ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಸಿಎ ನಿವೇಶನ ದುರ್ಬಳಕೆ ಆರೋಪ…ಸಂಸ್ಥೆ ಮಾಲೀಕರಿಗೆ ಮುಡಾ ನೋಟೀಸ್…

ಮೈಸೂರು,ಜೂ11,Tv10 ಕನ್ನಡ

ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿ ವಸತಿಯುಕ್ತ ಕೇಂದ್ರಕ್ಕೆ ನೀಡಲಾದ ಸಿಎ ನಿವೇಶನವನ್ನ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನಲೆ ಮುಡಾ ವಲಯ ಕಚೇರಿ 4 ರ ಅಧಿಕಾರಿಗಳು ಸಂಸ್ಥೆಯ ಮಾಲೀಕರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲೆಗಳೊಂದಿಗೆ ಹಾಜರಾಗಿ ಸಮಜಾಯಿಷಿ ನೀಡುವಂತೆ ಸೂಚನೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನವನ್ನ ರದ್ದುಪಡಿಸಿ ಹಿಂದಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವಿಜಯನಗರ 2 ನೇ ಹಂತ ಸಿಎ ನಿವೇಶನ ಸಂಖ್ಯೆ 25 ನ್ನು ಕೃಷಿಕ್ ಸರ್ವೋದಯ ಫೌಂಡೇಷನ್ ತರಬೇತಿಯುಕ್ತ ವಸತಿಕೇಂದ್ರ ಕ್ಕೆ ಮಂಜೂರು ಮಾಡಲಾಗಿದೆ.ಆದರೆ ಸದರಿ ನಿವೇಶನವನ್ನ ಇಬ್ಬಾಗ ಮಾಡಿ ಅನಧಿಕೃತವಾಗಿ ನೇಹಾ ಕ್ಯಾಂಟೀನ್ ರವರಿಗಾಗಿ ಕಟ್ಟಡ ನಿರ್ಮಿಸಿ ಬಾಡಿಗೆ ನೀಡಿರುವುದು ಕಂಡು ಬಂದಿದೆ.ಅಲ್ಲದೆ ಪಕ್ಕದಲ್ಲಿರುವ ಕೆರೆಯ ಬಫರ್ ಜೋನ್ ಜಾಗವನ್ನೂ ಸಹ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡುತ್ತಿರುವುದು ಕಂಡು ಬಂದಿದೆ.ಈ ಬಗ್ಗೆ ದಾಖಲೆಗಳು Tv10 ಕನ್ನಡ ವಾಹಿನಿಗೆ ತಲುಪಿದೆ.ಈ ಆರೋಪದ ಹಿನ್ನಲೆ ವಲಯ ಕಚೇರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು ಮೇಲ್ನೋಟಕ್ಕೆ ನಿಯಮಗಳನ್ನ ಉಲ್ಲಂಘಿಸಿರುವುದು ಸಾಬೀತಾದ ಹಿನ್ನಲೆ ಸಂಸ್ಥೆ ಮುಖ್ಯಸ್ಥರಿಗೆ ನೋಟೀಸ್ ಜಾರಿ ಮಾಡಿದ್ದಾರೆ.ಸೂಕ್ತ ದಾಖಲಾತಿಗಳ ಸಮೇತ ಹಾಜರಾಗಿ ಸಮಜಾಯಿಷಿ ನೀಡಬೇಕು ಹಾಗೂ ಬಫರ್ ಜಾಗದಲ್ಲಿ ನಿರ್ಮಿಸುತ್ತಿರುವ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಎಚ್ಚೆರಿಕೆ ನೀಡಿದ್ದಾರೆ.ಇಲ್ಲದಿದ್ದಲ್ಲಿ ಸಿಎ ನಿವೇಶನ ರದ್ದುಪಡಿಸಿ ಹಿಂಪಡೆಯುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ವಾರ್ನಿಂಗ್ ನೀಡಿದ್ದಾರೆ…

Spread the love

Related post

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ…ನಂಜನಗೂಡು ESI ಆಸ್ಪತ್ರೆ ಅಧಿಕಾರಿ ಗಣೇಶ್ ವರ್ಗಾವಣೆ…

ಮಹಿಳಾ ನೌಕರರಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣ…ನಂಜನಗೂಡು ESI ಆಸ್ಪತ್ರೆ ಅಧಿಕಾರಿ…

ನಂಜನಗೂಡು,ಅ22,Tv10 ಕನ್ನಡ ಮಹಿಳಾ ನೌಕರರೊಂದಿಗೆ ಅಸಭ್ಯವಾಗಿ ಹಾಗೂ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಹೊತ್ತ ನಂಜನಗೂಡಿನ ESI ಆಸ್ಪತ್ರೆ ಹಿರಿಯ ಫಾರ್ಮೆಸಿ ಅಧಿಕಾರಿ ಗಣೇಶ್ ಗೆ…
ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಸೇವಾಶ್ರಮ ಮಕ್ಕಳ ಜೊತೆ ನಟವಸಿಷ್ಠ ಸಿಂಹ ಹುಟ್ಟುಹಬ್ಬ ಆಚರಣೆ…

ಮೈಸೂರು,ಅ21,Tv10 ಕನ್ನಡ ನಟ ವಸಿಷ್ಠಸಿಂಹ ರವರು ತಮ್ಮ ಹುಟ್ಟುಹಬ್ಬವನ್ನ ಮೈಸೂರಿನ ವಿಜಯನಗರದಲ್ಲಿರುವಸವಿ ನೆನಪು ಫೌಂಡೇಶನ್ ಸೇವಾಶ್ರಮ ದಲ್ಲಿನ ಮಕ್ಕಳ ಜೊತೆ ಆಚರಿಸಿಕೊಂಡರು. ವಸಿಷ್ಠ ಸಿಂಹ ಸ್ನೇಹ ಬಳಗದ ಸದಸ್ಯರು…
ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ಅಪರಿಚಿತ ವಾಹನ ಢಿಕ್ಕಿ…ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವು…

ನಂಜನಗೂಡು,ಅ21,Tv10 ಕನ್ನಡ ಅಪರಿಚಿತ ವಾಹನ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ…

Leave a Reply

Your email address will not be published. Required fields are marked *