗಳು ಕಿಡ್ನಾಪ್ ಮಾಡಿ ರಾಮನಗರದ ಮನೆಯೊಂದರಲ್ಲಿ ಅಕ್ರಮವಾಗಿ ಬಂಧನದಲ್ಲಿಟ್ಟ ಘಟನೆ…

Leave a Reply

Your email address will not be published. Required fields are marked *