ಬಿಳಿಕೆರೆ ಪೊಲೀಸರ ಕಾರ್ಯಾಚರಣೆ… ಇಬ್ಬರು ಮನೆಗಳ್ಳರ ಬಂಧನ…ನಗದು,ಚುನ್ನಾಭರಣ ವಶ…(ಕಳ್ಳತನ ಮಾಡಲು ಬಳಸಿದ ಮಹಿಂದ್ರಾ ಜೀತೋ ವಾಹನದ ಜೊತೆಗೆ 1.27.400/- ರೂ ನಗದು ಹಣ ಮತ್ತು 1.40.000/- ರೂ ಮೌಲ್ಯದ ಚಿನ್ನಾಭರಣ ವಶ)

ಬಿಳಿಕೆರೆ ಪೊಲೀಸರ ಕಾರ್ಯಾಚರಣೆ… ಇಬ್ಬರು ಮನೆಗಳ್ಳರ ಬಂಧನ…ನಗದು,ಚುನ್ನಾಭರಣ ವಶ…(ಕಳ್ಳತನ ಮಾಡಲು ಬಳಸಿದ ಮಹಿಂದ್ರಾ ಜೀತೋ ವಾಹನದ ಜೊತೆಗೆ 1.27.400/- ರೂ ನಗದು ಹಣ ಮತ್ತು 1.40.000/- ರೂ ಮೌಲ್ಯದ ಚಿನ್ನಾಭರಣ ವಶ)

ಹುಣಸೂರು,ಜೂ9,Tv10 ಕನ್ನಡ

ಹುಣಸೂರು ತಾಲೂಕಿನ ಧರ್ಮಾಪುರ ಗ್ರಾಮದ ರಾಮೇಗೌಡ ಎಂಬುವರ ವಾಸದ ಮನೆಯಲ್ಲಿ ಹಾಡ ಹಗಲೇ ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬಿಳಿಕೆರೆ ಕ್ರೈಂ ಪೊಲೀಸರ ತಂಡ ಯಶಸ್ವಿಯಾಗಿದೆ. ಮಂಜುನಾಥ್ ಹಾಗೂ ಸೂರ್ಯ ಬಂಧಿತ ಆರೋಪಿಗಳು.ಬಂಧಿತರಿಂದ ಕೃತ್ಯಕ್ಕೆ ಬಳಸಲಾಗಿದ್ದ ಮಹೂಂದ್ರ ವಾಹನ 1,27,000/- ನಗದು ಹಾಗೂ 1,40,000/- ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ.
ಮನೆಯಲ್ಲಿ ಯಾರೂ ಇಲ್ಲದನ್ನು ಗಮನಿಸಿದ ಖದೋಮರು ತಮ್ಮ ಕೈಚಳಕ ತೋರಿ 3 ಲಕ್ಷ ನಗದು ಹಣ ಮತ್ತು ಸುಮಾರು 35 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮೈಸೂರು ಜಿಲ್ಲಾ ಎಸ್.ಪಿ ಸೀಮಾ ಲಾಟ್ಕರ್, ಅಡಿಷನಲ್ ಎಸ್.ಪಿ ನಂದಿನಿ ಹಾಗೂ ನಾಗೇಶ್ ರವರುಗಳು ಹುಣಸೂರು ಉಪ ವಿಭಾಗದ ಡಿ.ವೈ.ಎಸ್.ಪಿ ಗೋಪಾಲಕೃಷ್ಣ ರವರ ಮಾರ್ಗದರ್ಶನದಲ್ಲಿ ಬಿಳಿಕೆರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಲೋಲಾಕ್ಷಿ.ಟಿ.ಎಸ್ ರವರ ನೇತೃತ್ವದಲ್ಲಿ ತಂಡವನ್ನು ರಚಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. 09.06.2024 ರ ಭಾನುವಾರದಂದು ಖಚಿತ ಮಾಹಿತಿ ಮೇರೆಗೆ ಈ ತಂಡವು ಇಬ್ಬರು ಮನೆಗಳ್ಳರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಉದ್ದೂರು ಗ್ರಾಮದ ಅಜಯ್
ಎಂಬಾತ ತಲೆ ಮರೆಸಿಕೊಂಡಿರುತ್ತಾನೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಿಳಿಕೆರೆ ಪೊಲೀಸ್
ಠಾಣೆಯ ಇನ್ಸ್ಪೆಕ್ಟರ್ ಲೋಲಾಕ್ಷಿ.ಟಿ.ಎಸ್ ರವರ ನೇತೃತ್ವದ ಈ ತಂಡದಲ್ಲಿ ಕ್ರೈಂ ಸಬ್ ಇನ್ಸ್ಪೆಕ್ಟರ್ ನಾಗೇಶ್.ಎನ್, ಸಿಬ್ಬಂದಿಗಳಾದ ಪ್ರಸಾದ್ ಧರ್ಮಾಪುರ, ಪ್ರತಾಪ್, ಶಿವಕುಮಾರ ಹಾಗೂ ಜೀಪ್ ಚಾಲಕ ಗೋವಿಂದರಾಜು ರವರುಗಳು ಕಾರ್ಯ ನಿರ್ವಹಿಸಿದ್ದು, ತಂಡದ ಈ ಉತ್ತಮ ಕಾರ್ಯವನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿರುತ್ತಾರೆ…

Spread the love

Related post

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ…

ಎಂಎಲ್ಸಿ ವಿಶ್ವನಾಥ್ ವಿರುದ್ದ FIR…ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ…55 ಲಕ್ಷ ಹಿಂದಿರುಗಿಸದ ಆರೋಪ… ಮೈಸೂರು,ಮೇ20,Tv10 ಕನ್ನಡ ಸಾಲದ ಹಣ ವಾಪಸ್ ಕೇಳಲು ಹೋದ…
ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ…

ಮಂಡ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ..ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ… ಮಂಡ್ಯ,ಮೇ20,Tv10 ಕನ್ನಡ ಮಂಡ್ಯ ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ನಡೆದಿದೆ.ಮಾರಕಾಸ್ತ್ರಗಳಿಂದ ಯುವಕನನ್ನ ದುಷ್ಕರ್ಮಿಗಳು ಕೊಚ್ಚಿ ಹಾಕಿದ್ದಾರೆ.ಮಂಡ್ಯ ಜಿಲ್ಲೆ ಮದ್ದೂರು…
ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ…

ಸರ್ಕಾರಿ ಗೋಮಾಳದಲ್ಲಿ ಅಕ್ರಮ ಗಣಿಗಾರಿಕೆ…ತಹಸೀಲ್ದಾರ್ ದಾಳಿ…ಸ್ಪೋಟಕ್ಕೆ ಬಳಸುವ ವಸ್ತುಗಳು ವಶ… ಶ್ರೀರಂಗಪಟ್ಟಣ,ಮೇ19,Tv10 ಕನ್ನಡ ಅಕ್ರಮ ಗಣಿಗಾರಿಕೆ ವಿರುದ್ಧ ಮಂಡ್ಯ ಜಿಲ್ಲಾಡಳಿತದ ಸಮರ ಸಾರಿದೆ.ನಿಷೇಧದ ನಡುವೆಯೂ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ…

Leave a Reply

Your email address will not be published. Required fields are marked *