ಸೋರುತಿಹುದು ನಾಡಕಚೇರಿ ಮಾಳಿಗೆ…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಟ್ಟಡ…ಜೀವಭಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ…

ಸೋರುತಿಹುದು ನಾಡಕಚೇರಿ ಮಾಳಿಗೆ…ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಕಟ್ಟಡ…ಜೀವಭಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ…

ಹುಣಸೂರು,ಜೂ6,Tv10 ಕನ್ನಡ

ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಜವಾಬ್ದಾರಿ ಹೊತ್ತ ಸರ್ಕಾರಿ ಕಚೇರಿಯ ಕಟ್ಟಡವೇ ದುಃಸ್ಥಿತಿಯಲ್ಲಿದೆ.ಶಿಥಿಲಗೊಂಡ ಕಟ್ಟಡದಲ್ಲಿ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕಾದ ಪರಿಸ್ಥಿತಿ ಉದ್ಭವವಾಗಿದೆ. ಇಲ್ಲಿನ ಸಿಬ್ಬಂದಿಗಳು ಜೀವಭಯದಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಕಟ್ಟಡವನ್ನ ಸುಸ್ಥಿತಿಗೆ ತರುವ ಗೋಜಿಗೆ ಹಿರಿಯ ಅಧಿಕಾರಿಗಳು ಗಮನ ಹರಿಸುತ್ತಿಲ್ಲ.ಯಾವಾಗ ಬೇಕಿದ್ರೂ ಕುಸಿಯುವ ಹಂತದಲ್ಲಿರುವ ಈ ನಾಡಕಚೇರಿಗೆ ಕಾಯಕಲ್ಪ ಬೇಕಿದೆ.

ಇದು ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ನಾಡಕಚೇರಿಯ ದುಃಸ್ಥಿತಿ.ಮಳೆ ಬಂದರೆ ಕಚೇರಿಯ ಒಳಗೆ ಸೋರುತ್ತದೆ.ಗೋಡೆಗಳು ಅಲ್ಲಲ್ಲಿ ಉದುರಿಹೋಗಿದೆ.ಶಿಥಿಲಗೊಂಡ ಕಟ್ಟಡ.ಮಳೆ ಬಂದರೆ ಅಧ್ವಾನ.ಇಂತಹ ಶಿಥಿಲಗೊಂಡ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ಇಲ್ಲಿನ ಸಿಬ್ಬಂದಿಗಳದ್ದು.ಕಳೆದ ಐದಾರು ವರ್ಷಗಳಿಂದ ಮಳೆ ಬಂದರೆ ಸಿಬ್ಬಂದಿಗಳಿಗೆ ಪೀಕಲಾಟ.ಗ್ರಾಮಪಂಚಾಯ್ತಿ ವ್ಯಾಪ್ತಿಗೆ ಒಳಪಡುವ ನಾಡಕಚೇರಿಗೆ ಪ್ರತಿದಿನ ನೂರಾರು ಮಂದಿ ಭೇಟಿ ನೀಡುತ್ತಾರೆ.ಶಿಥಿಲಗೊಂಡ ಕಟ್ಟಡ ಯಾವಾಗ ಬೇಕಾದ್ರೂ ಕುಸಿಯುವ ಸಂಭವವಿದೆ.ಕಟ್ಟಡದ ಅಭಿವೃದ್ದಿಗಾಗಿ ಮಾಡಿದ ಮನವಿ ಕಸದಬುಟ್ಟಿ ಸೇರಿದೆ.ಪರ್ಯಾಯ ಕಟ್ಟಡಕ್ಕೆ ಸ್ಥಳಾಂತರಿಸದ ಹಿರಿಯ ಅಧಿಕಾರಿಗಳು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.ಅಪಾಯ ಸಂಭವಿಸುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.ಶೀಘ್ರದಲ್ಲಿ ಈ ನಾಡಕಚೇರಿಗೆ ಕಾಯಕಲ್ಪ ಒದಗಿಸಬೇಕಿದೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *