ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ

ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿಯುಕ್ತ ವಸತಿಕೇಂದ್ರ ಕ್ಕೆ ಮಂಜೂರು ಮಾಡಲಾಗಿದೆ.ಆದರೆ ಸದರಿ ನಿವೇಶನವನ್ನ ಇಬ್ಬಾಗ ಮಾಡಿ ಅನಧಿಕೃತವಾಗಿ ನೇಹಾ ಕ್ಯಾಂಟೀನ್ ರವರಿಗಾಗಿ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿರುವುದು ಕಂಡು ಬಂದಿದೆ.ಅಲ್ಲದೆ ಪಕ್ಕದಲ್ಲಿರುವ ಕೆರೆಯ ಬಫರ್ ಜೋನ್ ಜಾಗವನ್ನೂ ಸಹ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ದಾಖಲೆಗಳು Tv10 ಕನ್ನಡ ವಾಹಿನಿಗೆ ತಲುಪಿದೆ.ಈ ಆರೋಪದ ಹಿನ್ನಲೆ ವಲಯ ಕಚೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮೇಲ್ನೋಟಕ್ಕೆ ನಿಯಮಗಳನ್ನ ಉಲ್ಲಂಘಿಸಿರುವುದು ಸಾಬೀತಾದ ಹಿನ್ನಲೆ ಸಂಸ್ಥೆ ಮುಖ್ಯಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲಾತಿಗಳ ಸಮೇತ ಹಾಜರಾಗಿ ಸಮಜಾಯಿಷಿ ನೀಡಬೇಕು ಹಾಗೂ ಬಫರ್ ಜಾಗದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚೆರಿಕೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *