ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ

ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿಯುಕ್ತ ವಸತಿಕೇಂದ್ರ ಕ್ಕೆ ಮಂಜೂರು ಮಾಡಲಾಗಿದೆ.ಆದರೆ ಸದರಿ ನಿವೇಶನವನ್ನ ಇಬ್ಬಾಗ ಮಾಡಿ ಅನಧಿಕೃತವಾಗಿ ನೇಹಾ ಕ್ಯಾಂಟೀನ್ ರವರಿಗಾಗಿ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿರುವುದು ಕಂಡು ಬಂದಿದೆ.ಅಲ್ಲದೆ ಪಕ್ಕದಲ್ಲಿರುವ ಕೆರೆಯ ಬಫರ್ ಜೋನ್ ಜಾಗವನ್ನೂ ಸಹ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ದಾಖಲೆಗಳು Tv10 ಕನ್ನಡ ವಾಹಿನಿಗೆ ತಲುಪಿದೆ.ಈ ಆರೋಪದ ಹಿನ್ನಲೆ ವಲಯ ಕಚೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮೇಲ್ನೋಟಕ್ಕೆ ನಿಯಮಗಳನ್ನ ಉಲ್ಲಂಘಿಸಿರುವುದು ಸಾಬೀತಾದ ಹಿನ್ನಲೆ ಸಂಸ್ಥೆ ಮುಖ್ಯಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲಾತಿಗಳ ಸಮೇತ ಹಾಜರಾಗಿ ಸಮಜಾಯಿಷಿ ನೀಡಬೇಕು ಹಾಗೂ ಬಫರ್ ಜಾಗದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚೆರಿಕೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *