ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ

ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿಯುಕ್ತ ವಸತಿಕೇಂದ್ರ ಕ್ಕೆ ಮಂಜೂರು ಮಾಡಲಾಗಿದೆ.ಆದರೆ ಸದರಿ ನಿವೇಶನವನ್ನ ಇಬ್ಬಾಗ ಮಾಡಿ ಅನಧಿಕೃತವಾಗಿ ನೇಹಾ ಕ್ಯಾಂಟೀನ್ ರವರಿಗಾಗಿ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿರುವುದು ಕಂಡು ಬಂದಿದೆ.ಅಲ್ಲದೆ ಪಕ್ಕದಲ್ಲಿರುವ ಕೆರೆಯ ಬಫರ್ ಜೋನ್ ಜಾಗವನ್ನೂ ಸಹ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ದಾಖಲೆಗಳು Tv10 ಕನ್ನಡ ವಾಹಿನಿಗೆ ತಲುಪಿದೆ.ಈ ಆರೋಪದ ಹಿನ್ನಲೆ ವಲಯ ಕಚೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮೇಲ್ನೋಟಕ್ಕೆ ನಿಯಮಗಳನ್ನ ಉಲ್ಲಂಘಿಸಿರುವುದು ಸಾಬೀತಾದ ಹಿನ್ನಲೆ ಸಂಸ್ಥೆ ಮುಖ್ಯಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲಾತಿಗಳ ಸಮೇತ ಹಾಜರಾಗಿ ಸಮಜಾಯಿಷಿ ನೀಡಬೇಕು ಹಾಗೂ ಬಫರ್ ಜಾಗದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚೆರಿಕೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದ್ದಾರೆ…

Spread the love

Related post

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ ಉಪನೊಂದಣಾಧಿಕಾರಿಗಳಿಂದ ಪ್ರಕರಣ ದಾಖಲು…

ಅಸಲಿ ಇದ್ದರೂ ನಕಲಿ ವ್ಯಕ್ತಿಗಳಿಂದ ಆಸ್ತಿ ಕಬಳಿಸಲು ಸಂಚು…ಐವರ ವಿರುದ್ದ ಹಿರಿಯ…

ಮೈಸೂರು,ಜು10,Tv10 ಕನ್ನಡ ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.ಸಂಚು ರೂಪಿಸಿ ಸಿಕ್ಕಿಬಿದ್ದ ಐದು ಭೂಗಳ್ಳರ…
ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹೃದಯ ಅಪಘಾತದಿಂದ ಗದ್ದಿಗೆ ಅರ್ಚಿಕರು ಸಾವು

ಹುಣಸೂರು ತಾಲೂಕಿನ ಗದ್ದಿಗೆ ಚಂಡುಗಣ್ಣ ಸ್ವಾಮಿ ಎಂಬ ಹೆಸರಿನ ಪ್ರಸಿದ್ದ ದೇವಸ್ಥಾನದಲ್ಲಿ ಕೆಂಡಗಣ್ಣ ಸ್ವಾಮಿ ಎಂಬ ಅರ್ಚಕರು ಬೆಳಗಿನ ಜಾವ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತಯಾರಿ ನಡೆಸುವ ವೇಳೆ…
ಹೃದಯಾಘಾತದಿಂದ ಯುವಕ ಸಾವು…

ಹೃದಯಾಘಾತದಿಂದ ಯುವಕ ಸಾವು…

ಮೈಸೂರು,ಜು10,Tv10 ಕನ್ನಡ ಮೈಸೂರಿನಲ್ಲಿ ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾನೆ.ದರ್ಶನ್ ಚೌದ್ರಿ (29) ಸಾವನ್ನಪ್ಪಿದ ಯುವಕ.ಮೈಸೂರಿನ ಚಾಮರಾಜ ಮೊಹಲ್ಲಾದ ನಿವಾಸಿಯಾಗಿದ್ದುದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ.ನೆನ್ನೆ ರಾತ್ರಿ ದಿಢೀರ್ ಎದೆ ನೋವು…

Leave a Reply

Your email address will not be published. Required fields are marked *