ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ

ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿಯುಕ್ತ ವಸತಿಕೇಂದ್ರ ಕ್ಕೆ ಮಂಜೂರು ಮಾಡಲಾಗಿದೆ.ಆದರೆ ಸದರಿ ನಿವೇಶನವನ್ನ ಇಬ್ಬಾಗ ಮಾಡಿ ಅನಧಿಕೃತವಾಗಿ ನೇಹಾ ಕ್ಯಾಂಟೀನ್ ರವರಿಗಾಗಿ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿರುವುದು ಕಂಡು ಬಂದಿದೆ.ಅಲ್ಲದೆ ಪಕ್ಕದಲ್ಲಿರುವ ಕೆರೆಯ ಬಫರ್ ಜೋನ್ ಜಾಗವನ್ನೂ ಸಹ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ದಾಖಲೆಗಳು Tv10 ಕನ್ನಡ ವಾಹಿನಿಗೆ ತಲುಪಿದೆ.ಈ ಆರೋಪದ ಹಿನ್ನಲೆ ವಲಯ ಕಚೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮೇಲ್ನೋಟಕ್ಕೆ ನಿಯಮಗಳನ್ನ ಉಲ್ಲಂಘಿಸಿರುವುದು ಸಾಬೀತಾದ ಹಿನ್ನಲೆ ಸಂಸ್ಥೆ ಮುಖ್ಯಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲಾತಿಗಳ ಸಮೇತ ಹಾಜರಾಗಿ ಸಮಜಾಯಿಷಿ ನೀಡಬೇಕು ಹಾಗೂ ಬಫರ್ ಜಾಗದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚೆರಿಕೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದ್ದಾರೆ…

Spread the love

Related post

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು…

ನಂಜನಗೂಡಯಜಾತ್ರೆ ನೋಡಲು ವ್ಯಕ್ತಿ ಹೃದಯಾಘಾತದಿಂದ ಸಾವು… ನಂಜನಗೂಡು,ಮಾ30,Tv10 ಕನ್ನಡ ದಕ್ಷಿಣ ಕಾಶಿ ಖ್ಯಾತಿಯ ಶ್ರೀಕಂಠೇಶ್ವರ ಸ್ವಾಮಿ ದೊಡ್ಡಜಾತ್ರೆಗೆ ಬಂದಿದ್ದ ಭಕ್ತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಂಜುಂಡಸ್ವಾಮಿ (58) ಮೃತ ದುರ್ದೈವಿ.ಬೆಂಗಳೂರು…
ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು…

ದೊಡ್ಡಜಾತ್ರೆಯಲ್ಲಿ ಕಾಲ್ತುಳಿತ…ತಂದೆ ಮಗ ಇಬ್ಬರಿಗೂ ಗಾಯ…ಆಸ್ಪತ್ರೆಗೆ ದಾಖಲು… ನಂಜನಗೂಡು,ಮಾ30,Tv10 ಕನ್ನಡ ನಂಜುಂಡೇಶ್ವರನ ದೊಡ್ಡ ಜಾತ್ರೆಯಲ್ಲಿ ಕಾಲ್ತುಳಿತಕ್ಕೆ ತಂದೆ ಮಗ ಗಾಯಗೊಂಡಿದ್ದಾರೆ.ಪಂಚ ಮಹಾರಥೋತ್ಸವ ಸಾಗುವ ಸಂದರ್ಭದಲ್ಲಿ ಘಟನೆ ನಡೆದಿದೆ.ಬಾರಿ ಭಕ್ತ…
2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ

2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟ: ರಾಜ್ಯದ 153 ಪೊಲೀಸರಿಗೆ ಗೌರವ ಬೆಂಗಳೂರು: 2025ನೇ ಸಾಲಿನ ಮುಖ್ಯಮಂತ್ರಿ ಪದಕ (CM Medal) ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ವಿವಿಧ…

Leave a Reply

Your email address will not be published. Required fields are marked *