ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ

ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿಯುಕ್ತ ವಸತಿಕೇಂದ್ರ ಕ್ಕೆ ಮಂಜೂರು ಮಾಡಲಾಗಿದೆ.ಆದರೆ ಸದರಿ ನಿವೇಶನವನ್ನ ಇಬ್ಬಾಗ ಮಾಡಿ ಅನಧಿಕೃತವಾಗಿ ನೇಹಾ ಕ್ಯಾಂಟೀನ್ ರವರಿಗಾಗಿ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿರುವುದು ಕಂಡು ಬಂದಿದೆ.ಅಲ್ಲದೆ ಪಕ್ಕದಲ್ಲಿರುವ ಕೆರೆಯ ಬಫರ್ ಜೋನ್ ಜಾಗವನ್ನೂ ಸಹ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ದಾಖಲೆಗಳು Tv10 ಕನ್ನಡ ವಾಹಿನಿಗೆ ತಲುಪಿದೆ.ಈ ಆರೋಪದ ಹಿನ್ನಲೆ ವಲಯ ಕಚೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮೇಲ್ನೋಟಕ್ಕೆ ನಿಯಮಗಳನ್ನ ಉಲ್ಲಂಘಿಸಿರುವುದು ಸಾಬೀತಾದ ಹಿನ್ನಲೆ ಸಂಸ್ಥೆ ಮುಖ್ಯಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲಾತಿಗಳ ಸಮೇತ ಹಾಜರಾಗಿ ಸಮಜಾಯಿಷಿ ನೀಡಬೇಕು ಹಾಗೂ ಬಫರ್ ಜಾಗದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚೆರಿಕೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದ್ದಾರೆ…

Spread the love

Related post

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…
ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ…

ಸಾಹಸಸಿಂಹ ಡಾ. ವಿಷ್ಣುವರ್ಧನ್ 76ನೇ ಜನ್ಮದಿನಾಚರಣೆ…ಉದ್ಭೂರು ಗೇಟ್ ಸ್ಮಾರಕದಲ್ಲಿ ಅದ್ಧೂರಿ ಕಾರ್ಯಕ್ರಮ… ಮೈಸೂರು,ಸೆ15,Tv10 ಕನ್ನಡ ಸಾಹಸಸಿಂಹ, ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅವರ 76ನೇ ಜನ್ಮದಿನಾಚರಣೆಯನ್ನು ಸೆಪ್ಟೆಂಬರ್ 18ರಂದು…

Leave a Reply

Your email address will not be published. Required fields are marked *